ಬ್ರೇಕಿಂಗ್ ನ್ಯೂಸ್
28-04-21 05:58 pm Source: FILMIBEAT ಸಿನಿಮಾ
ಕನ್ನಡ ಚಿತ್ರರಂಗದಲ್ಲಿ ಮೇಕಪ್ ಸೀನಣ್ಣ ಎಂದೇ ಖ್ಯಾತಿಗಳಿಸಿದ್ದ ಮೇಕಪ್ ಕಲಾವಿದ ಶ್ರೀನಿವಾಸ್ ಇಂದು (ಏಪ್ರಿಲ್ 28) ಕೊನೆಯುಸಿರೆಳೆದಿದ್ದಾರೆ. ಉಸಿರಾಟ ಸಮಸ್ಯೆಯಿಂದ ಬಳುತ್ತಿದ್ದ ಶ್ರೀನಿವಾಸ್ ಅವರನ್ನು ಕೆಲವು ದಿನಗಳ ಹಿಂದೆ ಆಸ್ಪತ್ರೆೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಅನೇಕ ವರ್ಷಗಳಿಂದ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಅವರು ಅನೇಕ ಖ್ಯಾತ ಕಲಾವಿದರಿಗೆ ಬಣ್ಣ ಹಚ್ಚಿದ್ದಾರೆ. ಸದ್ಯ ಶ್ರೀನಿವಾಸ್ ಅವರು ವರ್ಣಾಲಂಕಾರ ಮತ್ತು ಕೇಶಲಂಕಾರ ಕಲಾವಿದರ ಸಂಘದ ಉಪಾಧ್ಯಕ್ಷರಾಗಿದ್ದರು.
ಸೀನಣ್ಣ ನಿರ್ದೇಶಕ ಚೇತನ್ ಕುಮಾರ್ ಸಾರಥ್ಯ ಬಹದ್ದೂರ್, ಭರ್ಜರಿ, ಭರಾಟೆ ಮತ್ತು ಇನ್ನು ಅನೇಕ ಸಿನಿಮಾಗಳಿಗೆ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡಿದ್ದಾರೆ. ಸದ್ಯ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾಗೂ ಮೇಕಪ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅನೇಕ ಯುವ ನಿರ್ದೇಶಕರ ಸಿನಿಮಾಗಳಿಗೆ ಸೀನಣ್ಣ ಕೆಲಸ ಮಾಡಿದ್ದಾರೆ.
ಸೀನಣ್ಣ ನಿಧನಕ್ಕೆ ನಿರ್ದೇಶಕ ಚೇತನ್ ಸಂತಾಪ ಸೂಚಿಸಿದ್ದಾರೆ. 'ನಮ್ಮ ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಚಿತ್ರಗಳಿಗೆ ಹಾಗೂ ಕನ್ನಡದ ಬಹಳಷ್ಟು ಚಿತ್ರಗಳಿಗೆ ಕಂಪೆನಿ ಮೇಕಪ್ ಮ್ಯಾನ್ ಆಗಿ (ವರ್ಣಾಲಂಕಾರ) ಕಾರ್ಯನಿರ್ವಹಿಸಿದ "ಮೇಕಪ್ ಸೀನಣ್ಣ" (ಶ್ರೀನಿವಾಸ್) ರವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ ಅಣ್ಣ' ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ನಿರ್ದೇಶಕ ಎಪಿ ಅರ್ಜುನ್ ಟ್ವೀಟ್ ಮಾಡಿ. 'ನನ್ನ ಎಲ್ಲಾ ಸಿನಿಮಾಗಳಿಗೂ makeup ಕಲಾವಿದರಾಗಿ ಕೆಲಸ ನಿರ್ವಹಿಸುತ್ತಿದ್ದ ಸೀನಣ್ಣ ಇಂದು ಬೆಳಿಗ್ಗೆ ದೈವಾಧೀನರಾಗಿದ್ದಾರೆ. ಒಂದು ವಾರದ ಹಿಂದೆ ನಗುನಗುತ್ತಾ ಬಂದು ಭೇಟಿಯಾಗಿದ್ದ ವ್ಯಕ್ತಿ ಇಂದು ಇಲ್ಲ ಎಂದರೆ ನಿಜವಾಗಿಯೂ ನಂಬಲಾಗುತ್ತಿಲ್ಲ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಸೀನಣ್ಣ' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm