ಬ್ರೇಕಿಂಗ್ ನ್ಯೂಸ್
06-05-21 11:43 am Source: FILMIBEAT Shruthi Gk ಸಿನಿಮಾ
ಕನ್ನಡದ ಹಲವು ಸಿನಿಮಾ ಸೆಲೆಬ್ರಿಟಿಗಳು ಇತ್ತೀಚಿನ ದಿನಗಳಲ್ಲಿ ಕೊರೊನಾ ಕಾರಣಕ್ಕೆ ನಿಧನ ಹೊಂದಿದ್ದಾರೆ. ಆ ಸಾಲಿಗೆ ಇಂದು ಮತ್ತೊಂದು ಸೇರ್ಪಡೆಯಾಗಿದೆ. ಕನ್ನಡಕ್ಕೆ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದ ಖ್ಯಾತ ನಿರ್ದೇಶಕ ರೇಣುಕಾ ಶರ್ಮಾ ಅವರು ಕೊರೊನಾದಿಂದಾಗಿ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.
'ಕವಿರತ್ನ ಕಾಳಿದಾಸ', 'ಅಂಜದ ಗಂಡು', 'ಕಿಂದರ ಜೋಗಿ' ಸೇರಿದಂತೆ ಹಲವು ಸಿನಿಮಾಗಳನ್ನು ರೇಣುಕಾ ಶರ್ಮಾ ನಿರ್ದೇಶನ ಮಾಡಿದ್ದರು.
ಎರಡು ದಿನಗಳ ಹಿಂದಷ್ಟೆ ರೇಣುಕಾ ಶರ್ಮಾ ಅವರನ್ನು ಕೊರೊನಾ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ರೇಣುಕಾ ಶರ್ಮಾ ನಿಧನ ಹೊಂದಿದ್ದಾರೆ. ಮೈಸೂರಿನ ಟಿ.ನರಸೀಪುರದವರಾದ ರೇಣುಕಾ ಶರ್ಮಾ ಅವರು 1960 ರಲ್ಲಿ ಚಿತ್ರರಂಗ ಪ್ರವೇಶಿಸಿದವರು.

ಸಿನಿಮಾ ನಟ ಆಗಲೇಬೇಕೆಂಬ ಕನಸು ಹೊತ್ತು ಮದ್ರಾಸಿಗೆ ಹೋಗಿ ಮೊದಲ ಬಾರಿಗೆ 'ಸರ್ವಜ್ಞ ಮೂರ್ತಿ' ಸಿನಿಮಾಕ್ಕೆ ಸಹಾಯಕನಾಗಿ ಕೆಲಸ ಮಾಡಿ ಅಲ್ಲಿಂದ ಸಿನಿಮಾ ಪಯಣ ಆರಂಭಿಸಿದರು. 20 ವರ್ಷಗಳ ಬಳಿಕ 1980 ರಲ್ಲಿ ಮೊದಲ ಬಾರಿಗೆ ಸ್ವಂತವಾಗಿ ನಿರ್ದೇಶನ ಮಾಡಿದರು.
ರೇಣುಕಾ ಶರ್ಮಾ ಮೊದಲ ಸಿನಿಮಾ 'ಅನುಪಮಾ'. ತೆಲುಗು, ತಮಿಳಿನಲ್ಲಿಯೂ ಕೆಲಸ ಮಾಡಿರುವ ರೇಣುಕಾ ಶರ್ಮಾ ಜಯಲಲಿತಾ, ಎಎನ್ಆರ್ ಅವರ ಸಿನಿಮಾಗಳಿಗೂ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ಚಂದನವನದ ಹಲವು ಮಂದಿ ಸೆಲೆಬ್ರಿಟಿಗಳು ಕೆಲವೇ ದಿನಗಳಲ್ಲಿ ಕೊರೊನಾದಿಂದ ಜೀವ ಕಳೆದುಕೊಂಡಿದ್ದಾರೆ. ಚಂದನವನದ ಯುವ ನಿರ್ಮಾಪಕ ರಾಜಶೇಖರ್, ಖ್ಯಾತ ನಿರ್ಮಾಪಕ ರಾಮು, ನಿರ್ಮಾಪಕ ಚಂದ್ರಶೇಖರ್, ಮೇಕಪ್ಮ್ಯಾನ್ ಸೀನ, ಪುಟ್ಟಣ ಕಣಗಾಲ್ ಪುತ್ರ, ಡಿಸೈನರ್ ಮಸ್ತಾನ್ ಇವರೆಲ್ಲರುಗಳು ಕೆಲವೇ ದಿನಗಳ ಅಂತರದಲ್ಲಿ ಕೊರೊನಾಕ್ಕೆ ಬಲಿ ಆಗಿದ್ದಾರೆ. ನಿನ್ನೆಯಷ್ಟೆ ಯುವ ನಿರ್ದೇಶಕ ಸಂತೋಶ್ ಕೋವಿಡ್ನಿಂದ ಸಾವನ್ನಪ್ಪಿದ್ದರು.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm