ಬ್ರೇಕಿಂಗ್ ನ್ಯೂಸ್
01-04-21 12:12 pm Source: FILMIBEAT Shruthi Gk ಸಿನಿಮಾ
ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಜೀವಮಾನ ಸಾಧನೆಗಾಗಿ ಕೇಂದ್ರ ಸರ್ಕಾರ ನೀಡುವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಈ ಬಾರಿ ಸೂಪರ್ ಸ್ಟಾರ್ ರಜನಿಕಾಂತ್ ಆಯ್ಕೆಯಾಗಿದ್ದಾರೆ.
2020ನೇ ಸಾಲಿನ 51ನೇ ಫಾಲ್ಕೆ ಪ್ರಶಸ್ತಿ ಇದಾಗಿದೆ. ಸುಮಾರು ನಾಲ್ಕು ದಶಕಗಳಿಗೂ ಅಧಿಕ ಕಾಲ ರಂಜಿಸಿ, ಸ್ಫೂರ್ತಿ ತುಂಬಿರುವ ತಲೈವಾ ರಜನಿಕಾಂತ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದಿರುವುದು ಅವರ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಭಾರಿ ಸಂತಸ ತಂದಿದೆ.
ರಜನಿಕಾಂತ್ ಅವರಿಗೆ ಫಾಲ್ಕೆ ಪ್ರಶಸ್ತಿ ಬಂದಿರುವ ಬಗ್ಗೆ ಮಾಹಿತಿ ಮತ್ತು ಪ್ರಸಾರಾಂಗ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ. ಮಾಹಿತಿ ಹಂಚಿಕೊಳ್ಳುವ ಜೊತೆಗೆ ರಜನಿಕಾಂತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಶ್ರೇಷ್ಠ ನಟ ರಜನಿಕಾಂತ್ 2020 ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಲು ತುಂಬಾ ಸಂತೋಷವಾಗುತ್ತಿದೆ. ನಟ, ನಿರ್ಮಾಪಕ ಮತ್ತು ಚಿತ್ರಕಥೆಗಾರನಾಗಿ ಅವರ ಕೊಡುಗೆ ಅಪಾರ' ಎಂದು ಟ್ವೀಟ್ ಮಾಡಿದ್ದಾರೆ.
ಸಿನಿಮಾ ಕ್ಷೇತ್ರದಲ್ಲಿ ನೀಡುವ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಜೀವಮಾನ ಸಾಧನೆಗಾಗಿ ಭಾರತೀಯ ಸಿನಿಮಾ ರಂಗದ ಪಿತಾಮಹಾ ದಾದಾಸಾಹೇಬ್ ಫಾಲ್ಕೆ ಹೆಸರಿಲ್ಲಿ ಭಾರತ 1969ರಿಂದ ಪ್ರಶಸ್ತಿ ನೀಡುತ್ತಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಚಲನಚಿತ್ರೋತ್ಸವಗಳ ನಿರ್ದೇಶನಾಲಯದಿಂದ ಆಯೋಜಿಸಲಾಗುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ ಸ್ವರ್ಣ ಕಮಲ ಪದಕ, ಶಾಲು ಮತ್ತು 10 ಲಕ್ಷ ನಗದು ಬಹುಮಾನ ಒಳಗೊಂಡಿರುತ್ತದೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm