ಮಹಾರಾಷ್ಟ್ರದಲ್ಲಿ ಕರ್ಫ್ಯೂ: ಮುಂಬೈ ಬಿಟ್ಟು ಹೈದರಾಬಾದ್‌ಗೆ ಹಾರಿದ ರಶ್ಮಿಕಾ

15-04-21 11:46 am       Source: FILMIBEAT   ಸಿನಿಮಾ

ಮಹಾರಾಷ್ಟ್ರದಲ್ಲಿ ಕರ್ಫ್ಯೂ ಘೋಷಣೆಯಾದ ಹಿನ್ನೆಲೆ ನಟಿ ರಶ್ಮಿಕಾ ಮಂದಣ್ಣ ಮುಂಬೈನಿಂದ ಹೈದರಾಬಾದ್‌ಗೆ ಪ್ರಯಾಣ ಬೆಳೆಸಿದ್ದಾರೆ. ಮುಂಬೈನಲ್ಲಿ ಅಮಿತಾಭ್ ಬಚ್ಚನ್ ಜೊತೆ 'ಗುಡ್ ಬೈ' ಸಿನಿಮಾ ಚಿತ್ರೀಕರಣದಲ್ಲಿ ರಶ್ಮಿಕಾ ತೊಡಗಿಕೊಂಡಿದ್ದರು.

ಮಹಾರಾಷ್ಟ್ರದಲ್ಲಿ ಕರ್ಫ್ಯೂ ಘೋಷಣೆಯಾದ ಹಿನ್ನೆಲೆ ನಟಿ ರಶ್ಮಿಕಾ ಮಂದಣ್ಣ ಮುಂಬೈನಿಂದ ಹೈದರಾಬಾದ್‌ಗೆ ಪ್ರಯಾಣ ಬೆಳೆಸಿದ್ದಾರೆ. ಮುಂಬೈನಲ್ಲಿ ಅಮಿತಾಭ್ ಬಚ್ಚನ್ ಜೊತೆ 'ಗುಡ್ ಬೈ' ಸಿನಿಮಾ ಚಿತ್ರೀಕರಣದಲ್ಲಿ ರಶ್ಮಿಕಾ ತೊಡಗಿಕೊಂಡಿದ್ದರು. ರಾಜ್ಯದಲ್ಲಿ ಸೋಂಕು ಏರಿಕೆಯಾಗುತ್ತಿರುವ ಕಾರಣ ಮಹಾರಾಷ್ಟ್ರ ಸರ್ಕಾರ ಹದಿನೈದು ದಿನಗಳ ಕಾಲ ಸಂಪೂರ್ಣವಾಗಿ ಕರ್ಫ್ಯೂ ಜಾರಿ ಮಾಡಿದೆ.

ಈ ವೇಳೆ ಟಿವಿ ಶೂಟಿಂಗ್, ಸಿನಿಮಾ ಶೂಟಿಂಗ್ ಹಾಗೂ ಚಿತ್ರರಂಗದ ಯಾವುದೇ ಕಾರ್ಯಕ್ರಮ ಮಾಡಲು ಅನುಮತಿ ಇಲ್ಲ. ಹಾಗಾಗಿ, ಮುಂಬೈನಲ್ಲಿ ಹದಿನೈದು ದಿನಗಳ ಕಾಲ ಸುಮ್ಮನೆ ಸಮಯ ಕಳೆಯಲು ಸಾಧ್ಯವಾಗದ ಹಿನ್ನೆಲೆ ಹೈದರಾಬಾದ್‌ಗೆ ರಶ್ಮಿಕಾ ತೆರಳಿದ್ದಾರೆ.

ಈ ವೇಳೆ ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ನಟಿ ''ಕರ್ಫ್ಯೂ ಮುಗಿದ ಮೇಲೆ ಮತ್ತೆ ಮುಂಬೈಗೆ ಬರ್ತೇನೆ, ನಿಮ್ಮ ಆರೋಗ್ಯ ನೋಡಿಕೊಳ್ಳಿ'' ಎಂದು ಛಾಯಾಗ್ರಾಹಕರಿಗೆ ತಿಳಿಸಿದರು. ರಶ್ಮಿಕಾ ಮಂದಣ್ಣ ಬಾಲಿವುಡ್‌ನಲ್ಲಿ ಎರಡು ಸಿನಿಮಾ ಮಾಡ್ತಿದ್ದಾರೆ. ಸಿದ್ಧಾರ್ಥ್ ಮಲ್ಹೋತ್ರಾ ನಟನೆಯ 'ಮಿಷನ್ ಮಜ್ನು' ಚಿತ್ರದ ಮೂಲಕ ಬಿಟೌನ್ ಪ್ರವೇಶಿಸಿದ್ದಾರೆ. ಈ ಸಿನಿಮಾದ ಜೊತೆಗೆ 'ಗುಡ್ ಬೈ' ಸಿನಿಮಾನೂ ಕೈಗೆತ್ತಿಕೊಂಡಿದ್ದು, ಚಿತ್ರೀಕರಣ ಆರಂಭಿಸಿದೆ. ಸೌತ್ ಇಂಡಸ್ಟ್ರಿಯಲ್ಲಿ 'ಪುಷ್ಪ' ಸಿನಿಮಾ ಮುಗಿಸಿರುವ ರಶ್ಮಿಕಾ ಮಂದಣ್ಣ ರಿಲೀಸ್‌ಗಾಗಿ ಕಾಯ್ತಿದ್ದಾರೆ. ಈ ನಡುವೆ ಶರ್ವಾನಂದ್ ಜೊತೆ ಒಂದು ಸಿನಿಮಾ ಮಾಡ್ತಿದ್ದು, ಅದನ್ನು ಬಿಟ್ಟರೆ ಸದ್ಯಕ್ಕೆ ಬೇರೆ ಯಾವ ಚಿತ್ರವೂ ಘೋಷಿಸಿಲ್ಲ.

This News Article Is A Copy Of FILMIBEAT