ಬ್ರೇಕಿಂಗ್ ನ್ಯೂಸ್
09-04-21 03:42 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ಪಾಸಿಟಿವ್ ವರದಿ ಬಂದ ಕಾರಣ ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅರ್ಜುನ್ ಜನ್ಯ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ವರ್ಷ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತ ಸಂಭವಿಸಿದ್ದು, ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಘಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಈ ಸುದ್ದಿ ಜನ್ಯ ಅಭಿಮಾನಿಗಳಿಗೆ, ಆಪ್ತರಿಗೆ ಮತ್ತು ಕುಟುಂಬದವರಿಗೆ ಶಾಕ್ ನೀಡಿತ್ತು. ಬಳಿಕ ಚೇತರಿಸಿಕೊಂಡು ಮತ್ತೆ ಕೆಲಸಕ್ಕೆ ಹಾಜರಾಗಿದ್ದರು.
ಸಂಗೀತ ಕೆಲಸಗಳ ಜೊತೆಗೆ ಕಿರುತೆರೆಯಲ್ಲೂ ಬ್ಯುಸಿ ಇರುವ ಅರ್ಜುನ್ ಜನ್ಯ ಸದ್ಯ ಡಾನ್ಸ್ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿ ಕಾಣಿಸಿಕೊಳ್ಳುತ್ತಿದ್ದರು. ಇದೀಗ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾದ ಜೊತೆ ಮಾತನಾಡಿದ ಅರ್ಜುನ್ ಜನ್ಯ, 'ತಡವಾಗಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿತು. ನಂತರ ಕೊರೊನಾ ಪರೀಕ್ಷೆ ಮಾಡಿಸಿದಾಗ ವರದಿ ಪಾಸಿಟಿವ್ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಾನು ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದೇನೆ' ಎಂದಿದ್ದಾರೆ.

ಸುರಕ್ಷತಾ ಪ್ರೋಟೋಕಾಲ್ ಅನುಸರಿಸಿದ್ದೇವೆ, ತುಂಬಾ ಜಾಗರೂಕರಾಗಿ ಇದ್ದರೂ ಸಹ ಹೇಗೆ ಕೊರೊನಾ ವೈರಸ್ ಬಂದಿದೆ ಎನ್ನುವುದು ಖಚಿತವಿಲ್ಲ ಎಂದಿದ್ದಾರೆ. ಶೀಘ್ರದಲ್ಲೇ ಚೇತರಿಸಿಕೊಂಡು ಮನೆಗೆ ಮರಳುತ್ತೇನೆ. ವೈದ್ಯರ ಸಲಹೆ ಮೇರೆಗೆ ಮತ್ತೆ ಕೆಲಸಕ್ಕೆ ತೆರಳುವುದಾಗಿ ಹೇಳಿದ್ದಾರೆ.
ಕನ್ನಡ ಚಿತ್ರರಂಗದ ಬಹು ಬೇಡಿಕೆಯ ಸಂಗೀತ ನಿರ್ದೇಶಕರಲ್ಲಿ ಒಬ್ಬರಾಗಿರುವ ಅರ್ಜುನ್ ಜನ್ಯ ಸಾಕಷ್ಟು ಹಿಟ್ ಸಿನಿಮಾಗಳಿಗೆ ಹಿಟ್ ಹಾಡುಗಳನ್ನು ನೀಡಿದ್ದಾರೆ. ಇತ್ತೀಚಿಗೆ ರಿಲೀಸ್ ಆದ ದರ್ಶನ್ ನಟನೆಯ ಸೂಪರ್ ಹಿಟ್ ರಾಬರ್ಟ್ ಸಿನಿಮಾಗೂ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ.
This News Article Is A Copy Of FILMIBEAT
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am