ಬ್ರೇಕಿಂಗ್ ನ್ಯೂಸ್
04-05-21 11:14 am Source: FILMIBEAT Manjunatha C ಸಿನಿಮಾ
ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕೊರೊನಾ ಸೋಂಕಿಗೆ ತುತ್ತಾಗಿ ನಿಧನ ಹೊಂದಿದ್ದಾರೆ. ಈ ವಿಷಯವನ್ನು ಅರ್ಜುನ್ ಜನ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
'ಕೋವಿಡ್ನಿಂದಾಗಿ ನನ್ನ ಸಹೋದರನನ್ನು ನಾನು ಕಳೆದುಕೊಂಡೆ. ಕಿರಣ್, ಈ ದುಃಖವನ್ನು ಹೇಗೆ ಹೇಳಿಕೊಳ್ಳಲಿ ಎಂದು ನನಗೆ ಗೊತ್ತಾಗುತ್ತಿಲ್ಲ. ನೀನಿರದೆ ಇರುವುದು ಕಷ್ಟ. ನನ್ನ ಕೊನೆಯ ಉಸಿರಿನವರೆಗೆ ನೀನು ನನ್ನ ಉಸಿರಿನಲ್ಲಿ ಇರುತ್ತೀಯ' ಎಂದು ಅರ್ಜುನ್ ಜನ್ಯ ಪೋಸ್ಟ್ ಮಾಡಿದ್ದಾರೆ.
ತಮ್ಮ ಏಳಿಗೆಯಲ್ಲಿ ಸಹೋದರ ಕಿರಣ್ ಪಾತ್ರ ದೊಡ್ಡದು ಎಂದು ಹಿಂದೊಮ್ಮೆ ಹೇಳಿಕೊಂಡಿದ್ದರು ಅರ್ಜುನ್ ಜನ್ಯ. ಹಾಗಾಗಿ ಸಹೋದರನ ಅಗಲಿಕೆ ಅರ್ಜುನ್ ಜನ್ಯ ಅವರಿಗೆ ತೀವ್ರ ದುಃಖ ತಂದಿದೆ.
ಅರ್ಜುನ್ ಜನ್ಯಗೆ ಸಹ ಕೊರೊನಾ ಬಂದಿತ್ತು. ಏಪ್ರಿಲ್ ಎರಡನೇ ವಾರದಲ್ಲಿ ಕೋವಿಡ್ ಪಾಸಿಟಿವ್ ಆಗಿದ್ದ ಅರ್ಜುನ್ ಜನ್ಯ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಐಸೋಲೇಷನ್ಗೆ ಒಳಗಾಗಿದ್ದರು. ಹತ್ತು ದಿನಗಳ ನಂತರ ಜನ್ಯ ಅವರಿಗೆ ನೆಗೆಟಿವ್ ಬಂತು. ಕಳೆದ ವರ್ಷ ಫೆಬ್ರವರಿಯಲ್ಲಿ ಅರ್ಜುನ್ ಜನ್ಯ ತೀವ್ರ ಎದೆನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅರ್ಜುನ್ ಜನ್ಯಗೆ ಆಂಜಿಯೋಗ್ರಾಂ, ಆಂಜಿಯೋಪ್ಲಾಸ್ಟಿ ಮಾಡಲಾಗಿತ್ತು.
ಚಂದನವನದ ಹಲವು ಮಂದಿ ಸೆಲೆಬ್ರಿಟಿಗಳು ಕೆಲವೇ ದಿನಗಳಲ್ಲಿ ಕೊರೊನಾದಿಂದ ಜೀವ ಕಳೆದುಕೊಂಡಿದ್ದಾರೆ. ಚಂದನವನದ ಯುವ ನಿರ್ಮಾಪಕ ರಾಜಶೇಖರ್, ಖ್ಯಾತ ನಿರ್ಮಾಪಕ ರಾಮು, ನಿರ್ಮಾಪಕ ಚಂದ್ರಶೇಖರ್, ಮೇಕಪ್ಮ್ಯಾನ್ ಸೀನ, ಪುಟ್ಟಣ ಕಣಗಾಲ್ ಪುತ್ರ, ಡಿಸೈನರ್ ಮಸ್ತಾನ್ ಇವರೆಲ್ಲರುಗಳು ಕೆಲವೇ ದಿನಗಳ ಅಂತರದಲ್ಲಿ ಕೊರೊನಾಕ್ಕೆ ಬಲಿ ಆಗಿದ್ದಾರೆ. ನಿನ್ನೆಯಷ್ಟೆ ಯುವ ನಿರ್ದೇಶಕ ಸಂತೋಶ್ ಕೋವಿಡ್ನಿಂದ ಸಾವನ್ನಪ್ಪಿದ್ದರು.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm