ಬ್ರೇಕಿಂಗ್ ನ್ಯೂಸ್
28-04-21 05:58 pm Source: FILMIBEAT ಸಿನಿಮಾ
ಕನ್ನಡ ಚಿತ್ರರಂಗದಲ್ಲಿ ಮೇಕಪ್ ಸೀನಣ್ಣ ಎಂದೇ ಖ್ಯಾತಿಗಳಿಸಿದ್ದ ಮೇಕಪ್ ಕಲಾವಿದ ಶ್ರೀನಿವಾಸ್ ಇಂದು (ಏಪ್ರಿಲ್ 28) ಕೊನೆಯುಸಿರೆಳೆದಿದ್ದಾರೆ. ಉಸಿರಾಟ ಸಮಸ್ಯೆಯಿಂದ ಬಳುತ್ತಿದ್ದ ಶ್ರೀನಿವಾಸ್ ಅವರನ್ನು ಕೆಲವು ದಿನಗಳ ಹಿಂದೆ ಆಸ್ಪತ್ರೆೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಅನೇಕ ವರ್ಷಗಳಿಂದ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಅವರು ಅನೇಕ ಖ್ಯಾತ ಕಲಾವಿದರಿಗೆ ಬಣ್ಣ ಹಚ್ಚಿದ್ದಾರೆ. ಸದ್ಯ ಶ್ರೀನಿವಾಸ್ ಅವರು ವರ್ಣಾಲಂಕಾರ ಮತ್ತು ಕೇಶಲಂಕಾರ ಕಲಾವಿದರ ಸಂಘದ ಉಪಾಧ್ಯಕ್ಷರಾಗಿದ್ದರು.
ಸೀನಣ್ಣ ನಿರ್ದೇಶಕ ಚೇತನ್ ಕುಮಾರ್ ಸಾರಥ್ಯ ಬಹದ್ದೂರ್, ಭರ್ಜರಿ, ಭರಾಟೆ ಮತ್ತು ಇನ್ನು ಅನೇಕ ಸಿನಿಮಾಗಳಿಗೆ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡಿದ್ದಾರೆ. ಸದ್ಯ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾಗೂ ಮೇಕಪ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅನೇಕ ಯುವ ನಿರ್ದೇಶಕರ ಸಿನಿಮಾಗಳಿಗೆ ಸೀನಣ್ಣ ಕೆಲಸ ಮಾಡಿದ್ದಾರೆ.
ಸೀನಣ್ಣ ನಿಧನಕ್ಕೆ ನಿರ್ದೇಶಕ ಚೇತನ್ ಸಂತಾಪ ಸೂಚಿಸಿದ್ದಾರೆ. 'ನಮ್ಮ ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಚಿತ್ರಗಳಿಗೆ ಹಾಗೂ ಕನ್ನಡದ ಬಹಳಷ್ಟು ಚಿತ್ರಗಳಿಗೆ ಕಂಪೆನಿ ಮೇಕಪ್ ಮ್ಯಾನ್ ಆಗಿ (ವರ್ಣಾಲಂಕಾರ) ಕಾರ್ಯನಿರ್ವಹಿಸಿದ "ಮೇಕಪ್ ಸೀನಣ್ಣ" (ಶ್ರೀನಿವಾಸ್) ರವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ ಅಣ್ಣ' ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ನಿರ್ದೇಶಕ ಎಪಿ ಅರ್ಜುನ್ ಟ್ವೀಟ್ ಮಾಡಿ. 'ನನ್ನ ಎಲ್ಲಾ ಸಿನಿಮಾಗಳಿಗೂ makeup ಕಲಾವಿದರಾಗಿ ಕೆಲಸ ನಿರ್ವಹಿಸುತ್ತಿದ್ದ ಸೀನಣ್ಣ ಇಂದು ಬೆಳಿಗ್ಗೆ ದೈವಾಧೀನರಾಗಿದ್ದಾರೆ. ಒಂದು ವಾರದ ಹಿಂದೆ ನಗುನಗುತ್ತಾ ಬಂದು ಭೇಟಿಯಾಗಿದ್ದ ವ್ಯಕ್ತಿ ಇಂದು ಇಲ್ಲ ಎಂದರೆ ನಿಜವಾಗಿಯೂ ನಂಬಲಾಗುತ್ತಿಲ್ಲ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಸೀನಣ್ಣ' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
This News Article Is A Copy Of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm