ಬ್ರೇಕಿಂಗ್ ನ್ಯೂಸ್
10-04-21 06:57 pm Source: FILMIBEAT ಸಿನಿಮಾ
ಬಾಲಿವುಡ್ ನಟ ಅಜಯ್ ದೇವಗನ್ ನಿರ್ದೇಶನದಲ್ಲಿ ತಯಾರಾಗುತ್ತಿರುವ 'ಮೇಡೇ' ಸಿನಿಮಾದ ಚಿತ್ರೀಕರಣ ಮುಂದೂಡಿಕೆಯಾಗಿದೆ. ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ನಿಗದಿಯಾಗಿದ್ದ ಶೂಟಿಂಗ್ ತಾತ್ಕಾಲಿಕವಾಗಿ ಮುಂದಕ್ಕೆ ಹಾಕಲಾಗಿದೆ. 2020ರ ಡಿಸೆಂಬರ್ ತಿಂಗಳಲ್ಲಿ ಸೆಟ್ಟೇರಿದ್ದ 'ಮೇಡೇ' ಸಿನಿಮಾ ಅದಾಗಲೇ ಕೆಲವು ದೃಶ್ಯಗಳ ಚಿತ್ರೀಕರಣ ಮಾಡಿದೆ. ಆದರೆ, ಕೋವಿಡ್ ಕಾರಣದಿಂದ ಶೂಟಿಂಗ್ ಸ್ಥಗಿತಗೊಂಡಿತ್ತು.
ಅಂದ್ಹಾಗೆ, ಏಪ್ರಿಲ್ ಕೊನೆಯಲ್ಲಿ ದೋಹಾದಲ್ಲಿ ಶೂಟಿಂಗ್ ಶುರು ಮಾಡಲು ಎಲ್ಲಾ ತಯಾರಿ ನಡೆದಿತ್ತು. ಈ ವೇಳೆ ಅಜಯ್ ದೇವಗನ್ ಜೊತೆ ಅಮಿತಾಭ್ ಬಚ್ಚನ್, ನಾಯಕಿ ನಟಿ ರಕುಲ್ ಪ್ರೀತ್ ಸಿಂಗ್ ಸಹ ಪಾಲ್ಗೊಳ್ಳಬೇಕಿತ್ತು.
ಸದ್ಯದ ಮಾಹಿತಿ ಪ್ರಕಾರ, ಮೇಡೇ ಚಿತ್ರದ ಪ್ರಮುಖ ದೃಶ್ಯಗಳ ಚಿತ್ರೀಕರಣ ಮುಗಿದಿದೆ. ದೋಹಾದಲ್ಲಿ ಮೂರು ದಿನಗಳ ಶೂಟಿಂಗ್ ಹಾಗೂ ಕತಾರ್ನಲ್ಲಿ ಕೊನೆಯ ಹಂತದ ಚಿತ್ರೀಕರಣದ ಬಳಿಕ ಸಿನಿಮಾ ಮುಗಿಸುವ ಯೋಜನೆಯಲ್ಲಿದ್ದರು. ನಿರ್ದೇಶಕ ಅಜಯ್ ದೇವಗನ್ ಕಡಿಮೆ ಸಿಬ್ಬಂದಿ ಜೊತೆ ಕತಾರ್ಗೆ ತೆರಳಿ ಕೊನೆಯ ಚಿತ್ರೀಕರಣ ಮಾಡಲು ನಿರ್ಧರಿಸಿದ್ದರು. ಆದ್ರೀಗ, ಆ ಯೋಜನೆಗೆ ಕೊರೊನಾ ಅಡ್ಡಿಯಾಗಿದೆ. ಈ ಹಿಂದೆ ಅಮಿತಾಭ್ ಬಚ್ಚನ್ ಮತ್ತು ರಕುಲ್ ಪ್ರೀತ್ ಸಿಂಗ್ ಇಬ್ಬರಿಗೂ ಕೊರೊನಾ ವೈರಸ್ ತಗುಲಿತ್ತು.
ಆ ಸಂದರ್ಭದಲ್ಲಿ ಬಿಗ್ ಬಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದುಕೊಂಡಿದ್ದರು. ರಕುಲ್ ತಮ್ಮ ಮನೆಯಲ್ಲಿ ಹೋಮ್ ಕ್ವಾರಂಟೈನ್ ಆಗಿದ್ದರು. ಒಂದು ವಾರದ ವಿಶ್ರಾಂತಿ ಬಳಿಕ ನೆಗೆಟಿವ್ ಫಲಿತಾಂಶ ಬಂದಿತ್ತು.
ಅಂದ್ಹಾಗೆ, ಮೇಡೇ ಸಿನಿಮಾ ನೈಜ ಘಟನೆಗಳ ಆಧರಿಸಿ ಸಿದ್ದವಾಗುತ್ತಿರುವ ಚಿತ್ರ. 2015ರಲ್ಲಿ ನಡೆದ ಕೆಲವು ಘಟನೆಗಳನ್ನು ಚಿತ್ರಕಥೆ ಮಾಡಿ ಸಿನಿಮಾ ರೂಪ ನೀಡಲಾಗುತ್ತಿದೆ. ದೋಹಾ ಮತ್ತು ಕೊಚ್ಚಿ ವಿಮಾನದ ಸಂಘರ್ಷದ ವೇಳೆ ನಡೆದ ಘಟನೆಯ ಸುತ್ತಮುತ್ತಾ ಕಥೆ ಮಾಡಲಾಗಿದೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm