ಬ್ರೇಕಿಂಗ್ ನ್ಯೂಸ್
16-04-21 06:59 pm Source: FILMIBEAT ಸಿನಿಮಾ
ಸುಮಾರು 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ತೆಲುಗಿನ ಖ್ಯಾತ ಪೋಷಕ ನಟ, ಬರಹಗಾರ, ಕವಿ ತನಿಕೆಲ್ಲ ಭರಣಿ ಸಾಮಾಜಿಕ ಜಾಲತಾಣದಲ್ಲಿ ಕ್ಷಮಾಪಣೆ ಕೇಳಿದ್ದಾರೆ. 'ಕೈಮುಗಿದು ಕ್ಷಮೆ ಕೇಳುವೆ ಕ್ಷಮಿಸಿಬಿಡಿ' ಎಂದು ಮನವಿ ಮಾಡಿದ್ದಾರೆ. ಆಗಿದ್ದಿಷ್ಟು, ಉತ್ತಮ ಕವಿಯೂ ಆಗಿರುವ ತನಿಕೆಲ್ಲ ಭರಣಿ ಸಾಮಾಜಿಕ ಜಾಲತಾಣದಲ್ಲಿ ಸ್ವರಚಿತ ಕವನಗಳನ್ನು ಪ್ರಕಟಿಸುತ್ತಿರುತ್ತಾರೆ. ಅವರ ಕವಿತೆಗಳಿಗೆ ಸಾಕಷ್ಟು ಸಂಖ್ಯೆಯ ಓದುಗರಿದ್ದಾರೆ. ಇತ್ತೀಚೆಗೆ ಅವರೇ ವಾಚಿಸಿದ್ದ 'ನಾನ್ನ ಎಂದುಕೊ ಎನಕಬಡ್ಡಾಡು' ಕವಿತೆ ಭಾರಿ ವೈರಲ್ ಆಗಿತ್ತು. ಕನ್ನಡಕ್ಕೂ ಅನುವಾದಗೊಂಡಿತ್ತು.
'ಶಭಾಷ್ ರ ಶಂಕರ' ಹೆಸರಿನಲ್ಲಿ ದೇವರ ಕುರಿತು, ಅಧ್ಯಾತ್ಮ ಕುರಿತು ಕೆಲವು ಕವನಗಳನ್ನು ಹಂಚಿಕೊಂಡಿದ್ದರು ಭರಣಿ. ಅಂತೆಯೇ ಇತ್ತೀಚೆಗೆ ದೇವರನ್ನು ನಂಬದ ನಾಸ್ತಿಕರ ಬಗ್ಗೆ ಕವನ ಬರೆದು ಫೇಸ್ಬುಕ್ನಲ್ಲಿ ಪ್ರಕಟಿಸಿದ್ದರು. ಕವನದಲ್ಲಿ ನಾಸ್ತಿಕರನ್ನು ಕತ್ತೆಗೆ ಹೋಲಿಸಿ, ನಿಂದಾತ್ಮಕ ಸಾಲುಗಳನ್ನು ಬರೆದಿದ್ದರು ಭರಣಿ. ಇದು ವಿವಾದಕ್ಕೆ ಕಾರಣವಾಗಿತ್ತು.
ಸಾಮಾಜಿಕ ಜಾಲತಾಣದಲ್ಲಿ ಚರ್ಚೆ
ಭರಣಿ ಅವರ ಕವನದ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗಳಾಗಿ, ದೇವರನ್ನು ನಂಬದಿರುವುದು ವ್ಯಕ್ತಿಯ ಆಯ್ಕೆಗೆ ಬಿಟ್ಟ ವಿಚಾರ. ದೇವರನ್ನು ನಂಬದವರು ಎಂದರೆ ಅನಾಚಾರಿಗಳು ಎಂದರ್ಥವಲ್ಲ ಎಂದು ಕೆಲ ವಿಚಾರವಾದಿಗಳು ವಾದ ಮಂಡಿಸಿದ್ದರು. ಚರ್ಚೆಯು ವಿವಾದದ ಸ್ವರೂಪ ತಾಳಿದ್ದನ್ನು ಗಮನಿಸಿದ ಭರಣಿ ಸಾಮಾಜಿಕ ಜಾಲತಾಣದಲ್ಲಿ ಕ್ಷಮಾಪಣೆ ಕೋರಿದ್ದಾರೆ.

ಕೈಮುಗಿದು ಕ್ಷಮೆ ಕೇಳುತ್ತಿದ್ದೇನೆ ಎಂದ ಭರಣಿ
ವಿಡಿಯೋ ಪ್ರಕಟಿಸಿರುವ ಭರಣಿ, 'ಕೆಲವು ದಿನಗಳಿಂದ ನಾನು ಫೇಸ್ಬುಕ್ನಲ್ಲಿ ಪ್ರಕಟಿಸುತ್ತಿರುವ 'ಶಭಾಷ್ ರ ಶಂಕರ' ಪದ್ಯಗಳಲ್ಲಿ ಒಂದು ಪದ್ಯದಲ್ಲಿನ ಕೆಲವು ಸಾಲುಗಳು ದುರಾದೃಷ್ಟವಶಾತ್ ಕೆಲವರ ಮನಸ್ಸನ್ನು ನೋಯಿಸಿವೆ. ಹಾಗಾಗಿ ನಾನು ಕೈಮುಗಿದು ಬೇಷರತ್ತು ಕ್ಷಮೆ ಕೇಳುತ್ತೇನೆ' ಎಂದಿದ್ದಾರೆ ಭರಣಿ.

ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದೇನೆ: ಭರಣಿ
'ನನಗೆ ವಿಚಾರವಾದಿಗಳೆಂದರೆ, ಮಾನವತಾವಾದಿಗಳೆಂದರೆ ಬಹಳ ಗೌರವ. ನಾನು ಬರೆದ ಸಾಲುಗಳಿಗೆ ನಾನು ವಿವರಣೆ ನೀಡುವುದಿಲ್ಲ, ಹಾಗೆ ಮಾಡಿದಲ್ಲಿ 'ಡಿಫೆಂಡ್' ಮಾಡಿಕೊಂಡಂತಾಗುತ್ತದೆ. ನಾನು ಬರೆದ ಆ ಕವಿತೆಯನ್ನು ಸಹ ಫೇಸ್ಬುಕ್ನಿಂದ ಡಿಲೀಟ್ ಮಾಡಿದ್ದೀನಿ' ಎಂದಿದ್ದಾರೆ ಭರಣಿ.

750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ
ಭರಣಿ ಅವರು ತೆಲುಗು ಚಿತ್ರರಂಗದ ಬಹು ಬೇಡಿಕೆಯ ಪೋಷಕ ನಟ. 1985 ರಿಂದಲೂ ಸಿನಿಮಾಗಳಲ್ಲಿ ನಟಿಸುತ್ತಿರುವ ಭರಣಿ ಈವರೆಗೆ 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಲವಾರು ಸಿನಿಮಾಗಳಿಗೆ ಸಂಭಾಷಣೆ, ಚಿತ್ರಕತೆ ಸಹ ಬರೆದಿರುವ ಭರಣಿ. ಎಸ್.ಪಿ.ಬಾಲಸುಬ್ರಹ್ಮಣ್ಯಂ-ಲಕ್ಷ್ಮಿ ನಟಿಸಿರುವ 'ಮಿಥುನಂ' ಸಿನಿಮಾವನ್ನು ನಿರ್ದೇಶನ ಸಹ ಮಾಡಿದ್ದಾರೆ.
This News Article Is A Copy Of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm