ಬ್ರೇಕಿಂಗ್ ನ್ಯೂಸ್
28-04-21 05:58 pm Source: FILMIBEAT ಸಿನಿಮಾ
ಕನ್ನಡ ಚಿತ್ರರಂಗದಲ್ಲಿ ಮೇಕಪ್ ಸೀನಣ್ಣ ಎಂದೇ ಖ್ಯಾತಿಗಳಿಸಿದ್ದ ಮೇಕಪ್ ಕಲಾವಿದ ಶ್ರೀನಿವಾಸ್ ಇಂದು (ಏಪ್ರಿಲ್ 28) ಕೊನೆಯುಸಿರೆಳೆದಿದ್ದಾರೆ. ಉಸಿರಾಟ ಸಮಸ್ಯೆಯಿಂದ ಬಳುತ್ತಿದ್ದ ಶ್ರೀನಿವಾಸ್ ಅವರನ್ನು ಕೆಲವು ದಿನಗಳ ಹಿಂದೆ ಆಸ್ಪತ್ರೆೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಅನೇಕ ವರ್ಷಗಳಿಂದ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಅವರು ಅನೇಕ ಖ್ಯಾತ ಕಲಾವಿದರಿಗೆ ಬಣ್ಣ ಹಚ್ಚಿದ್ದಾರೆ. ಸದ್ಯ ಶ್ರೀನಿವಾಸ್ ಅವರು ವರ್ಣಾಲಂಕಾರ ಮತ್ತು ಕೇಶಲಂಕಾರ ಕಲಾವಿದರ ಸಂಘದ ಉಪಾಧ್ಯಕ್ಷರಾಗಿದ್ದರು.
ಸೀನಣ್ಣ ನಿರ್ದೇಶಕ ಚೇತನ್ ಕುಮಾರ್ ಸಾರಥ್ಯ ಬಹದ್ದೂರ್, ಭರ್ಜರಿ, ಭರಾಟೆ ಮತ್ತು ಇನ್ನು ಅನೇಕ ಸಿನಿಮಾಗಳಿಗೆ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡಿದ್ದಾರೆ. ಸದ್ಯ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾಗೂ ಮೇಕಪ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅನೇಕ ಯುವ ನಿರ್ದೇಶಕರ ಸಿನಿಮಾಗಳಿಗೆ ಸೀನಣ್ಣ ಕೆಲಸ ಮಾಡಿದ್ದಾರೆ.
ಸೀನಣ್ಣ ನಿಧನಕ್ಕೆ ನಿರ್ದೇಶಕ ಚೇತನ್ ಸಂತಾಪ ಸೂಚಿಸಿದ್ದಾರೆ. 'ನಮ್ಮ ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಚಿತ್ರಗಳಿಗೆ ಹಾಗೂ ಕನ್ನಡದ ಬಹಳಷ್ಟು ಚಿತ್ರಗಳಿಗೆ ಕಂಪೆನಿ ಮೇಕಪ್ ಮ್ಯಾನ್ ಆಗಿ (ವರ್ಣಾಲಂಕಾರ) ಕಾರ್ಯನಿರ್ವಹಿಸಿದ "ಮೇಕಪ್ ಸೀನಣ್ಣ" (ಶ್ರೀನಿವಾಸ್) ರವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ ಅಣ್ಣ' ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ನಿರ್ದೇಶಕ ಎಪಿ ಅರ್ಜುನ್ ಟ್ವೀಟ್ ಮಾಡಿ. 'ನನ್ನ ಎಲ್ಲಾ ಸಿನಿಮಾಗಳಿಗೂ makeup ಕಲಾವಿದರಾಗಿ ಕೆಲಸ ನಿರ್ವಹಿಸುತ್ತಿದ್ದ ಸೀನಣ್ಣ ಇಂದು ಬೆಳಿಗ್ಗೆ ದೈವಾಧೀನರಾಗಿದ್ದಾರೆ. ಒಂದು ವಾರದ ಹಿಂದೆ ನಗುನಗುತ್ತಾ ಬಂದು ಭೇಟಿಯಾಗಿದ್ದ ವ್ಯಕ್ತಿ ಇಂದು ಇಲ್ಲ ಎಂದರೆ ನಿಜವಾಗಿಯೂ ನಂಬಲಾಗುತ್ತಿಲ್ಲ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಸೀನಣ್ಣ' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
This News Article Is A Copy Of FILMIBEAT
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am