ಬ್ರೇಕಿಂಗ್ ನ್ಯೂಸ್
26-03-21 11:05 am Source: FILMIBEAT ಸಿನಿಮಾ
ಇತ್ತೀಚೆಗೆ ಬಿಡುಗಡೆ ಆದ ತೆಲುಗು ಸಿನಿಮಾದಲ್ಲಿ ಸ್ವಾತಂತ್ರ್ಯ ವೀರರಿಗೆ ಅವಮಾನ ಮಾಡಲಾಗಿದೆ. ಕೂಡಲೇ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದು ತೆಲಂಗಾಣ ಶಿವಸೇನಾ ರಾಜ್ಯ ಘಟಕ ಒತ್ತಾಯಿಸಿದೆ.
ನವೀನ್ ಪೋಲಿಶೆಟ್ಟಿ ನಟಿಸಿರುವ 'ಜಾತಿರತ್ನಾಲು' ಸಿನಿಮಾದ ವಿರುದ್ಧ ತೆಲಂಗಾಣ ಶಿವಸೇನಾ ಆಕ್ರೋಶಗೊಂಡಿದ್ದು, ಸಿನಿಮಾವನ್ನು ಬ್ಯಾನ್ ಮಾಡಬೇಕು, ನಿರ್ದೇಶಕ, ನಟ, ನಿರ್ಮಾಪಕ, ಸಂಭಾಷಣೆ ಬರೆದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ಸಹ ಸಲ್ಲಿಸಲಾಗಿದೆ.
'ಜಾತಿರತ್ನಾಲು' ಸಿನಿಮಾದ ದೃಶ್ಯವೊಂದರಲ್ಲಿ ಮೂವರು ಮುಖ್ಯ ನಟರು ಜೈಲು ಸೇರುತ್ತಾರೆ. ಜೈಲಿನಲ್ಲಿ ನಡೆವ ಹಾಸ್ಯ ಸನ್ನಿವೇಶವೊಂದರಲ್ಲಿ ನಾಯಕ ನವೀನ್ ಪೋಲಿಶೆಟ್ಟಿ ಪಾತ್ರವು ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಹಾಡಲಾಗಿದ್ದ ರಾಮ್ಪ್ರಸಾದ್ ಬಿಸ್ಮಿಲ್ ಬರೆದಿರುವ 'ಸರ್ಫರೋಶಿ ಕೀ ತಮನ್ನಾ ಅಬ್ ಹಮಾರೆ ದಿಲ್ ಮೆ ಹೇ' ಹಾಡನ್ನು ತಿರುಚಿ ಹಾಡುತ್ತಾನೆ.
'ಸರ್ಫರೋಶಿ ಕೀ ತಮನ್ಹಾ, ಸಮಂತಾ, ರಶ್ಮಿಕಾ ತೀನೋ ಸಾಥ್ ಮೆ ಹೇ' ಎಂದು ಹಾಡನ್ನು ತಿರುಚಿ ಹಾಡಲಾಗಿದೆ. ಇದು ಶಿವಸೇನಾ ಸದಸ್ಯರನ್ನು ಕೆರಳಿಸಿದೆ. ಸಿನಿಮಾದ ವಿರುದ್ಧ ತೆಲಂಗಾಣ ಶಿವಸೇನಾ ರಾಜ್ಯ ಘಟಕದ ಕಾರ್ಯದರ್ಶಿ ಭೂಮ ಗಂಗಾಧರ್, ಸದಸ್ಯರಾದ ಶ್ರೀನಿವಾಸ ಆಚಾರಿ, ಕಂಜರಾಲ ಶ್ರೀಧರ್ ಆಚಾರಿ, ರಿತೇಶ್, ಸುರೇಶ್ ಮತ್ತು ವೇಣು ಅವರುಗಳು ಕಾಂಚಿಗುಡ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. 'ಸಿನಿಮಾದ ನಿರ್ದೇಶಕ, ನಿರ್ಮಾಪಕ, ಸಂಗೀತ ನಿರ್ದೇಶಕ ಈಗಿನ ಯುವಸಮುದಾಯಕ್ಕೆ ಕೆಟ್ಟ ಸಂದೇಶ ನೀಡುತ್ತಿದ್ದಾರೆ ಹಾಗಾಗಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತಿದ್ದೇವೆ' ಎಂದಿದ್ದಾರೆ ದೂರು ನೀಡಿದ ತೆಲಂಗಾಣ ಶಿವಸೇನಾ ಸದಸ್ಯರು.
ನವೀನ್ ಪೋಲಿಶೆಟ್ಟಿ, ರಾಹುಲ್ ರಾಮಕೃಷ್ಣ, ಪ್ರಿಯದರ್ಶನ್, ಫಾರಿಯಾ ಅಬ್ದುಲ್ಲಾ, ಬ್ರಹ್ಮಾನಂದಂ ಇನ್ನೂ ಹಲವರು ನಟಿಸಿರುವ 'ಜಾತಿರತ್ನಾಲು' ಹಾಸ್ಯ ಸಿನಿಮಾವನ್ನು ಮಾರ್ಚ್ 11 ರಂದು ಬಿಡುಗಡೆ ಆಗಿದ್ದು ಸಖತ್ ಹಿಟ್ ಆಗಿದೆ. ಸಿನಿಮಾವನ್ನು ಅನುದೀಪ್ ಕೆವಿ ನಿರ್ದೇಶನ ಮಾಡಿದ್ದಾರೆ
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm