ಬ್ರೇಕಿಂಗ್ ನ್ಯೂಸ್
06-05-21 11:43 am Source: FILMIBEAT Shruthi Gk ಸಿನಿಮಾ
ಕನ್ನಡದ ಹಲವು ಸಿನಿಮಾ ಸೆಲೆಬ್ರಿಟಿಗಳು ಇತ್ತೀಚಿನ ದಿನಗಳಲ್ಲಿ ಕೊರೊನಾ ಕಾರಣಕ್ಕೆ ನಿಧನ ಹೊಂದಿದ್ದಾರೆ. ಆ ಸಾಲಿಗೆ ಇಂದು ಮತ್ತೊಂದು ಸೇರ್ಪಡೆಯಾಗಿದೆ. ಕನ್ನಡಕ್ಕೆ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದ ಖ್ಯಾತ ನಿರ್ದೇಶಕ ರೇಣುಕಾ ಶರ್ಮಾ ಅವರು ಕೊರೊನಾದಿಂದಾಗಿ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.
'ಕವಿರತ್ನ ಕಾಳಿದಾಸ', 'ಅಂಜದ ಗಂಡು', 'ಕಿಂದರ ಜೋಗಿ' ಸೇರಿದಂತೆ ಹಲವು ಸಿನಿಮಾಗಳನ್ನು ರೇಣುಕಾ ಶರ್ಮಾ ನಿರ್ದೇಶನ ಮಾಡಿದ್ದರು.
ಎರಡು ದಿನಗಳ ಹಿಂದಷ್ಟೆ ರೇಣುಕಾ ಶರ್ಮಾ ಅವರನ್ನು ಕೊರೊನಾ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ರೇಣುಕಾ ಶರ್ಮಾ ನಿಧನ ಹೊಂದಿದ್ದಾರೆ. ಮೈಸೂರಿನ ಟಿ.ನರಸೀಪುರದವರಾದ ರೇಣುಕಾ ಶರ್ಮಾ ಅವರು 1960 ರಲ್ಲಿ ಚಿತ್ರರಂಗ ಪ್ರವೇಶಿಸಿದವರು.

ಸಿನಿಮಾ ನಟ ಆಗಲೇಬೇಕೆಂಬ ಕನಸು ಹೊತ್ತು ಮದ್ರಾಸಿಗೆ ಹೋಗಿ ಮೊದಲ ಬಾರಿಗೆ 'ಸರ್ವಜ್ಞ ಮೂರ್ತಿ' ಸಿನಿಮಾಕ್ಕೆ ಸಹಾಯಕನಾಗಿ ಕೆಲಸ ಮಾಡಿ ಅಲ್ಲಿಂದ ಸಿನಿಮಾ ಪಯಣ ಆರಂಭಿಸಿದರು. 20 ವರ್ಷಗಳ ಬಳಿಕ 1980 ರಲ್ಲಿ ಮೊದಲ ಬಾರಿಗೆ ಸ್ವಂತವಾಗಿ ನಿರ್ದೇಶನ ಮಾಡಿದರು.
ರೇಣುಕಾ ಶರ್ಮಾ ಮೊದಲ ಸಿನಿಮಾ 'ಅನುಪಮಾ'. ತೆಲುಗು, ತಮಿಳಿನಲ್ಲಿಯೂ ಕೆಲಸ ಮಾಡಿರುವ ರೇಣುಕಾ ಶರ್ಮಾ ಜಯಲಲಿತಾ, ಎಎನ್ಆರ್ ಅವರ ಸಿನಿಮಾಗಳಿಗೂ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ಚಂದನವನದ ಹಲವು ಮಂದಿ ಸೆಲೆಬ್ರಿಟಿಗಳು ಕೆಲವೇ ದಿನಗಳಲ್ಲಿ ಕೊರೊನಾದಿಂದ ಜೀವ ಕಳೆದುಕೊಂಡಿದ್ದಾರೆ. ಚಂದನವನದ ಯುವ ನಿರ್ಮಾಪಕ ರಾಜಶೇಖರ್, ಖ್ಯಾತ ನಿರ್ಮಾಪಕ ರಾಮು, ನಿರ್ಮಾಪಕ ಚಂದ್ರಶೇಖರ್, ಮೇಕಪ್ಮ್ಯಾನ್ ಸೀನ, ಪುಟ್ಟಣ ಕಣಗಾಲ್ ಪುತ್ರ, ಡಿಸೈನರ್ ಮಸ್ತಾನ್ ಇವರೆಲ್ಲರುಗಳು ಕೆಲವೇ ದಿನಗಳ ಅಂತರದಲ್ಲಿ ಕೊರೊನಾಕ್ಕೆ ಬಲಿ ಆಗಿದ್ದಾರೆ. ನಿನ್ನೆಯಷ್ಟೆ ಯುವ ನಿರ್ದೇಶಕ ಸಂತೋಶ್ ಕೋವಿಡ್ನಿಂದ ಸಾವನ್ನಪ್ಪಿದ್ದರು.
This News Article Is A Copy Of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm