ಬ್ರೇಕಿಂಗ್ ನ್ಯೂಸ್
16-04-21 02:35 pm Headline Karnataka News Network ಸಿನಿಮಾ
ಬೆಂಗಳೂರು, ಎ.17: ಡ್ರಗ್ಸ್ ನಂಟಿನಲ್ಲಿ ಸಿಕ್ಕಿಬಿದ್ದು ಸುದ್ದಿಯಾಗಿದ್ದ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರು ಅನ್ನೋ ಗುಲ್ಲು ಹಬ್ಬಿತ್ತು. ನಿಶ್ಚಿತಾರ್ಥ ಆಗಿರುವ ಫೋಟೊ ಕೂಡ ವೈರಲ್ ಆಗಿತ್ತಲ್ಲದೆ, ಈ ನಡುವೆ ಮದುವೆಗಾಗಿ ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಇದೀಗ ಜೈಲಿನಿಂದ ಹೊರಬಂದಿರುವ ಸಂಜನಾ ತಾನು ಮತಾಂತರ ಆಗಿರುವುದನ್ನು ಸ್ವತಃ ಹೇಳಿಕೊಂಡಿದ್ದಾರೆ. ಅಲ್ಲದೆ, ಖುರಾನ್ ಕಲಿತು ನಮಾಜ್ ಓದಲು ಕಲಿಯುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.

ಸ್ಟಾರ್ ಸುವರ್ಣ ವಾಹಿನಿಯಲ್ಲಿನ 'ಯುಗಾದಿ ಸಂಭ್ರಮ' ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಜನಾ ಗಲ್ರಾನಿ ಈ ಬಗ್ಗೆ ಮಾತನಾಡಿದ್ದಾರೆ. ನಾನು ಆಧ್ಯಾತ್ಮದತ್ತ ವಾಲುತ್ತಿದ್ದೇನೆ. ಕೆಲ ತಿಂಗಳುಗಳಿಂದ ನಮಾಜ್ ಓದುವುದನ್ನು ರೂಢಿ ಮಾಡಿಕೊಳ್ಳುತ್ತಿದ್ದೇನೆ. ಕರ್ಮ, ದೇವರಲ್ಲಿ ನನಗೆ ನಂಬಿಕೆ ಇಟ್ಟಿದ್ದೇನೆ. ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ. ಇಸ್ಲಾಂ ಧರ್ಮಕ್ಕೆ ಮತಾಂತರ ಆಗೋದು ನನ್ನ ವೈಯಕ್ತಿಕ ಆಯ್ಕೆಯಾಗಿತ್ತು. ಆ ಜೀವನದಿಂದ ನಾನು ಆಕರ್ಷಿತಳಾಗಿದ್ದೇನೆ. ನನ್ನ ನಿರ್ಧಾರ ರಾಜಕೀಯ ಪ್ರೇರಿತ ಅಲ್ಲ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.

ಫಿಟ್ನೆಸ್ ಪ್ಲಾನಿಂಗ್ ಬಗ್ಗೆ ಹೇಳಿಕೊಂಡ ಅವರು, ಈ ತಿಂಗಳು ನನ್ನ ನಿದ್ದೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಕೆಲಸ, ದಿನಚರಿಯಲ್ಲಿ ಬದಲಾವಣೆ ಆಗಬೇಕು. ಉಪವಾಸ ಮಾಡುತ್ತಿದ್ದೇನೆ. ನಾನು ಮತ್ತೆ ಫಿಟ್ನೆಸ್ ಬೆಳೆಸಿಕೊಳ್ಳಬೇಕು, ಸಂಜೆ ವರ್ಕೌಟ್ ಆರಂಭಿಸುತ್ತೇನೆ. ರಾತ್ರಿ 9 ಗಂಟೆಗೆ ಉಪವಾಸ ಮುಗಿಸುತ್ತೇನೆ. ರಮ್ಜಾನ್ ಉಪವಾಸವನ್ನು ಚೆನ್ನಾಗಿಯೇ ಮಾಡುತ್ತೇನೆ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.
It was my own choice for conversion to Islam says sandalwood actor aanjana galrani who was arrested in drugs case in Bangalore.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am