ಬ್ರೇಕಿಂಗ್ ನ್ಯೂಸ್
04-05-21 11:05 am Source: FILMIBEAT Shruthi Gk ಸಿನಿಮಾ
ಕೊರೊನಾ ಮಹಾಮಾರಿಯಿಂದ ಇಡೀ ದೇಶ ತತ್ತರಿಸಿ ಹೋಗಿದೆ. ದಿನಕ್ಕೆ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿರುವ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಇಲ್ಲದೆ ಪರದಾಡುತ್ತಿದ್ದಾರೆ. ಕೊರೊನಾಗೆ ಅನೇಕ ಸಿನಿಮಾ ಮಂದಿ ಬಲಿಯಾಗಿದ್ದಾರೆ. ಕೋವಿಡ್ ಸೋಂಕಿನ ತೀವ್ರತೆ ಬಗ್ಗೆ ಗೂಗ್ಲಿ ಸುಂದರಿ ಕೃತಿ ಕರಬಂದ ಸಾಮಾಜಿಕ ಜಾಲತಾಣದಲ್ಲಿ ವಿವರಿಸಿದ್ದಾರೆ. 48 ಗಂಟೆಗಳು ತನ್ನ ಕುಟುಂಬಕ್ಕೆ ತೀರಾ ಸಂಕಷ್ಟದ ಸಮಯವಾಗಿತ್ತು ಎಂದು ಹೇಳಿದ್ದಾರೆ. ಕಷ್ಟದ ಸಮಯ ಎದುರಿಸಿದ ಕೃತಿ ದಯವಿಟ್ಟು ಎಲ್ಲರೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ್ದಾರೆ.
'ಕಳೆದ 48 ಗಂಟೆಗಳು ನನಗೂ ನನ್ನ ಕುಟುಂಬಕ್ಕೂ ತೀರಾ ಸಂಕಟದ ಸಮಯವಾಗಿತ್ತು. ಅದು ಮನೆಗೆ ಬರುವವರೆಗೂ ಎಷ್ಟು ಭಯಾನಕ ಎನ್ನುವುದು ಗೊತ್ತಾಗಲ್ಲ. ದಯವಿಟ್ಟು ಮನೆಯಲ್ಲೇ ಇರಿ. ಮನೆಯಿಂದ ಹೊರಹೋಗಲು ನಿರ್ಧರಿಸಿದರೆ ಒಂದು ಹೆಜ್ಜೆ ಹಿಂದಕ್ಕೆ ಇಡಿ. ನಿಮ್ಮ ಪ್ರಾಣವನ್ನು ಪಣಕ್ಕಿಡುವುದು ಸರಿಯೇ ಎಂದು ಯೋಚಿಸಿ' ಎಂದು ಹೇಳಿದ್ದಾರೆ.
ಕೊರೊನಾ ಸಂಕಷ್ಟದಲ್ಲಿ ಅನುಭವಿಸಿದ ಕಷ್ಟವನ್ನು ವಿವರಿಸುವ ಮೂಲಕ ಎಲ್ಲರೂ ಸುರಕ್ಷಿತವಾಗಿ ಇರುವಂತೆ ಹೇಳಿದ್ದಾರೆ. ಕೃತಿ ಕರಬಂದ ಸದ್ಯ ಮುಂಬೈನಲ್ಲಿ ನೆಲೆಸಿದ್ದಾರೆ. ಕನ್ನಡದ ಗೂಗ್ಲಿ ಸಿನಿಮಾ ಮೂಲಕ ಪ್ರಖ್ಯಾತಿಗಳಿಸಿದ ಕೃತಿ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಗಲಾಟೆ, ಸೂಪರ್ ರಂಗ, ಬೆಳ್ಳಿ, ದಳಪತಿ ಸೇರಿದಂತೆ ಕೆಲವು ಕನ್ನಡದ ಸಿನಿಮಾಗಳಲ್ಲಿ ಕೃತಿ ಮಿಂಚಿದ್ದಾರೆ. ಸದ್ಯ ಹಿಂದಿಯಲ್ಲಿ ಬ್ಯುಸಿಯಾಗಿರುವ ಕೃತಿ ಮುಂಬೈನಲ್ಲೇ ನೆಲೆಸಿದ್ದಾರೆ. ಸಾಕಷ್ಟು ಮಂದಿ ಸೆಲೆಬ್ರಿಟಿಗಳು ಕೊರೊನಾ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ಈ ಸಂಕಷ್ಟದ ಸಮಯದಲ್ಲಿ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಅಗತ್ಯ ಇರುವವರಿಗೆ ಆಕ್ಸಿಜನ್, ಆಸ್ಪತ್ರೆ ವ್ಯವಸ್ಥೆ ಮಾಡಿಸಿಕೊಡುತ್ತಿದ್ದಾರೆ.
This News Article Is A Copy Of FILMIBEAT
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm