ಬ್ರೇಕಿಂಗ್ ನ್ಯೂಸ್
04-05-21 10:15 am Source: FILMIBEAT Shruthi Gk ಸಿನಿಮಾ
ರಿಯಲ್ ಹೀರೋ ಸೋನು ಸೂದ್ ಕೋವಿಡ್-19 ಪರಿಸ್ಥಿತಿಯನ್ನು ದುಡ್ಡು ಮಾಡಲು ಬಳಿಸಿಕೊಂಡಿದ್ದಾರೆ, ಅವರೊಬ್ಬ ಮೋಸಗಾರ ಎನ್ನುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಪೋಸ್ಟ್ ಗೆ ಕಂಗನಾ ಲೈಕ್ ಮಾಡುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದೇಶದಲ್ಲಿ ಕೊರೊನಾ ಭೀಕರ ಪರಿಸ್ಥಿತಿ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿದೆ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸಮಯದಲ್ಲಿ ಕೆಲವು ಸಿನಿಮಾ ಗಣ್ಯರು ತನ್ನ ಕೈಲಾದ ಸಹಾಯ ಮಾಡುತ್ತಿದ್ದಾರೆ. ನಟ ಸೋನು ಸೂದ್ ಕಳೆದ ವರ್ಷ ಮತ್ತು ಈ ವರ್ಷವೂ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸುತ್ತಿದ್ದಾರೆ.

ಸೋನು ಸೂದ್ ಮಾನವೀಯ ಕೆಲಸಕ್ಕೆ ಎಲ್ಲರೂ ಶ್ಲಾಘಿಸುತ್ತಿದ್ದಾರೆ. ರಿಯಲ್ ಹೀರೋ ಎಂದು ಕರೆದು, ದೇವರಂತೆ ಪೂಜಿಸುತ್ತಿದ್ದಾರೆ. ಈ ನಡುವೆಯೂ ಸೋನು ಸೂದ್ ಅವರನ್ನು ಟ್ರೋಲ್ ಮಾಡುವವರು ಮತ್ತು ಟೀಕಿಸುವವರ ಸಂಖ್ಯೆಯು ಕಡಿಮೆ ಏನಿಲ್ಲ. ಸೋನು ಸೂದ್ ಕೆಲಸವನ್ನು ಅಣಕಿಸಿದವರಲ್ಲಿ ನಟಿ ಕಂಗನಾ ರಣಾವತ್ ಕೂಡ ಒಬ್ಬರು.

ಇತ್ತೀಚಿಗೆ ಸೋನು ಸೂದ್ ಅವರ ಆಕ್ಸಿಜನ್ ಸಾಂದ್ರಕದ ಜಾಹಿರಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಜಾಹೀರಾತಿನಲ್ಲಿ ಆಕ್ಸಿಜನ್ ಸಾಂದ್ರಕದ ಬೆಲೆ 2 ಲಕ್ಷ ಎಂದು ಉಲ್ಲೇಖಿಸಲಾಗಿದೆ. ಈ ಜಾಹೀರಾತಿನ ಪೋಸ್ಟರಿಗಾಗಿ ಸೋನು ಸೂದ್ ಅವರನ್ನು ಕೆಲವರು ಟ್ರೋಲ್ ಮಾಡುತ್ತಿದೆ. ವಂಚಕ, ಮೋಸಗಾರ ಎಂದು ಕರೆಯುತ್ತಿದ್ದಾರೆ. ಈ ಜಾಹಿರಾತಿನ ಸ್ಕ್ರೀನ್ ಶಾಟ್ ಅನ್ನು ನಟಿ ಕಂಗನಾ ರಣಾವತ್ ಕೂಡ ಲೈಕ್ ಮಾಡಿದ್ದಾರೆ. ಕಂಗನಾ ಲೈಕ್ ಮಾಡಿರುವುದು ಸೋನು ಸೂದ್ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಕಳೆದ ವರ್ಷದಿಂದ ನಿರಂತರವಾಗಿ ಮಾನವೀಯ ಕೆಲಸ ಮಾಡುತ್ತಿರುವ ಸೋನು ಸೂದ್ ಅವರನ್ನು ವಂಚಕ ಎಂದಿರುವ ಬಗ್ಗೆ ಅಭಿಮಾನಿಗಳು ಬೇಸರ ಹೊರಹಾಕುತ್ತಿದ್ದಾರೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm