ಬ್ರೇಕಿಂಗ್ ನ್ಯೂಸ್
01-04-21 12:12 pm Source: FILMIBEAT Shruthi Gk ಸಿನಿಮಾ
ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಜೀವಮಾನ ಸಾಧನೆಗಾಗಿ ಕೇಂದ್ರ ಸರ್ಕಾರ ನೀಡುವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಈ ಬಾರಿ ಸೂಪರ್ ಸ್ಟಾರ್ ರಜನಿಕಾಂತ್ ಆಯ್ಕೆಯಾಗಿದ್ದಾರೆ.
2020ನೇ ಸಾಲಿನ 51ನೇ ಫಾಲ್ಕೆ ಪ್ರಶಸ್ತಿ ಇದಾಗಿದೆ. ಸುಮಾರು ನಾಲ್ಕು ದಶಕಗಳಿಗೂ ಅಧಿಕ ಕಾಲ ರಂಜಿಸಿ, ಸ್ಫೂರ್ತಿ ತುಂಬಿರುವ ತಲೈವಾ ರಜನಿಕಾಂತ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದಿರುವುದು ಅವರ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಭಾರಿ ಸಂತಸ ತಂದಿದೆ.
ರಜನಿಕಾಂತ್ ಅವರಿಗೆ ಫಾಲ್ಕೆ ಪ್ರಶಸ್ತಿ ಬಂದಿರುವ ಬಗ್ಗೆ ಮಾಹಿತಿ ಮತ್ತು ಪ್ರಸಾರಾಂಗ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ. ಮಾಹಿತಿ ಹಂಚಿಕೊಳ್ಳುವ ಜೊತೆಗೆ ರಜನಿಕಾಂತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಶ್ರೇಷ್ಠ ನಟ ರಜನಿಕಾಂತ್ 2020 ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಲು ತುಂಬಾ ಸಂತೋಷವಾಗುತ್ತಿದೆ. ನಟ, ನಿರ್ಮಾಪಕ ಮತ್ತು ಚಿತ್ರಕಥೆಗಾರನಾಗಿ ಅವರ ಕೊಡುಗೆ ಅಪಾರ' ಎಂದು ಟ್ವೀಟ್ ಮಾಡಿದ್ದಾರೆ.
ಸಿನಿಮಾ ಕ್ಷೇತ್ರದಲ್ಲಿ ನೀಡುವ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಜೀವಮಾನ ಸಾಧನೆಗಾಗಿ ಭಾರತೀಯ ಸಿನಿಮಾ ರಂಗದ ಪಿತಾಮಹಾ ದಾದಾಸಾಹೇಬ್ ಫಾಲ್ಕೆ ಹೆಸರಿಲ್ಲಿ ಭಾರತ 1969ರಿಂದ ಪ್ರಶಸ್ತಿ ನೀಡುತ್ತಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಚಲನಚಿತ್ರೋತ್ಸವಗಳ ನಿರ್ದೇಶನಾಲಯದಿಂದ ಆಯೋಜಿಸಲಾಗುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ ಸ್ವರ್ಣ ಕಮಲ ಪದಕ, ಶಾಲು ಮತ್ತು 10 ಲಕ್ಷ ನಗದು ಬಹುಮಾನ ಒಳಗೊಂಡಿರುತ್ತದೆ.
This News Article Is A Copy Of FILMIBEAT
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm