ಬ್ರೇಕಿಂಗ್ ನ್ಯೂಸ್
30-03-21 03:43 pm Source: FILMIBEAT ಸಿನಿಮಾ
ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ವಕೀಲ್ ಸಾಬ್ ಚಿತ್ರದ ಟ್ರೈಲರ್ ನೋಡಲು ಸೇರಿದ್ದ ಅಸಂಖ್ಯಾತ ಅಭಿಮಾನಿಗಳ ನಡುವೆ ನೂಕುನುಗ್ಗಲು ಉಂಟಾಗಿ ಭಾರಿ ಗದ್ದಲ ಸಂಭವಿಸಿದೆ. ವಿಶಾಖಪಟ್ಟಣಂನ ಸಂಗಮ್ ಶರತ್ ಚಿತ್ರಮಂದಿರದಲ್ಲಿ ಈ ಘಟನೆ ನಡೆದಿದೆ. ಟ್ರೈಲರ್ ರಿಲೀಸ್ ಆಗುತ್ತಿದ್ದಂತೆ ಪವನ್ ಕಲ್ಯಾಣ್ ನೋಡಲು ಅಭಿಮಾನಿಗಳು ಒಮ್ಮೆಗೆ ಚಿತ್ರಮಂದಿರದ ಒಳಗೆ ನುಗ್ಗಿದ್ದಾರೆ.
ಈ ಸಮಯದಲ್ಲೇ ತಳ್ಳಾಟ, ನೂಕಾಟ ನಡೆದು ಚಿತ್ರಮಂದಿರದ ಗಾಜಿನ ಗೋಡೆ ಪುಡಿಪುಡಿ ಆಗಿದೆ. ಮಾರ್ಚ್ 29 ಸಂಜೆ 4 ಗಂಟೆಗೆ ಟ್ರೈಲರ್ ಲಾಂಚ್ ಆಗಿದ್ದು, ಈ ವೇಳೆ ನೂಕುನುಗ್ಗಲು ನಡೆದಿದೆ. ಟ್ರೈಲರ್ಗಾಗಿ ಅಭಿಮಾನಿಗಳು ಬೆಳಗ್ಗೆಯಿಂದ ಚಿತ್ರಮಂದಿರದ ಮುಂದೆ ಕ್ಯುನಿಂತಿದ್ದರು. ಪವನ್ ಕಲ್ಯಾಣ್ ಫೋಟೋಗೆ ಪೂಜೆ ಮಾಡಿ ಸಂಭ್ರಮಿಸಿದ್ದಾರೆ.
ಬಳಿಕ 4ಗಂಟೆೆಗೆ ಟ್ರೈಲರ್ ವೀಕ್ಷಣೆಗೆ ಚಿತ್ರಮಂದಿರದ ಒಳಗೆ ನುಗ್ಗಲು ಒಮ್ಮೆಗೆ ಮುಗಿಬಿದ್ದಿದ್ದಾರೆ. ಗಾಜು ಒಡೆದು ಪುಡಿಪುಡಿ ಆದರೂ ಲೆಕ್ಕಿಸದೆ ಅಭಿಮಾನಿಗಳು ಪವನ್ ಕಲ್ಯಾಣ್ ನೋಡಲು ಮುನ್ನುಗ್ಗಿದ್ದಾರೆ. ಹೋಳಿ ಹಬ್ಬದ ಪ್ರಯುಕ್ತ ಚಿತ್ರತಂಡ ವಕೀಲ್ ಸಾಬ್ ಟ್ರೈಲರ್ ರಿಲೀಸ್ ಮಾಡಲು ಸಿನಿಮಾ ಪ್ಲಾನ್ ಮಾಡಿ, ಬಿಡುಗಡೆ ಮಾಡಿದೆ.
ಸಿನಿಮಾ ಜೊತೆಗೆ ರಾಜಕೀಯದಲ್ಲೂ ಸಕ್ರಿಯರಾಗಿರುವ ಪವನ್ ಕಲ್ಯಾಣ್ ಎರಡು ವರ್ಷಗಳ ಬಳಿಕ ತೆರೆಮೇಲೆ ಬರ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ವಕೀಲ್ ಸಾಬ್ ಸದ್ಯದಲ್ಲೇ ತೆರೆಗೆ ಬರಲಿದೆ. ಅಂದಹಾಗೆ ವಕೀಲ್ ಸಾಬ್ ಹಿಂದಿಯ ಅಮಿತಾಬ್ ಬಚ್ಚನ್ ನಟನೆಯ ಪಿಂಕ್ ಸಿನಿಮಾದ ರಿಮೇಕ್.
This News Article Is A Copy Of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm