ಬ್ರೇಕಿಂಗ್ ನ್ಯೂಸ್
31-07-20 03:26 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ನಟನ ಮಗಳ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಯುವಕನನ್ನು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಮುಂಬೈನ ಮಲಾಡ್ ನಿವಾಸಿ ಕುಮೇಲ್ ಹನೀಫ್ ಪಟಾನಿ (25) ಎಂದು ಗುರುತಿಸಲಾಗಿದೆ. ಒಂದು ವೇಳೆ ಹಣ ಕೊಡದಿದ್ದರೆ ಖಾಸಗಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ಬಾಲಿವುಡ್ ನಟಿಯ ಮಗಳಿಗೆ ಆರೋಪಿ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿದ್ದನು. ಕಾಲೇಜು ದಿನಗಳಿಂದ ನೀನು ನನಗೆ ಗೊತ್ತು. ನಿನ್ನ ಕೆಲವು ಖಾಸಗಿ ಫೋಟೋಗಳು ನನ್ನ ಬಳಿ ಇವೆ. ಹೀಗಾಗಿ ನಾನು ಕೇಳಿದಷ್ಟು ಹಣ ಕೊಡಬೇಕು. ಒಂದು ವೇಳೆ ಹಣ ಕೊಡದಿದ್ದರೆ ನಿನ್ನ ಖಾಸಗಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದನು.
ಅಲ್ಲದೇ ಆರೋಪಿ ಮೆಸೇಜ್ ಮಾಡಿದ ನಂತರ ತಾನು ಯಾರೆಂದು ಗೊತ್ತಾಗಬಾರದೆಂದು ತಕ್ಷಣ ಅವುಗಳನ್ನು ಡಿಲೀಟ್ ಮಾಡಿದ್ದಾನೆ. ಸ್ವಲ್ಪ ದಿನದ ನಂತರ ನಟನ ಮಗಳಿಗೆ ಫೋನ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಕೊನೆಗೆ ಆರೋಪಿಯ ಬೆದರಿಕೆಗೆ ಹೆದರಿ ನಟನ ಮಗಳು 15,000 ರಿಂದ 20,000 ರೂಪಾಯಿ ನೀಡಿದ್ದಾರೆ. ಆದರೆ ಆರೋಪಿ ಮತ್ತೆ ಹೆಚ್ಚಿನ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ಆಗ ಆಕೆ ತನ್ನ ಪೋಷಕರಿಗೆ ಈ ಬಗ್ಗೆ ತಿಳಿಸಿದ್ದಾರೆ ಎಂದು ಇನ್ಸ್ಪೆಕ್ಟರ್ ಹೇಳಿದ್ದಾರೆ.
ಪೋಷಕರು ಬಂಗೂರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಆರೋಪಿ ಪಟಾನಿ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ಸಹೋದರಿ ಮತ್ತು ಬಾಲಿವುಡ್ ನಟನ ಮಗಳು ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದು, ಇಬ್ಬರು ಸ್ನೇಹಿತರು ಕೂಡ ಆಗಿದ್ದರು. ಆದರೂ ಆರೋಪಿ ಈ ರೀತಿ ಹಣಕ್ಕಾಗಿ ನಟನ ಮಗಳಿಗೆ ಬ್ಲ್ಯಾಕ್ಮೇಲೆ ಮಾಡಿದ್ದಾನೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.
02-06-25 10:43 pm
Bangalore Correspondent
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 10:59 pm
Mangalore Correspondent
ಜೇನುಗೂಡಿಗೆ ಕಲ್ಲು ಹೊಡೆಯಬೇಡಿ, ಸರಕಾರವೇ ಸಮಾಜದ ಸ್ವ...
02-06-25 10:54 pm
ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದ...
02-06-25 10:49 pm
ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ! ಮಹೇಶ್ ಶೆಟ್ಟಿ ತಿ...
02-06-25 09:08 pm
Mangalore, Dr Kalladka Prabhakar Bhat, FIR: ಸ...
02-06-25 12:51 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm