ಬ್ರೇಕಿಂಗ್ ನ್ಯೂಸ್
22-04-21 08:39 pm Source: FILMIBEAT ಸಿನಿಮಾ
ಕೊರೊನಾ ಪಾಸಿಟಿವ್ ಆಗಿರುವ ನಟಿ ಅನು ಪ್ರಭಾಕರ್ ಮುಖರ್ಜಿ ಅವರು ಸರ್ಕಾರವು ಕೊರೊನಾ ಪ್ರಕರಣಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡುತ್ತಿಲ್ಲದಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ನಟಿ ಅನು ಪ್ರಭಾಕರ್ ಅವರಿಗೆ ಏಪ್ರಿಲ್ 17 ರಂದು ಕೊರೊನಾ ಪಾಸಿಟಿವ್ ಆಗಿತ್ತು. ಅವರಿಗೆ ಸ್ಯಾಂಪಲ್ ರೆಫರಸ್ ಫಾರ್ಮ್ ನಂಬರ್ ಸಹ ದೊರಕಿತ್ತು. ಆದರೆ ಅದಾಗಿ ನಾಲ್ಕು ದಿನವಾದರೂ ಅನು ಪ್ರಭಾಕರ್ ಅವರ ದಾಖಲೆಗಳು ಕೋವಿಡ್ ವಾರ್ ವೆಬ್ಸೈಟ್ಗೆ ಅಪ್ಲೋಡ್ ಆಗಿರಲಿಲ್ಲ. ಈ ಬಗ್ಗೆ ಸಚಿವ ಸುಧಾಕರ್ ಅವರಿಗೆ ಟ್ವೀಟ್ ಮಾಡಿದ್ದ ಅನು ಪ್ರಭಾಕರ್, ನನಗೆ ಈ ವರೆಗೆ ಬಿಯು ನಂಬರ್ ಸಹ ದೊರೆತಿಲ್ಲ ಹಾಗೂ ಬಿಬಿಎಂಪಿಯಿಂದ ಕರೆ ಸಹ ಬಂದಿಲ್ಲ' ಎಂದಿದ್ದರು.
ಇದೀಗ ಅನುಪ್ರಭಾಕರ್ ಅವರು ಅವರ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಿರು ವಿಡಿಯೋಗಳನ್ನು ಪ್ರಕಟಿಸುವ ಮೂಲಕ ಜನರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.
ಅನು ಪ್ರಭಾಕರ್ ಅವರಿಗೆ ಪಾಸಿಟಿವ್ ಬಂದಿದೆಯಾದರೂ ಅವರ ಕುಟುಂಬದವರಿಗೆ ನೆಗೆಟಿವ್ ಬಂದಿದೆ. ಇದು ಹೇಗೆ ಸಾಧ್ಯವಾಯಿತು ಎಂಬುದರ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಿರುವ ಅನು ಪ್ರಭಾಕರ್, 'ನನಗೆ ಕಳೆದ ವಾರವೇ ರುಚಿ ಮತ್ತು ವಾಸನೆ ಗ್ರಹಿಕೆ ನಿಧಾನಕ್ಕೆ ಕಡಿಮೆಯಾಗುತ್ತಾ ಬಂತು. ಕೂಡಲೇ ನಾನು ವೈದ್ಯೆ ಆಗಿರುವ ನನ್ನ ಸಹೋದರಿಗೆ ಕರೆ ಮಾಡಿದೆ, ಆಕೆಯ ಸಲಹೆಯಂತೆ ಪರೀಕ್ಷೆಗೆ ಒಳಪಟ್ಟೆ ಹಾಗೂ ವರದಿಗಾಗಿ ಕಾಯದೆ ನನ್ನ ಕುಟುಂಬದವರಿಂದ ಪ್ರತ್ಯೇಕವಾಗಿ ಇದ್ದು ಐಸೋಲೇಶನ್ಗೆ ಒಳಪಟ್ಟೆ.
ಬಹುಷಃ ಹಾಗಾಗಿ ನನ್ನ ಕುಟುಂಬದವರಿಗೆ ನೆಗೆಟಿವ್ ಬಂತು' ಎಂದಿದ್ದಾರೆ. 'ಯಾರಿಗೇ ಆಗಲಿ ರೋಗ ಲಕ್ಷಣಗಳು ಬಂದ ಕೂಡಲೇ ಪರೀಕ್ಷೆಗೆ ಒಳಪಡಿ ಮತ್ತು ವರದಿಗಾಗಿ ಕಾಯದೆ ಮೊದಲು ಐಸೋಲೇಷನ್ ಆಗಿ' ಎಂದು ಮನವಿ ಮಾಡಿದ್ದಾರೆ ಅನು ಪ್ರಭಾಕರ್. ನಟಿಯ ಈ ಜಾಗೃತಿ ವಿಡಿಯೋವನ್ನು ಕರ್ನಾಟಕ ಆರೋಗ್ಯ ಇಲಾಖೆ ಸಹ ರೀಟ್ವೀಟ್ ಮಾಡಿದೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm