ಬ್ರೇಕಿಂಗ್ ನ್ಯೂಸ್
16-04-21 04:26 pm Headline Karnataka News Network ಸಿನಿಮಾ
ಚೆನ್ನೈ,ಎ.17: ಕಾಲಿವುಡ್ನ ಖ್ಯಾತ ನಟ ವಿವೇಕ್ ಅವರಿಗೆ ಶುಕ್ರವಾರ (ಏ.16) ಹೃದಯಾಘಾತ ಸಂಭವಿಸಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವೇಕ್ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದೆ. ಶುಕ್ರವಾರ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ ಮತ್ತು ಆಂಜಿಯೋಗ್ರಾಮ್ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
59 ವರ್ಷ ವಯಸ್ಸಿನ ವಿವೇಕ್ ಅವರು ಗುರುವಾರವಷ್ಟೇ ಕೊರೊನಾ ವೈರಸ್ ಲಸಿಕೆ ಪಡೆದುಕೊಂಡಿದ್ದರು. ಕಾಕತಾಳೀಯ ಎಂಬಂತೆ ಮರುದಿನವೇ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೊರೊನಾ ವ್ಯಾಕ್ಸಿನ್ ಪಡೆದುಕೊಂಡಿದ್ದಕ್ಕೂ, ಹೃದಯಾಘಾತ ಆಗಿರುವುದಕ್ಕೂ ಸಂಬಂಧ ಇದೆಯೋ ಇಲ್ಲವೋ ಎಂಬ ಬಗ್ಗೆ ಯಾರೂ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿಲ್ಲ.
ಗುರುವಾರ ವಾಕ್ಸಿನ್ ಪಡೆದುಕೊಂಡ ನಂತರ ಮಾಧ್ಯಮಗಳ ಜೊತೆ ವಿವೇಕ್ ಮಾತನಾಡಿದ್ದರು. ‘ಮಾಸ್ಕ್ ಧರಿಸುವುದು, ಕೈ ತೊಳೆದುಕೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಸುರಕ್ಷಿತವಾಗಿರಬಹುದು. ವೈದ್ಯಕೀಯವಾಗಿ ರಕ್ಷಿಸಿಕೊಳ್ಳಲು ವ್ಯಾಕ್ಸಿನ್ ಪಡೆಯಬೇಕು. ನೀವು ಆಯುರ್ವೇದ ಮುಂತಾದ ಚಿಕಿತ್ಸೆ ಪಡೆಯುತ್ತಿದ್ದರೂ ಒಳ್ಳೆಯದು. ಅವೆಲ್ಲವೂ ಹೆಚ್ಚುವರಿ ಕ್ರಮಗಳು. ನಮ್ಮ ಜೀವ ಉಳಿಸುವುದು ವ್ಯಾಕ್ಸಿನ್ ಮಾತ್ರ’ ಎಂದು ವಿವೇಕ್ ಹೇಳಿದ್ದರು.
ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿರುವ ವಿವೇಕ್ ಅವರು ಟ್ವಿಟರ್ ಮೂಲಕ ವೈದ್ಯರಿಗೆ ಧನ್ಯವಾದ ತಿಳಿಸಿದ್ದರು. ಮರುದಿನವೇ ಅವರಿಗೆ ಹೃದಯಾಘಾತ ಸಂಭವಿಸಿರುವುದು ಶಾಕಿಂಗ್ ಸಂಗತಿ. ಬಾಲಿವುಡ್ನ ‘ವಿಕ್ಕಿ ಡೋನರ್’ ಚಿತ್ರದ ತಮಿಳು ರಿಮೇಕ್ ಆದಂತಹ ‘ಧಾರಾಳ ಪ್ರಭು’ ಚಿತ್ರದಲ್ಲಿ ವಿವೇಕ್ ಕೊನೇ ಬಾರಿಗೆ ನಟಿಸಿದ್ದರು.
ಕಳೆದ ವರ್ಷ ಲಾಕ್ ಡೌನ್ ಆಗುವುದಕ್ಕೂ ಕೆಲವೇ ದಿನಗಳ ಮುನ್ನ ಧಾರಾಳ ಪ್ರಭು ಸಿನಿಮಾ ಬಿಡುಗಡೆ ಆಗಿತ್ತು. ಆದರೆ ಲಾಕ್ಡೌನ್ನಿಂದಾಗಿ ಚಿತ್ರಕ್ಕೆ ಹೊಡೆದ ಬಿತ್ತು. ಕಮಲ್ ಹಾಸನ್ ಅಭಿನಯದ ಬಹುನಿರೀಕ್ಷಿತ ‘ಇಂಡಿಯನ್ 2’ ಸಿನಿಮಾದಲ್ಲೂ ವಿವೇಕ್ ನಟಿಸುತ್ತಿದ್ದರು. ಸದ್ಯ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.
In a shocking turn of events, popular Tamil actor and comedian Vivek have been admitted to the intensive care unit of a private hospital in Chennai after he suffered a heart attack on Friday morning. According to the news reports, his condition is said to be critical.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm