ಬ್ರೇಕಿಂಗ್ ನ್ಯೂಸ್
04-05-21 11:05 am Source: FILMIBEAT Shruthi Gk ಸಿನಿಮಾ
ಕೊರೊನಾ ಮಹಾಮಾರಿಯಿಂದ ಇಡೀ ದೇಶ ತತ್ತರಿಸಿ ಹೋಗಿದೆ. ದಿನಕ್ಕೆ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿರುವ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಇಲ್ಲದೆ ಪರದಾಡುತ್ತಿದ್ದಾರೆ. ಕೊರೊನಾಗೆ ಅನೇಕ ಸಿನಿಮಾ ಮಂದಿ ಬಲಿಯಾಗಿದ್ದಾರೆ. ಕೋವಿಡ್ ಸೋಂಕಿನ ತೀವ್ರತೆ ಬಗ್ಗೆ ಗೂಗ್ಲಿ ಸುಂದರಿ ಕೃತಿ ಕರಬಂದ ಸಾಮಾಜಿಕ ಜಾಲತಾಣದಲ್ಲಿ ವಿವರಿಸಿದ್ದಾರೆ. 48 ಗಂಟೆಗಳು ತನ್ನ ಕುಟುಂಬಕ್ಕೆ ತೀರಾ ಸಂಕಷ್ಟದ ಸಮಯವಾಗಿತ್ತು ಎಂದು ಹೇಳಿದ್ದಾರೆ. ಕಷ್ಟದ ಸಮಯ ಎದುರಿಸಿದ ಕೃತಿ ದಯವಿಟ್ಟು ಎಲ್ಲರೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ್ದಾರೆ.
'ಕಳೆದ 48 ಗಂಟೆಗಳು ನನಗೂ ನನ್ನ ಕುಟುಂಬಕ್ಕೂ ತೀರಾ ಸಂಕಟದ ಸಮಯವಾಗಿತ್ತು. ಅದು ಮನೆಗೆ ಬರುವವರೆಗೂ ಎಷ್ಟು ಭಯಾನಕ ಎನ್ನುವುದು ಗೊತ್ತಾಗಲ್ಲ. ದಯವಿಟ್ಟು ಮನೆಯಲ್ಲೇ ಇರಿ. ಮನೆಯಿಂದ ಹೊರಹೋಗಲು ನಿರ್ಧರಿಸಿದರೆ ಒಂದು ಹೆಜ್ಜೆ ಹಿಂದಕ್ಕೆ ಇಡಿ. ನಿಮ್ಮ ಪ್ರಾಣವನ್ನು ಪಣಕ್ಕಿಡುವುದು ಸರಿಯೇ ಎಂದು ಯೋಚಿಸಿ' ಎಂದು ಹೇಳಿದ್ದಾರೆ.
ಕೊರೊನಾ ಸಂಕಷ್ಟದಲ್ಲಿ ಅನುಭವಿಸಿದ ಕಷ್ಟವನ್ನು ವಿವರಿಸುವ ಮೂಲಕ ಎಲ್ಲರೂ ಸುರಕ್ಷಿತವಾಗಿ ಇರುವಂತೆ ಹೇಳಿದ್ದಾರೆ. ಕೃತಿ ಕರಬಂದ ಸದ್ಯ ಮುಂಬೈನಲ್ಲಿ ನೆಲೆಸಿದ್ದಾರೆ. ಕನ್ನಡದ ಗೂಗ್ಲಿ ಸಿನಿಮಾ ಮೂಲಕ ಪ್ರಖ್ಯಾತಿಗಳಿಸಿದ ಕೃತಿ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಗಲಾಟೆ, ಸೂಪರ್ ರಂಗ, ಬೆಳ್ಳಿ, ದಳಪತಿ ಸೇರಿದಂತೆ ಕೆಲವು ಕನ್ನಡದ ಸಿನಿಮಾಗಳಲ್ಲಿ ಕೃತಿ ಮಿಂಚಿದ್ದಾರೆ. ಸದ್ಯ ಹಿಂದಿಯಲ್ಲಿ ಬ್ಯುಸಿಯಾಗಿರುವ ಕೃತಿ ಮುಂಬೈನಲ್ಲೇ ನೆಲೆಸಿದ್ದಾರೆ. ಸಾಕಷ್ಟು ಮಂದಿ ಸೆಲೆಬ್ರಿಟಿಗಳು ಕೊರೊನಾ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ಈ ಸಂಕಷ್ಟದ ಸಮಯದಲ್ಲಿ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಅಗತ್ಯ ಇರುವವರಿಗೆ ಆಕ್ಸಿಜನ್, ಆಸ್ಪತ್ರೆ ವ್ಯವಸ್ಥೆ ಮಾಡಿಸಿಕೊಡುತ್ತಿದ್ದಾರೆ.
This News Article Is A Copy Of FILMIBEAT
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm