ಬ್ರೇಕಿಂಗ್ ನ್ಯೂಸ್
28-04-21 11:16 am Headline Karnataka News Network ಸಿನಿಮಾ
ಬೆಂಗಳೂರು, ಎ.28: ಸ್ಯಾಂಡಲ್ ವುಡ್ ನಟ ಕೋಮಲ್ ಗೆ ಕೊರೋನಾ ಸೋಂಕು ತಗುಲಿದೆ. ಅವರಿಗೆ ಕೃತಕ ಆಮ್ಲಜನಕ ವ್ಯವಸ್ಥೆ ಮಾಡಲಾಗಿದ್ದು ತಮ್ಮನನ್ನು ಉಳಿಸಿಕೊಡಿ ಎಂದು ನವರಸ ನಾಯಕ ಜಗ್ಗೇಶ್ ಮಂತ್ರಾಲಯದ ರಾಯರ ಪಾದಕ್ಕೆ ಶರಣಾಗಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಹೇಳಿಕೊಂಡಿರುವ ನಟ ಜಗ್ಗೇಶ್ "ತಮ್ಮನಿಗೆ ಕೊರೊನಾ ಮಾರಿ ಮೈಸೇರಿ ತುಂಬ serious ಆಗಿಬಿಟ್ಟ! ದೇವರಿಗೆ ಗೊತ್ತು , ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ ! ಅವನಿಗೆ ಸಹಾಯ ಮಾಡಿದ ಡಾ.ಮಧುಮತಿ, ನಾದಿನಿ ಡಾ. ಲಲಿತ, ನರ್ಸ್ ಗಳ ಪಾದಕ್ಕೆ ನನ್ನ ನಮನ ಎಂದಿದ್ದಾರೆ.

ಅಲ್ಲದೆ ನಾನು ಇಷ್ಟು ದಿನ ಮುಚ್ಚಿಟ್ಟು ಪಡುತ್ತಿದ್ದ ಯಾತನೆ ರಾಯರಿಗೆ ಮಾತ್ರ ಗೊತ್ತು!ಭಕ್ತನ ಗುರುಗಳ ನಡುವೆ ನಡೆದಿತ್ತು ಭಾವನಾತ್ಮಕ ಭಕ್ತಿಯ ಬೇಡಿಕೆ! ಅದು ಒಂದೇ ರಾಯರೇ ನಾನು ಕಾಯಾವಾಚಾ ಮನಸಾ ಸತ್ಯವಾಗಿ ನಡೆದುಕೊಂಡಿದ್ದರೆ, ಹೃದಯದಿಂದ ಒಳ್ಳೆಯತನ ಅನುಸರಿಸಿದ್ದರೆ, ಮನುಷ್ಯ ಪಕ್ಷಿ ಪ್ರಾಣಿಯ ಆತ್ಮದಲ್ಲಿ ಸಮಾನವಾಗಿ ದೇವರಿದ್ದಾನೆ ಎಂದು ನಂಬಿದ್ದರೆ, ಯಾರಿಗೂ ಕೇಡು ಬಯಸದೆ ಮೋಸ ವಂಚನೆ ಅನ್ಯಾಯ ಮಾರ್ಗದಲ್ಲಿ ನಡೆದು ನೊಂದವರಿಗೆ ನಂಬಿದವರಿಗು ಭುಜಕೊಟ್ಟು ಬದುಕಿದ್ದರೆ, ನನ್ನ ತಂದೆ ತಾಯಿಯನ್ನು ನೋಯಿಸದೆ ಉತ್ತಮ ಮಗನಂತೆ ಸಂತೈಸಿದ್ದರೆ, ಅನ್ನಕೊಟ್ಟ ಶಾರದೆ ಸೇವೆ ನಿಷ್ಟೆಯಿಂದ ಮಾಡಿದ್ದರೆ, ಕಾಯಕ ಮಾಡುವ ಎಲ್ಲಾ ಕ್ಷೇತ್ರದಲ್ಲೂ ಪ್ರಾಮಾಣಿಕನಾಗಿದ್ದರೆ, ರಾಯರು ನನ್ನ ಹೃದಯಲ್ಲಿದ್ದರೆ ಸಾವಿನ ಮನೆ ಕದ ತಟ್ಟುತ್ತಿರುವ ನನ್ನ ತಮ್ಮನಿಗೆ ಸಾವು ಗೆಲ್ಲುವ ಶಕ್ತಿ ನೀಡಿ ಎಂದು! ರಾಯರು ನನ್ನ ಬೇಡಿಕೆಗೆ ಬೃಂದಾವನದಿಂದ ಎದ್ದು ಬಂದು ಪಕ್ಕ ನಿಂತು ಅವನ ಉಳಿಸಿಬಿಟ್ಟರು ! komal is safe..

ಚಿತ್ರರಂಗದಲ್ಲಿ ಸಂಕಷ್ಟ ಅನುಭವಿಸಿದ ಕೋಮಲ್ ಸ್ವಾಭಿಮಾನದಿಂದ ಬದುಕಲು ಸ್ವಂತ ವ್ಯವಹಾರ ಬೆಂಗಳೂರಿನ ಕಾರ್ಪೊರೇಷನ್ ನಲ್ಲಿ ಶುರುಮಾಡಿ ಯಶಸ್ವಿಯಾದ! ಆದರೆ ಇತ್ತೀಚೆಗೆ ತನಗೆ ಬರಬೇಕಾದ billಗೆ ಅಲ್ಲಿನ ಕೆಲ ಲಂಚಬಾಕ ಅಧಿಕಾರಿಗಳು ಹಣಕ್ಕೆ ಪೀಡಿಸಿ ಅಲೆಸಿಬಿಟ್ಟರು! ಅದನ್ನು ಪಡೆಯಲು ದಿನ ಓಡಾಡುತ್ತಿದ್ದ ತಮ್ಮನಿಗೆ ಕೊರೋನ ಮಾರಿ ಮೈಸೇರಿ ತುಂಬ serious ಆಗಿಬಿಟ್ಟ! ದೇವರಿಗೆ ಗೊತ್ತು ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ!" ಎಂದಿದ್ದಾರೆ.
ನನ್ನ ತಮ್ಮನಿಗೆ ಸಾವು ಗೆಲ್ಲುವ ಶಕ್ತಿ ನೀಡಿ ಎಂದು!ರಾಯರು ನನ್ನ ಬೇಡಿಕೆಗೆ ಬೃಂದಾವನದಿಂದ ಎದ್ದುಬಂದು ಪಕ್ಕನಿಂತು ಅವನ ಉಳಿಸಿಬಿಟ್ಟರು!komal is safe🙏ಚಿತ್ರರಂಗದಲ್ಲಿ ಸಂಕಷ್ಟ ಅನುಭವಿಸಿದ ಕೋಮಲ್ ಸ್ವಾಭಿಮಾನದಿಂದ ಬದುಕಲು
— ನವರಸನಾಯಕ ಜಗ್ಗೇಶ್ (@Jaggesh2) April 27, 2021
ಸ್ವಂತ ವ್ಯೆವಹಾರ ಬೆಂಗಳೂರಿನ ಕಾರ್ಪೊರೇಷನ್ ನಲ್ಲಿ ಶುರುಮಾಡಿ ಯಶಸ್ವಿಯಾದ!ಆದರೆ ಇತ್ತೀಚೆಗೆ ತನಗೆ ಬರಬೇಕಾದ bill
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm