ಬ್ರೇಕಿಂಗ್ ನ್ಯೂಸ್
16-04-21 04:26 pm Headline Karnataka News Network ಸಿನಿಮಾ
ಚೆನ್ನೈ,ಎ.17: ಕಾಲಿವುಡ್ನ ಖ್ಯಾತ ನಟ ವಿವೇಕ್ ಅವರಿಗೆ ಶುಕ್ರವಾರ (ಏ.16) ಹೃದಯಾಘಾತ ಸಂಭವಿಸಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವೇಕ್ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದೆ. ಶುಕ್ರವಾರ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ ಮತ್ತು ಆಂಜಿಯೋಗ್ರಾಮ್ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
59 ವರ್ಷ ವಯಸ್ಸಿನ ವಿವೇಕ್ ಅವರು ಗುರುವಾರವಷ್ಟೇ ಕೊರೊನಾ ವೈರಸ್ ಲಸಿಕೆ ಪಡೆದುಕೊಂಡಿದ್ದರು. ಕಾಕತಾಳೀಯ ಎಂಬಂತೆ ಮರುದಿನವೇ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೊರೊನಾ ವ್ಯಾಕ್ಸಿನ್ ಪಡೆದುಕೊಂಡಿದ್ದಕ್ಕೂ, ಹೃದಯಾಘಾತ ಆಗಿರುವುದಕ್ಕೂ ಸಂಬಂಧ ಇದೆಯೋ ಇಲ್ಲವೋ ಎಂಬ ಬಗ್ಗೆ ಯಾರೂ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿಲ್ಲ.
ಗುರುವಾರ ವಾಕ್ಸಿನ್ ಪಡೆದುಕೊಂಡ ನಂತರ ಮಾಧ್ಯಮಗಳ ಜೊತೆ ವಿವೇಕ್ ಮಾತನಾಡಿದ್ದರು. ‘ಮಾಸ್ಕ್ ಧರಿಸುವುದು, ಕೈ ತೊಳೆದುಕೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಸುರಕ್ಷಿತವಾಗಿರಬಹುದು. ವೈದ್ಯಕೀಯವಾಗಿ ರಕ್ಷಿಸಿಕೊಳ್ಳಲು ವ್ಯಾಕ್ಸಿನ್ ಪಡೆಯಬೇಕು. ನೀವು ಆಯುರ್ವೇದ ಮುಂತಾದ ಚಿಕಿತ್ಸೆ ಪಡೆಯುತ್ತಿದ್ದರೂ ಒಳ್ಳೆಯದು. ಅವೆಲ್ಲವೂ ಹೆಚ್ಚುವರಿ ಕ್ರಮಗಳು. ನಮ್ಮ ಜೀವ ಉಳಿಸುವುದು ವ್ಯಾಕ್ಸಿನ್ ಮಾತ್ರ’ ಎಂದು ವಿವೇಕ್ ಹೇಳಿದ್ದರು.
ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿರುವ ವಿವೇಕ್ ಅವರು ಟ್ವಿಟರ್ ಮೂಲಕ ವೈದ್ಯರಿಗೆ ಧನ್ಯವಾದ ತಿಳಿಸಿದ್ದರು. ಮರುದಿನವೇ ಅವರಿಗೆ ಹೃದಯಾಘಾತ ಸಂಭವಿಸಿರುವುದು ಶಾಕಿಂಗ್ ಸಂಗತಿ. ಬಾಲಿವುಡ್ನ ‘ವಿಕ್ಕಿ ಡೋನರ್’ ಚಿತ್ರದ ತಮಿಳು ರಿಮೇಕ್ ಆದಂತಹ ‘ಧಾರಾಳ ಪ್ರಭು’ ಚಿತ್ರದಲ್ಲಿ ವಿವೇಕ್ ಕೊನೇ ಬಾರಿಗೆ ನಟಿಸಿದ್ದರು.
ಕಳೆದ ವರ್ಷ ಲಾಕ್ ಡೌನ್ ಆಗುವುದಕ್ಕೂ ಕೆಲವೇ ದಿನಗಳ ಮುನ್ನ ಧಾರಾಳ ಪ್ರಭು ಸಿನಿಮಾ ಬಿಡುಗಡೆ ಆಗಿತ್ತು. ಆದರೆ ಲಾಕ್ಡೌನ್ನಿಂದಾಗಿ ಚಿತ್ರಕ್ಕೆ ಹೊಡೆದ ಬಿತ್ತು. ಕಮಲ್ ಹಾಸನ್ ಅಭಿನಯದ ಬಹುನಿರೀಕ್ಷಿತ ‘ಇಂಡಿಯನ್ 2’ ಸಿನಿಮಾದಲ್ಲೂ ವಿವೇಕ್ ನಟಿಸುತ್ತಿದ್ದರು. ಸದ್ಯ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.
In a shocking turn of events, popular Tamil actor and comedian Vivek have been admitted to the intensive care unit of a private hospital in Chennai after he suffered a heart attack on Friday morning. According to the news reports, his condition is said to be critical.
04-05-24 10:29 am
HK News Desk
HD Revanna, Lookout notice: ಕೊರಳು ಸುತ್ತಿಕೊಂಡ...
03-05-24 10:19 pm
Jai Shri Ram Congress leader Basheeruddin: ಜೈ...
03-05-24 09:43 pm
Prajwal Revanna, sex scandal, rape: ಗನ್ ತೋರಿಸ...
03-05-24 09:06 pm
AC blast in Kalyan jewellers Bellary: ಬಳ್ಳಾರಿ...
03-05-24 07:41 pm
04-05-24 01:50 pm
HK News Desk
C V Ananda Bose, West Bengal governor: ಪಶ್ಚಿಮ...
03-05-24 10:58 pm
ಸಿಸೇರಿಯನ್ ಮಾಡುವಾಗ ಕೈಕೊಟ್ಟ ಕರೆಂಟ್ ; ಮೊಬೈಲ್ ಟಾ...
03-05-24 10:28 am
Dubai Rain: ದುಬೈನಲ್ಲಿ ಮತ್ತೆ ಭಾರಿ ಮಳೆ ; ಶಾಲೆ,...
03-05-24 10:20 am
Narendra Modi, Rahul Gandhi: ರಾಹುಲ್ ಬಗ್ಗೆ ಪಾಕ...
02-05-24 10:07 pm
04-05-24 12:41 pm
Mangalore Correspondent
Mangalore, Subramanya; ಸುಬ್ರಹ್ಮಣ್ಯ ; ಮನೆಯಂಗಳದ...
04-05-24 11:20 am
Mangalore Accident, Kotekar: ಕಾರು ಚಾಲಕನ ಧಾವಂತ...
03-05-24 08:32 pm
Mullai Muhilan Dc Mangalore: ಕುಡಿಯುವ ನೀರು ಪೂರ...
03-05-24 06:31 pm
Lakshadweep to Mangalore Speed boat ship: ಲಕ್...
02-05-24 07:52 pm
04-05-24 12:23 pm
HK News Desk
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm
Mumbai crime, Minor pregnant: ಮದುವೆ ಮುನ್ನವೇ 2...
03-05-24 10:24 am
Mangalore Crime, Drugs Arrest; ಕೋಟೆಕಾರ್ ಬೀರಿಯ...
01-05-24 10:18 pm