ಬ್ರೇಕಿಂಗ್ ನ್ಯೂಸ್
22-04-21 08:39 pm Source: FILMIBEAT ಸಿನಿಮಾ
ಕೊರೊನಾ ಪಾಸಿಟಿವ್ ಆಗಿರುವ ನಟಿ ಅನು ಪ್ರಭಾಕರ್ ಮುಖರ್ಜಿ ಅವರು ಸರ್ಕಾರವು ಕೊರೊನಾ ಪ್ರಕರಣಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡುತ್ತಿಲ್ಲದಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ನಟಿ ಅನು ಪ್ರಭಾಕರ್ ಅವರಿಗೆ ಏಪ್ರಿಲ್ 17 ರಂದು ಕೊರೊನಾ ಪಾಸಿಟಿವ್ ಆಗಿತ್ತು. ಅವರಿಗೆ ಸ್ಯಾಂಪಲ್ ರೆಫರಸ್ ಫಾರ್ಮ್ ನಂಬರ್ ಸಹ ದೊರಕಿತ್ತು. ಆದರೆ ಅದಾಗಿ ನಾಲ್ಕು ದಿನವಾದರೂ ಅನು ಪ್ರಭಾಕರ್ ಅವರ ದಾಖಲೆಗಳು ಕೋವಿಡ್ ವಾರ್ ವೆಬ್ಸೈಟ್ಗೆ ಅಪ್ಲೋಡ್ ಆಗಿರಲಿಲ್ಲ. ಈ ಬಗ್ಗೆ ಸಚಿವ ಸುಧಾಕರ್ ಅವರಿಗೆ ಟ್ವೀಟ್ ಮಾಡಿದ್ದ ಅನು ಪ್ರಭಾಕರ್, ನನಗೆ ಈ ವರೆಗೆ ಬಿಯು ನಂಬರ್ ಸಹ ದೊರೆತಿಲ್ಲ ಹಾಗೂ ಬಿಬಿಎಂಪಿಯಿಂದ ಕರೆ ಸಹ ಬಂದಿಲ್ಲ' ಎಂದಿದ್ದರು.
ಇದೀಗ ಅನುಪ್ರಭಾಕರ್ ಅವರು ಅವರ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಿರು ವಿಡಿಯೋಗಳನ್ನು ಪ್ರಕಟಿಸುವ ಮೂಲಕ ಜನರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.
ಅನು ಪ್ರಭಾಕರ್ ಅವರಿಗೆ ಪಾಸಿಟಿವ್ ಬಂದಿದೆಯಾದರೂ ಅವರ ಕುಟುಂಬದವರಿಗೆ ನೆಗೆಟಿವ್ ಬಂದಿದೆ. ಇದು ಹೇಗೆ ಸಾಧ್ಯವಾಯಿತು ಎಂಬುದರ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಿರುವ ಅನು ಪ್ರಭಾಕರ್, 'ನನಗೆ ಕಳೆದ ವಾರವೇ ರುಚಿ ಮತ್ತು ವಾಸನೆ ಗ್ರಹಿಕೆ ನಿಧಾನಕ್ಕೆ ಕಡಿಮೆಯಾಗುತ್ತಾ ಬಂತು. ಕೂಡಲೇ ನಾನು ವೈದ್ಯೆ ಆಗಿರುವ ನನ್ನ ಸಹೋದರಿಗೆ ಕರೆ ಮಾಡಿದೆ, ಆಕೆಯ ಸಲಹೆಯಂತೆ ಪರೀಕ್ಷೆಗೆ ಒಳಪಟ್ಟೆ ಹಾಗೂ ವರದಿಗಾಗಿ ಕಾಯದೆ ನನ್ನ ಕುಟುಂಬದವರಿಂದ ಪ್ರತ್ಯೇಕವಾಗಿ ಇದ್ದು ಐಸೋಲೇಶನ್ಗೆ ಒಳಪಟ್ಟೆ.
ಬಹುಷಃ ಹಾಗಾಗಿ ನನ್ನ ಕುಟುಂಬದವರಿಗೆ ನೆಗೆಟಿವ್ ಬಂತು' ಎಂದಿದ್ದಾರೆ. 'ಯಾರಿಗೇ ಆಗಲಿ ರೋಗ ಲಕ್ಷಣಗಳು ಬಂದ ಕೂಡಲೇ ಪರೀಕ್ಷೆಗೆ ಒಳಪಡಿ ಮತ್ತು ವರದಿಗಾಗಿ ಕಾಯದೆ ಮೊದಲು ಐಸೋಲೇಷನ್ ಆಗಿ' ಎಂದು ಮನವಿ ಮಾಡಿದ್ದಾರೆ ಅನು ಪ್ರಭಾಕರ್. ನಟಿಯ ಈ ಜಾಗೃತಿ ವಿಡಿಯೋವನ್ನು ಕರ್ನಾಟಕ ಆರೋಗ್ಯ ಇಲಾಖೆ ಸಹ ರೀಟ್ವೀಟ್ ಮಾಡಿದೆ.
This News Article Is A Copy Of FILMIBEAT
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm