ಬ್ರೇಕಿಂಗ್ ನ್ಯೂಸ್
07-04-21 04:23 pm Headline Karnataka News Network ಸಿನಿಮಾ
ಚೆನ್ನೈ, ಎ.7 ; ತಮಿಳು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಖ್ಯಾತ ನಟ ಶರತ್ ಕುಮಾರ್ ಹಾಗೂ ಅವರ ಪತ್ನಿ, ನಟಿ ರಾಧಿಕಾಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಚೆನ್ನೈ ವಿಶೇಷ ನ್ಯಾಯಾಲಯ ಒಂದು ವರ್ಷ ಶಿಕ್ಷೆ ವಿಧಿಸಿದೆ.
ಶರತ್ ಕುಮಾರ್ ಹಾಗೂ ನಟಿ ರಾಧಿಕಾ ದಂಪತಿ ಮೇಲಿನ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಚೆನ್ನೈನ ವಿಶೇಷ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸಾರಥಿ, ರಾಜಕುಮಾರ್, ಸೀತಾರಾಮ ಕಲ್ಯಾಣ, ಸಂತೆಯಲ್ಲಿ ನಿಂತ ಕಬೀರ ಕನ್ನಡ ಸಿನಿಮಾಗಳಲ್ಲಿ ಶರತ್ ಕುಮಾರ್ ನಟಿಸಿದ್ದಾರೆ. ನಟಿ ರಾಧಿಕಾ ಅವರು ವಿಷ್ಣುವರ್ಧನ್, ದ್ವಾರಕೀಶ್ ಸೇರಿ ಹಲವರ ಜೊತೆ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.
ರ್ಯಾಡಿಯೆಂಟ್ ಮೀಡಿಯಾ ದೂರಿನ ಪ್ರಕಾರ, ಪಾಲುದಾರಿಕೆ ಹೊಂದಿದ್ದ ಶರತ್ ಕುಮಾರ್, ರಾಧಿಕಾ, ಲಿಸ್ಟಿನ್ ಅವರು ರ್ಯಾಡಿಯೆಂಟ್ ಸಂಸ್ಥೆಯಿಂದ 1.50 ಕೋಟಿ ರೂಪಾಯಿ ಹಣ ಸಾಲ ಪಡೆದಿದ್ದರು. ಸಾಲಕ್ಕೆ ಭದ್ರತೆಯಾಗಿ ಎರಡು ಚೆಕ್ಗಳನ್ನು ನೀಡಿದ್ದರು. ನಂತರ ಶರತ್ ಕುಮಾರ್ 50 ಲಕ್ಷ ರೂಪಾಯಿ ಕೈಸಾಲ ಪಡೆದು ಹತ್ತು ಲಕ್ಷ ಮೌಲ್ಯದ ಐದು ಚೆಕ್ಗಳನ್ನು ಭದ್ರತೆಯಾಗಿ ನೀಡಿದ್ದರು. ಆದರೆ ಚೆಕ್ಗಳನ್ನು ನಗದು ಮಾಡಿಕೊಳ್ಳಲು ಬ್ಯಾಂಕಿಗೆ ಸಲ್ಲಿಸಿದಾಗ ಏಳೂ ಚೆಕ್ಗಳು ಬೌನ್ಸ್ ಆಗಿವೆ. ಹಾಗಾಗಿ ಶರತ್ ಕುಮಾರ್, ರಾಧಿಕಾ ಹಾಗೂ ಲಿಸ್ಟಿನ್ ವಿರುದ್ಧ ಸಿನಿಮಾ ಫೋನ್ ಯಾನ್ ಸ್ ಸಂಸ್ಥೆಯಾದ ರ್ಯಾಡಿಯಂಟ್ ಮೀಡಿಯಾ ಸಂಸ್ಥೆ ದೂರು ದಾಖಲಿಸಿತ್ತು.
2015 ರಲ್ಲಿ ಶರತ್ ಕುಮಾರ್, ರಾಧಿಕಾ ಒಡೆತನದ 'ಮ್ಯಾಜಿಕ್ ಫ್ರೇಮ್ಸ್' ಸಂಸ್ಥೆಯಿಂದ 'ಇದು ಎನ್ನ ಮಾಯಂ' ಹೆಸರಿನ ತಮಿಳು ಸಿನಿಮಾ ನಿರ್ಮಾಣ ಮಾಡಲಾಗಿತ್ತು. ಸಿನಿಮಾವನ್ನು ಎ.ಎಲ್.ವಿಜಯ್ ನಿರ್ದೇಶಿಸಿದ್ದರು. ಸಿನಿಮಾದಲ್ಲಿ ಕೀರ್ತಿ ಸುರೇಶ್, ನಟ ವಿಕ್ರಂ ಪ್ರಭು, ಕನ್ನಡದ ನಟಿ ಕಾವ್ಯಾ ಶೆಟ್ಟಿ, ನಾಸರ್ ಅವರುಗಳು ನಟಿಸಿದ್ದರು. ಈ ಸಿನಿಮಾ ನಿರ್ಮಾಣಕ್ಕಾಗಿಯೇ ಶರತ್ ಕುಮಾರ್ ರ್ಯಾಡಿಯೆಂಟ್ ಸಂಸ್ಥೆಯಿಂದ 2 ಕೋಟಿ ಹಣ ಸಾಲ ಪಡೆದಿದ್ದರು.
The Special Court trying cases against MP and MLAs on Wednesday convicted actor couple Sarathkumar, Radhika and one other person in a 2018 cheque bounce case and sentenced them to one year's imprisonment. The court also imposed a penalty of Rs 5 crores in connection with the case.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm