ಬ್ರೇಕಿಂಗ್ ನ್ಯೂಸ್
13-04-21 07:29 pm Source: FILMIBEAT ಸಿನಿಮಾ
ಏಳು ವರ್ಷಗಳ ಹಿಂದೆ ಬಿಡುಗಡೆ ಆಗಿದ್ದ ಕನ್ನಡ ಸಿನಿಮಾ 'ದೃಶ್ಯ'ದ ಮುಂದುವರೆದ ಭಾಗ ನಿರ್ಮಾಣವಾಗುವುದು ಖಾತ್ರಿಯಾಗಿದೆ. ರವಿಚಂದ್ರನ್, ನವ್ಯಾ ನಾಯರ್, ಅಚ್ಯುತ್ ಕುಮಾರ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದ 'ದೃಶ್ಯ' ಸಿನಿಮಾ ಭರ್ಜರಿ ಹಿಟ್ ಆಗಿತ್ತು. ಮಲಯಾಳಂನ 'ದೃಶ್ಯಂ' ಸಿನಿಮಾದ ರೀಮೇಕ್ ಆಗಿದ್ದ ಈ ಸಿನಿಮಾದ ಮುಂದುವರೆದ ಭಾಗ 'ದೃಶ್ಯ 2' ಕನ್ನಡದಲ್ಲಿ ನಿರ್ಮಾಣವಾಗಲಿದೆ. ರವಿಚಂದ್ರನ್ ಅವರು ಮತ್ತೆ 'ರಾಜೇಂದ್ರ ಪೊನ್ನಪ್ಪ'ನ ಪಾತ್ರದಲ್ಲಿ ಮಿಂಚಲಿದ್ದಾರೆ.
ಮಲಯಾಳಂನಲ್ಲಿ 'ದೃಶ್ಯಂ' ಸಿನಿಮಾ ಮಾಡಿದ್ದ ತಂಡವೇ 'ದೃಶ್ಯಂ2' ಸಿನಿಮಾ ನಿರ್ಮಾಣ ಮಾಡಿ ಇತ್ತೀಚೆಗಷ್ಟೆ ಒಟಿಟಿಯಲ್ಲಿ ಬಿಡುಗಡೆ ಮಾಡಿತ್ತು. ಸಿನಿಮಾ ಮತ್ತೆ ಹಿಟ್ ಆಗಿದೆ. ಹಾಗಾಗಿ ಅದೇ ಸಿನಿಮಾವನ್ನು ಕನ್ನಡದಲ್ಲಿ ಮತ್ತೆ ರೀಮೇಕ್ ಮಾಡಲಾಗುತ್ತಿದೆ.
2014 ರಲ್ಲಿ ಕನ್ನಡದ 'ದೃಶ್ಯ' ನಿರ್ದೇಶಿಸಿದ್ದ ಪಿ.ವಾಸು ಅವರೇ 'ದೃಶ್ಯ 2' ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ. 'ದೃಶ್ಯ' ಸಿನಿಮಾದಲ್ಲಿದ್ದ ಬಹುತೇಕ ಪಾತ್ರಗಳು, ನಟರು 'ದೃಶ್ಯ 2' ಸಿನಿಮಾದಲ್ಲಿಯೂ ಮುಂದುವರೆಯಲಿದ್ದಾರೆ. ಹೆಚ್ಚುವರಿ ಪಾತ್ರಗಳು ಸಹ ಸೇರಿಕೊಳ್ಳಲಿವೆ. ಸಿನಿಮಾವನ್ನು ಈ4 ಎಂಟರ್ಟೈನ್ಮೆಂಟ್ ಸಂಸ್ಥೆ ನಿರ್ಮಾಣ ಮಾಡಲಿದೆ.
ಮಲಯಾಳಂನಲ್ಲಿ ಇತ್ತೀಚೆಗಷ್ಟೆ ಬಿಡುಗಡೆ ಆಗಿರುವ 'ದೃಶ್ಯ 2' ಸಿನಿಮಾವು ಈಗಾಗಲೇ ತೆಲುಗಿನಲ್ಲಿ ರೀಮೇಕ್ ಆಗುತ್ತಿದೆ. ಮೂಲ ಸಿನಿಮಾ ನಿರ್ದೇಶಿಸಿದ್ದ ಜೀತು ಜೋಸೆಫ್ ಅವರೇ ತೆಲುಗಿನಲ್ಲಿಯೂ ನಿರ್ದೇಶನ ಮಾಡುತ್ತಿದ್ದಾರೆ. ತಮಿಳು ಹಾಗೂ ಹಿಂದಿಯಲ್ಲಿಯೂ ಈ ಸಿನಿಮಾ ರೀಮೇಕ್ ಆಗುವ ಸಾಧ್ಯತೆ ಇದೆ. ಜೀತು ಜೋಸೆಫ್ ನಿರ್ದೇಶಿಸಿದ್ದ ಮಲಯಾಳಂನ ಮೊದಲ 'ದೃಶ್ಯಂ' ಸಿನಿಮಾವು ಕನ್ನಡ, ತೆ
'ದೃಶ್ಯ' ಸಿನಿಮಾದಲ್ಲಿ ಆಗಿದ್ದ ಕೊಲೆಯ ತನಿಖೆಯೇ 'ದೃಶ್ಯ 2' ನಲ್ಲಿಯೂ ಮುಂದುವರೆಯಲಿದೆ. ರಾಜೇಂದ್ರ ಪೊನ್ನಪ್ಪ ತನ್ನ ಬುದ್ಧಿವಂತಿಕೆಯಿಂದ ಕೊಲೆ ಪ್ರಕರಣದಿಂದ ತನ್ನ ಕುಟುಂಬವನ್ನು ಕಾಪಾಡಿಕೊಂಡಿದ್ದ ಆದರೆ 'ದೃಶ್ಯ 2' ನಲ್ಲಿ ಅದೇ ಪ್ರಕರಣವನ್ನು ಮತ್ತೆ ಹೇಗೆ ನಿಭಾಯಿಸುತ್ತಾನೆ ಮತ್ತೆ ಹೇಗೆ ತನ್ನ ಕುಟುಂಬವನ್ನು ಕಾಪಾಡಿಕೊಳ್ಳುತ್ತಾನೆ ಎಂಬುದು ಸಿನಿಮಾದ ಕತೆಯಾಗಿರಲಿದೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm