ಬ್ರೇಕಿಂಗ್ ನ್ಯೂಸ್
29-04-21 05:56 pm Source: FILMIBEAT ಸಿನಿಮಾ
ಕೊರೊನಾ ಸಂಕಷ್ಟದ ಸಮಯದಲ್ಲಿ ಸಿನಿಮಾ ನಟ-ನಟಿಯರು ತಮ್ಮ ಜವಾಬ್ದಾರಿ ಮರೆತಿದ್ದಾರೆ ಎಂಬ ಆರೋಪ ದಟ್ಟವಾಗಿ ಕೇಳಿ ಬರುತ್ತಿದೆ. ಅದರಲ್ಲಿಯೂ ಬಾಲಿವುಡ್ ನಟ-ನಟಿಯರ ಮೇಲಂತೂ ಆರೋಪ ಹೆಚ್ಚಿಗೇ ಇದೆ. ಕೆಲವಾರು ನಟರು ಈ ಸಂಕಷ್ಟದ ಸಮಯಕ್ಕೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ.
ಸೋನು ಸೂದ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಇನ್ನೂ ಕೆಲವು ನಟರು ಆಮ್ಲಜನಕ ಪೂರೈಕೆ, ಬೆಡ್ ಪೂರೈಕೆ, ಉಚಿತ ಆಹಾರ ಪೂರೈಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ದಕ್ಷಿಣ ಭಾರತದ ನಟರು ಕೊರೊನಾ ಸಂಕಷ್ಟಕ್ಕೆ ಸ್ಪಂದಿಸಿರುವುದು ಹೆಚ್ಚಾಗಿ ಸದ್ದಿಯಾಗಿಲ್ಲ. ತಮಿಳಿನ ಖ್ಯಾತ ನಟ ವಿಜಯ್ ಅವರ ಅಭಿಮಾನಿಗಳು ಮಾತ್ರ ಕೊರೊನಾ ರೋಗಿಗಳ ನೆರವಿಗೆ ನಿಂತಿರುವುದು ಪ್ರಶಂಸೆಗೆ ಗುರಿಯಾಗಿದೆ.
ತಮಿಳುನಾಡಿನ ವಿರುಧಾಚಲಮ್ನ ವಿಜಯ್ ಅಭಿಮಾನಿಗಳು ಕೊರೊನಾದಿಂದ ಸಂಕಷ್ಟದಲ್ಲಿರುವವರಿಗಾಗಿ 10 ಆಮ್ಲಜನಕ ಸಿಲಿಂಡರ್ಗಳು, ಹಲವು ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ಗಳನ್ನು ಉಚಿತವಾಗಿ ವಿತರಣೆ ಮಾಡಿದ್ದಾರೆ. ವಿಜಯ್ ಅಭಿಮಾನಿಗಳು ನೆರವಿನ ಹಸ್ತ ಚಾಚಿರುವುದು ಇದು ಮೊದಲೇನಲ್ಲ. ಚೆನ್ನೈ ಹಾಗೂ ಕೇರಳ ಪ್ರವಾಹದ ಸಂದರ್ಭದಲ್ಲಿ, ಕಳೆದ ವರ್ಷ ಕೊರೊನಾ ಸಮಯದಲ್ಲಿ ದೊಡ್ಡ ಮಟ್ಟದ ಸಹಾಯವನ್ನು ವಿಜಯ್ ಅಭಿಮಾನಿಗಳ ಸಂಘದ ವತಿಯಿಂದ ಮಾಡಲಾಗಿತ್ತು.
ಸ್ವತಃ ನಟ ವಿಜಯ್ ಸಹ ಹಲವಾರು ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳಿಗೆ, ಅಭಿಮಾನಿಗಳ ಸಂಕಷ್ಟಕ್ಕೆ, ಕೊರೊನಾ ಸಮಯದಲ್ಲಿ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದರು. ಕಳೆದ ವರ್ಷ ಕೊರೊನಾ ಸಮಯದಲ್ಲಿ 1.30 ಕೋಟಿಯನ್ನು ಸರ್ಕಾರಕ್ಕೆ ದೇಣಿಗೆ ನೀಡಿದ್ದರು.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm