ಬ್ರೇಕಿಂಗ್ ನ್ಯೂಸ್
25-03-21 01:37 pm Source: FILMIBEAT ಸಿನಿಮಾ
ಗಂಗೂಬಾಯಿ ಕಾಥಿಯಾವಾಡಿ ಸಿನಿಮಾ ಸಂಬಂಧ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿ ಮುಂಬೈನ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಟಿ ಅಲಿಯಾ ಭಟ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಗೆ ಸಮನ್ಸ್ ನೀಡಿದೆ. ಅಲಿಯಾ ಭಟ್ ಮತ್ತು ಸಂಜಯ್ ಲೀಲಾ ಬನ್ಸಾಲಿ ಅವರನ್ನು ಮೇ 21ರಂದು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಕೋರಲಾಗಿದೆ.
ಗಂಗೂಬಾಯಿ ದತ್ತು ಪುತ್ರ ಎಂದು ಹೇಳಿಕೊಳ್ಳುತ್ತಿರುವ ಬಾಬು ರಾವ್ ಷಾ ಚಿತ್ರತಂಡದ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಗಂಗೂಬಾಯಿ ಕಾಥಿಯಾವಾಡಿ ಚಿತ್ರವು ಹುಸೈನ್ ಜೈದಿ ಎನ್ನುವವರು ಬರೆದ 'ಮಾಫಿಯಾ ಕ್ವೀನ್ ಆಫ್ ಮುಂಬೈ' ಪುಸ್ತಕವನ್ನು ಆಧರಿಸಿ ಮಾಡಲಾಗುತ್ತಿದೆ.
ಈ ಪುಸ್ತಕದಲ್ಲಿ ಗಂಗೂಬಾಯಿ ಅವರನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ಅವರ ಪ್ರತಿಷ್ಠೆಗೆ ಕಳಂಕ ತರಲಾಗಿದೆ ಮತ್ತು ಸ್ವಾಭಿಮಾನದ ಹಕ್ಕನ್ನು ಉಲ್ಲಂಘಿಸಿದೆ ಎಂದು ಬಾಬು ರಾವ್ ಷಾ ಆರೋಪಿಸಿದ್ದಾರೆ. ಈ ಪುಸ್ತಕವನ್ನು ಆಧರಿಸಿ ಸಿನಿಮಾ ಮಾಡುತ್ತಿರುವ ನಿರ್ದೇಶಕ ಮತ್ತು ನಟಿಯರ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ.
ಈ ಮೊದಲು ಬಾಬು ರಾವ್ ಷಾ, ಪುಸ್ತಕವನ್ನು ಪ್ರಕಟಿಸದಂತೆ ಲೇಖಕರ ವಿರುದ್ಧ ಮುಂಬೈ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಬಾಬು ರಾವ್ ತಾವೆ ಗಂಗೂಬಾಯಿ ಅವರ ದತ್ತು ಪುತ್ರ ಎಂದು ದೃಢೀಕರಿಸಲು ಯಾವುದೇ ಆಧಾರಗಳಿಲ್ಲ. ಹೇಗೆ ಆರೋಪ ಮಾಡುತ್ತಾರೆ ಎಂದು ಲೇಖಕರು ಮತ್ತು ಸಿನಿಮಾ ನಿರ್ಮಾಪಕರು ನ್ಯಾಯಾಲಯಕ್ಕೆ ಸೂಚಿಸಿದ್ದಾರೆ. ಗಂಗೂಬಾಯಿ ಕಾಥಿಯಾವಾಡಿ ಸಿನಿಮಾದಲ್ಲಿ ಅಲಿಯಾ ಭಟ್ ಗಂಗೂಬಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಅಜಯ್ ದೇವಗನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಹುನಿರೀಕ್ಷೆಯ ಸಿನಿಮಾ ಜುಲೈ 30ಕ್ಕೆ ತೆರೆಗೆ ಬರುತ್ತಿದೆ.
This News Article Is A Copy Of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm