ಬ್ರೇಕಿಂಗ್ ನ್ಯೂಸ್
15-04-21 07:01 pm Source: FILMIBEAT ಸಿನಿಮಾ
ಕೆಜಿಎಫ್' ಸಿನಿಮಾದಲ್ಲಿ ಅಮ್ಮನ ಪಾತ್ರದ ಮೂಲಕ ಗಮನ ಸೆಳೆದಿದ್ದ ನಟಿ ಅರ್ಚನಾ ಜೋಯಿಸ್, ಈಗ ಮತ್ತೊಮ್ಮೆ ತೆರೆಯ ಮೇಲೆ ಮಿಂಚಲು ತಯಾರಾಗಿದ್ದಾರೆ. 'ಮುಂಗಾರುಮಳೆ' ಹಾಗೂ 'ಮೊಗ್ಗಿನ ಮನಸು' ಸಿನಿಮಾಗಳಲ್ಲಿ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದ ಜಿ.ಗಂಗಾಧರ್ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಇ.ಕೆ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣಗೊಳ್ಳುತ್ತಿದೆ.
'ಮುಂಗಾರುಮಳೆ 2' ಚಿತ್ರದಲ್ಲಿ ನಿರ್ದೇಶಕ ಶಶಾಂಕ್ ಅವರೊಂದಿಗೆ ಕೆಲಸ ಮಾಡಿದ್ದ ಪ್ರಶಾಂತ್ ಚಂದ್ರ ಅವರು ಸಿನಿಮಾವನ್ನು ನಿರ್ದೇಶನ ಮಾಡಿದ್ದು ಸಿನಿಮಾ ಸದ್ದಿಲ್ಲದೆ ಶೂಟಿಂಗ್ ಕೂಡ ಪೂರ್ಣಗೊಳಿಸಿದೆ. ಇನ್ನೇನು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಸಿನಿಮಾದ ಶೀರ್ಷಿಕೆಯನ್ನು ನಟ ರಿಷಿ ಬುಧವಾರ ಬಿಡುಗಡೆಗೊಳಿಸಿದ್ದಾರೆ.
ಶೀರ್ಷಿಕೆಯ ಕುರಿತ 40 ಸೆಕೆಂಡ್ ವಿಡಿಯೊವೊಂದನ್ನು ಚಿತ್ರತಂಡ ಯೂಟ್ಯೂಬ್ನಲ್ಲಿ ಹಂಚಿಕೊಂಡಿದೆ. ವಿಶೇಷವೆಂದರೆ ಈ ಸಿನಿಮಾದಲ್ಲಿ ತಮಿಳಿನ ಪ್ರಖ್ಯಾತ ನಟ ಆಡುಕಲಂ ನರೇನ್ ನಟಿಸಿದ್ದಾರೆ. ಸಿದ್ದಾರ್ಥ್ ಮಾಧ್ಯಮಿಕ ಕೂಡ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕತೆಯುಳ್ಳ ಸಿನಿಮಾ ಆಗಿರುವುದರಿಂದ ಪಾತ್ರಗಳ ಬಗ್ಗೆ ಹೆಚ್ಚಿನ ಗುಟ್ಟು ಬಿಟ್ಟುಕೊಟ್ಟಿಲ್ಲ ಚಿತ್ರತಂಡ. "ನಿರ್ದೇಶಕನಾಗಿ ಇದು ನನಗೆ ಚೊಚ್ಚಲ ಚಿತ್ರ.
ಸಿನಿಮಾದ ಕಥೆ ವಿಭಿನ್ನವಾಗಿದೆ. ಥ್ರಿಲ್ಲರ್ ಸಿನಿಮಾ ಆಗಿರುವುದರಿಂದ ಸಾಕಷ್ಟು ತಿರುವುಗಳು ನೋಡಲು ಸಿಗಲಿವೆ. ಚಿತ್ರದ ಒಂದೊಂದು ದೃಶ್ಯವನ್ನೂ ಬಹಳ ಕಾಳಜಿ ಹಾಗೂ ಸಂಯಮದಿಂದ ಚಿತ್ರೀಕರಿಸಲಾಗಿದೆ. ಆದ್ದರಿಂದ ಶೂಟಿಂಗ್ ಮುಗಿಯುವವರೆಗೂ ನಾವು ಸಿನಿಮಾ ಕುರಿತು ಯಾವುದೇ ಮಾಹಿತಿ ಹಂಚಿಕೊಂಡಿರಲಿಲ್ಲ. ಥ್ರಿಲ್ಲರ್ ಚಿತ್ರಗಳ ಸಾಲಿನಲ್ಲಿ ನಮ್ಮ ಸಿನಿಮಾ ಉದಾಹರಣೆಯಾಗಿ ನಿಲ್ಲುವ ನಂಬಿಕೆ ನಮ್ಮ ತಂಡಕ್ಕಿದೆ' ಎಂದು ನಿರ್ದೇಶಕ ಪ್ರಶಾಂತ್ ಚಂದ್ರ ಹೇಳಿದ್ದಾರೆ.
'''#ಮ್ಯೂಟ್' ಶೀರ್ಷಿಕೆಯ ಪೋಸ್ಟರ್ ಬಿಡುಗಡೆ ಮಾಡಲು ಖುಷಿಯಾಗುತ್ತಿದೆ. ಇದರಲ್ಲಿ ಅದ್ಬುತ ನಟರು ಅಭಿನಯಿಸಿದ್ದಾರೆ. ಪ್ರತಿಭಾವಂತ ಪ್ರಶಾಂತ್ ಚಂದ್ರ ಅವರ ನಿರ್ದೇಶನದ ಈ ಸಿನಿಮಾಗೆ ಯಶಸ್ಸು ಸಿಗಲಿ'' ಎಂದು ನಟ ರಿಷಿ ತಂಡಕ್ಕೆ ಹಾರೈಸಿದ್ದಾರೆ.
This News Article Is A Copy Of FILMIBEAT
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am