ಬ್ರೇಕಿಂಗ್ ನ್ಯೂಸ್
04-05-21 11:05 am Source: FILMIBEAT Shruthi Gk ಸಿನಿಮಾ
ಕೊರೊನಾ ಮಹಾಮಾರಿಯಿಂದ ಇಡೀ ದೇಶ ತತ್ತರಿಸಿ ಹೋಗಿದೆ. ದಿನಕ್ಕೆ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿರುವ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಇಲ್ಲದೆ ಪರದಾಡುತ್ತಿದ್ದಾರೆ. ಕೊರೊನಾಗೆ ಅನೇಕ ಸಿನಿಮಾ ಮಂದಿ ಬಲಿಯಾಗಿದ್ದಾರೆ. ಕೋವಿಡ್ ಸೋಂಕಿನ ತೀವ್ರತೆ ಬಗ್ಗೆ ಗೂಗ್ಲಿ ಸುಂದರಿ ಕೃತಿ ಕರಬಂದ ಸಾಮಾಜಿಕ ಜಾಲತಾಣದಲ್ಲಿ ವಿವರಿಸಿದ್ದಾರೆ. 48 ಗಂಟೆಗಳು ತನ್ನ ಕುಟುಂಬಕ್ಕೆ ತೀರಾ ಸಂಕಷ್ಟದ ಸಮಯವಾಗಿತ್ತು ಎಂದು ಹೇಳಿದ್ದಾರೆ. ಕಷ್ಟದ ಸಮಯ ಎದುರಿಸಿದ ಕೃತಿ ದಯವಿಟ್ಟು ಎಲ್ಲರೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ್ದಾರೆ.
'ಕಳೆದ 48 ಗಂಟೆಗಳು ನನಗೂ ನನ್ನ ಕುಟುಂಬಕ್ಕೂ ತೀರಾ ಸಂಕಟದ ಸಮಯವಾಗಿತ್ತು. ಅದು ಮನೆಗೆ ಬರುವವರೆಗೂ ಎಷ್ಟು ಭಯಾನಕ ಎನ್ನುವುದು ಗೊತ್ತಾಗಲ್ಲ. ದಯವಿಟ್ಟು ಮನೆಯಲ್ಲೇ ಇರಿ. ಮನೆಯಿಂದ ಹೊರಹೋಗಲು ನಿರ್ಧರಿಸಿದರೆ ಒಂದು ಹೆಜ್ಜೆ ಹಿಂದಕ್ಕೆ ಇಡಿ. ನಿಮ್ಮ ಪ್ರಾಣವನ್ನು ಪಣಕ್ಕಿಡುವುದು ಸರಿಯೇ ಎಂದು ಯೋಚಿಸಿ' ಎಂದು ಹೇಳಿದ್ದಾರೆ.
ಕೊರೊನಾ ಸಂಕಷ್ಟದಲ್ಲಿ ಅನುಭವಿಸಿದ ಕಷ್ಟವನ್ನು ವಿವರಿಸುವ ಮೂಲಕ ಎಲ್ಲರೂ ಸುರಕ್ಷಿತವಾಗಿ ಇರುವಂತೆ ಹೇಳಿದ್ದಾರೆ. ಕೃತಿ ಕರಬಂದ ಸದ್ಯ ಮುಂಬೈನಲ್ಲಿ ನೆಲೆಸಿದ್ದಾರೆ. ಕನ್ನಡದ ಗೂಗ್ಲಿ ಸಿನಿಮಾ ಮೂಲಕ ಪ್ರಖ್ಯಾತಿಗಳಿಸಿದ ಕೃತಿ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಗಲಾಟೆ, ಸೂಪರ್ ರಂಗ, ಬೆಳ್ಳಿ, ದಳಪತಿ ಸೇರಿದಂತೆ ಕೆಲವು ಕನ್ನಡದ ಸಿನಿಮಾಗಳಲ್ಲಿ ಕೃತಿ ಮಿಂಚಿದ್ದಾರೆ. ಸದ್ಯ ಹಿಂದಿಯಲ್ಲಿ ಬ್ಯುಸಿಯಾಗಿರುವ ಕೃತಿ ಮುಂಬೈನಲ್ಲೇ ನೆಲೆಸಿದ್ದಾರೆ. ಸಾಕಷ್ಟು ಮಂದಿ ಸೆಲೆಬ್ರಿಟಿಗಳು ಕೊರೊನಾ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ಈ ಸಂಕಷ್ಟದ ಸಮಯದಲ್ಲಿ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಅಗತ್ಯ ಇರುವವರಿಗೆ ಆಕ್ಸಿಜನ್, ಆಸ್ಪತ್ರೆ ವ್ಯವಸ್ಥೆ ಮಾಡಿಸಿಕೊಡುತ್ತಿದ್ದಾರೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm