ಬ್ರೇಕಿಂಗ್ ನ್ಯೂಸ್
03-05-21 02:47 pm Source: FILMIBEAT Shruthi Gk ಸಿನಿಮಾ
ಕೊರೊನಾ ಸೋಂಕಿತರು ಆಕ್ಸಿಜನ್, ಆಸ್ಪತ್ರೆ, ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಸಾವಿರಾರು ಮಂದಿ ಕೊರೊನಾಗೆ ಬಲಿಯಾಗುತ್ತಿದ್ದಾರೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆಯು ಹೆಚ್ಚಾಗುತ್ತಿದ್ದೆ. ಕೊರೊನಾ ಭೀಕರ ಸ್ಥಿತಿಗೆ ಇಡೀ ದೇಶ ನಲುಗಿ ಹೋಗಿದೆ.
ಈ ಸಂಕಷ್ಟದ ಸ್ಥಿತಿಯಲ್ಲಿ ಅನೇಕರು ಮುಂದೆ ಬಂದು ಸಹಾಯ ಮಾಡುತ್ತಿದ್ದಾರೆ. ಅಗತ್ಯ ಇರುವವರಿಗೆ ಆಕ್ಸಿಜನ್ ವ್ಯವಸ್ಥೆ ಮಾಡಿಸುತ್ತಿದ್ದಾರೆ. ಅನೇಕ ಸಿನಿಸೆಲೆಬ್ರಿಟಿಗಳು ಸಹ ಕಷ್ಟದಲ್ಲಿ ಇರೋರಿಗೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಖ್ಯಾತ ನಟ ಹರ್ಷವರ್ಧನ್ ರಾಣೆ ಕೂಡ ಕೋವಿಡ್ ರೋಗಿಗಳ ಸಹಾಯ ನಿಂತಿದ್ದಾರೆ.
ಆಮ್ಲಜನಕ ಕೊರತೆ ನೀಗಿಸಲು ಹರ್ಷವರ್ಧನ್ ತನ್ನ ಪ್ರೀತಿಯ ಬೈಕ್ ಅನ್ನೇ ಮಾರಾಟಕ್ಕೆ ಇಟ್ಟಿದ್ದಾರೆ. ಈ ಬಗ್ಗೆ ಹರ್ಷವರ್ಧನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ತನ್ನ ನೆಚ್ಚಿನ ಬೈಕ್ ಫೋಟೋಗಳನ್ನು ಹಂಚಿಕೊಳ್ಳುವ ಜೊತೆಗೆ 'ಆಗತ್ಯ ಇರುವವರಿಗೆ ಆಮ್ಲಜನಕ ಸಾಂದ್ರಕಗಳನ್ನು ಖರೀದಿಸಲು ನನ್ನ ಬೈಕ್ ಮಾರಾಟ ಮಾಡುತ್ತಿದ್ದೇನೆ. ಹೈದರಾಬಾದ್ ನಲ್ಲಿ ಉತ್ತಮ ಆಕ್ಸಿಜನ್ ಸಾಂದ್ರಕ ಎಲ್ಲಿ ಸಿಗುತ್ತೆ ಹೇಳಿ' ಎಂದು ಪೋಸ್ಟ್ ಹಾಕಿದ್ದಾರೆ.

ಸನಮ್ ತೇರಿ ಕಸಮ್ ಸಿನಿಮಾ ಮೂಲಕ ಸಿನಿಪ್ರೇಕ್ಷಕರ ಹೃದಯ ಗೆದ್ದಿರುವ ತೆಲುಗು ನಟ ಹರ್ಷವರ್ಧನ್ ಅವರ ಮಾನವೀಯ ಕೆಲಸಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಂದಹಾಗೆ ಹರ್ಷವರ್ಧನ್ ಬಳಿ ಉತ್ತಮ ಬೈಕ್ ಮತ್ತು ಕಾರ್ ಕಲೆಕ್ಷನ್ ಗಳಿವೆ. ಹರ್ಷವರ್ಧನ್ ಬೈಕ್ ಕ್ರೇಜ್ ಬಗ್ಗೆ ಅವರ ಅಭಿಮಾನಿಗಳಿಗೆ ಗೊತ್ತಿರುವ ವಿಚಾರ. ಇದೀಗ ಕೊರೊನಾ ರೋಗಿಗಳಿಗೆ ಸಹಾಯ ಮಾಡಲು ತನ್ನ ನೆಚ್ಚಿನ ಬೈಕ್ ಅನ್ನೇ ಮಾರಾಟಕ್ಕೆ ಇಡುವ ಮೂಲಕ ರಿಯಲ್ ಹೀರೋ ಆಗಿದ್ದಾರೆ.
ಸಂಕಷ್ಟ ಸ್ಥಿತಿಯಲ್ಲಿ ಅನೇಕರು ಸಿನಿ ಸೆಲೆಬ್ರಿಟಿಗಳು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಪ್ರಿಯಾಂಕಾ ಚೋಪ್ರಾ, ಅಕ್ಷಯ್ ಕುಮಾರ್, ಅಜಯ್ ದೇವಗನ್, ಜಾನ್ ಅಬ್ರಹಾಂ, ಸಲ್ಮಾನ್ ಖಾನ್ ಇನ್ನು ಕನ್ನಡದ ನಟರಾದ ಅರ್ಜುನ್ ಗೌಡ, ಭುವನ್ ಪೊನ್ನಣ್ಣ ಸೇರಿದಂತೆ ಅನೇಕ ಸಿನಿತಾರೆಯರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.
This News Article Is A Copy Of FILMIBEAT
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm