ಬ್ರೇಕಿಂಗ್ ನ್ಯೂಸ್
05-04-21 12:26 pm source: FILMIBEAT ಸಿನಿಮಾ
ಬಾಲಿವುಡ್ ನಟ ಅಕ್ಷಯ್ ಕುಮಾರ್ಗೆ ಕೊರೊನಾ ವೈರಸ್ ಪಾಸಿಟಿವ್ ಬಂದ ಮರುದಿನ 'ರಾಮ್ ಸೇತು' ಚಿತ್ರದ 45 ಸಿಬ್ಬಂದಿಗೆ ಸೋಂಕು ತಗುಲಿರುವುದು ಬಹಿರಂಗವಾಗಿದೆ. ಸೋಮವಾರ ಮುಂಬೈನಲ್ಲಿ 'ರಾಮ್ ಸೇತು' ಚಿತ್ರೀಕರಣ ನಿಗದಿಯಾಗಿತ್ತು. ಅದಕ್ಕೂ ಮುಂಚೆ ಕಡ್ಡಾಯವಾಗಿ ಚಿತ್ರದ ಎಲ್ಲಾ ಸಿಬ್ಬಂದಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ 45 ಜನರಿಗೆ ಸೋಂಕು ತಗುಲಿರುವುದು ತಿಳಿದು ಬಂದಿದೆ.
ವರದಿಗಳ ಪ್ರಕಾರ, 100 ಜನರನ್ನು ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ 45 ಸಿಬ್ಬಂದಿಗೆ ಸೋಂಕು ಅಂಟಿಕೊಂಡಿದೆ. ಈ ಹಿನ್ನೆಲೆ ಮುಂಬೈನಲ್ಲಿ ನಡೆಯಬೇಕಿದ್ದ ಶೂಟಿಂಗ್ ರದ್ದುಗೊಳಿಸಲಾಗಿದೆ.
ಅಕ್ಷಯ್ ಕುಮಾರ್ ಅವರಿಗೆ ಸೋಂಕು ತಗುಲಿದ ನಂತರ ನಿರ್ಮಾಪಕ ವಿಕ್ರಮ್ ಮಲ್ಹೋತ್ರಾ ಚಿತ್ರೀಕರಣ ಮುಂದುವರಿಸಲು ತೀರ್ಮಾನಿಸಿದರು. ಹಾಗಾಗಿ, ಎಲ್ಲಾ ಸಿಬ್ಬಂದಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯಗೊಳಿಸಿದರು. ಈ ವೇಳೆ ಸಿಬ್ಬಂದಿಗಳಿಗೂ ಕೊವಿಡ್ ತಗುಲಿರುವುದು ಬಹಿರಂಗವಾಗಿದೆ. ಮಾರ್ಚ್ 18 ರಂದು ಅಯೋಧ್ಯೆಯಲ್ಲಿ ರಾಮ್ ಸೇತು ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿತ್ತು.
ಮಾರ್ಚ್ 30 ರಿಂದ ಮುಂಬೈನಲ್ಲಿ ಶೂಟಿಂಗ್ ಪ್ರಾರಂಭವಾಗಿತ್ತು. ಇದೀಗ, ಕೊರೊನಾ ಕಾರಣದಿಂದ ಚಿತ್ರೀಕರಣ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ರಾಮ್ ಸೇತು ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಪುರಾತತ್ವ ಶಾಸ್ತ್ರಜ್ಞ ಪಾತ್ರ ನಿರ್ವಹಿಸುತ್ತಿದ್ದಾರೆ. ಜಾಕ್ವಲಿನ್ ಫರ್ನಾಂಡೀಸ್ ಮತ್ತು ನುಸ್ರುತ್ ಭರುಚ್ಚಾ ಚಿತ್ರದ ನಾಯಕಿಯಾಗಿದ್ದಾರೆ. ಅಭಿಷೇಕ್ ಶರ್ಮಾ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಅರುಣಾ ಭಾಟಿಯಾ, ವಿಕ್ರಮ್ ಮಲ್ಹೋತ್ರಾ ಜೊತೆ ಸೇರಿ ಲೈಕಾ ಪ್ರೊಡಕ್ಷನ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ.

ಇನ್ನು ಹಲವು ಸೆಲೆಬ್ರಿಟಿಗಳು ಕೊರೊನಾ ವೈರಸ್ಗೆ ತುತ್ತಾಗಿದ್ದಾರೆ. ಅಕ್ಷಯ್ ಕುಮಾರ್ಗೂ ಮೊದಲು ಆಲಿಯಾ ಭಟ್, ಫಾತಿಮಾ ಸನಾ ಶೇಖ್, ಪರೇಶ್ ರಾವಲ್, ಕಾರ್ತಿಕ್ ಆರ್ಯನ್, ರಣ್ಬೀರ್ ಕಪೂರ್, ರೋಹಿತ್ ಸರಾಫ್ ಕೊರೊನಾ ಸೋಂಕಿಗೂ ಒಳಗಾಗಿದ್ದರು. ಈ ಕಡೆ ದಕ್ಷಿಣದಲ್ಲಿ ಕನ್ನಡ ನಟ ಪ್ರಜ್ವಲ್ ದೇವರಾಜ್ ಮತ್ತು ಪತ್ನಿ ರಾಗಿಣಿಗೆ, ತಮಿಳು ನಟಿ ನಿವೇತಾ ಥಾಮಸ್, ತೆಲುಗಿನ ಹಿರಿಯ ನಿರ್ಮಾಪಕ ಅಲ್ಲು ಅರವಿಂದ್ಗೂ ಸೋಂಕು ತಗುಲಿದೆ.
This News Article Is A Copy Of FILMIBEAT
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm