ಬ್ರೇಕಿಂಗ್ ನ್ಯೂಸ್
06-05-21 11:54 am Source: FILMIBEAT Shruthi Gk ಸಿನಿಮಾ
ನಟ ಚಿಕ್ಕಣ್ಣ ಕನ್ನಡ ಚಿತ್ರರಂಗದ ಬ್ಯುಸಿ ಹಾಸ್ಯನಟರಲ್ಲಿ ಒಬ್ಬರು. ಕುರಿಬಾಂಡ್ ಕಾರ್ಯಕ್ರಮದಿಂದ ನಟನೆ ಆರಂಭಿಸಿದ ಚಿಕ್ಕಣ್ಣ ಇಂದಿನ ಈ ಹಂತಕ್ಕೆ ಏರಲು ಪಟ್ಟ ಶ್ರಮ ಅಷ್ಟಿಷ್ಟಲ್ಲ. ಸಾಮಾನ್ಯ ಕುಟುಂಬದಿಂದ ಬಂದಿರುವ ಚಿಕ್ಕಣ್ಣ ಮೊದಲು ಜೀವನಕ್ಕಾಗಿ ಗಾರೆ ಕೆಲಸ ಮಾಡುತ್ತಿದ್ದರು. ಮೇಸ್ತ್ರಿ ಕೈಕೆಳಗೆ ದಿನಗೂಲಿಗೆ ಮನೆಗಳ ಗಾರೆ ಕೆಲಸಕ್ಕೆ ಹೋಗುತ್ತಿದ್ದ ಚಿಕ್ಕಣ್ಣ ನಟನಾಗುವ ಉದ್ದೇಶದಿಂದ ಬೆಂಗಳೂರಿಗೆ ಬಂದು ಹಲವು ಸುತ್ತು ಸೈಕಲ್ ಹೊಡೆದ ಬಳಿಕ ಇಂದಿನ ಸ್ಥಿತಿಗೆ ತಲುಪಿದ್ದಾರೆ.
ಆದರೆ ಚಿಕ್ಕಣ್ಣ ಮತ್ತೆ ತಮ್ಮ ಹಳೆ ವೃತ್ತಿಗೆ ಮರಳಿದ್ದಾರೆ. ಹೌದು, ಚಿಕ್ಕಣ್ಣ ಗಾರೆ ಕೆಲಸ ಮಾಡುತ್ತಿದ್ದಾರೆ. ಆದರೆ ಬೇರೆಯವರ ಮನೆಯ ಗಾರೆ ಕೆಲಸ ಅಲ್ಲ ಬದಲಿಗೆ ತಮ್ಮದೇ ತೋಟದ ಮನೆಯ ಗಾರೆ ಕೆಲಸ ಮಾಡುತ್ತಿದ್ದಾರೆ.
ಮೈಸೂರಿನ ಬಳಿ ದೊಡ್ಡ ಫಾರ್ಮ್ ನಿರ್ಮಿಸಿರುವ ಚಿಕ್ಕಣ್ಣ ಅಲ್ಲಿಯೇ ಸಣ್ಣದೊಂದು ಮನೆ ನಿರ್ಮಾಣ ಮಾಡುತ್ತಿದ್ದು, ಮನೆ ನಿರ್ಮಾಣ ಕಾರ್ಯಕ್ಕೆ ತಾವೇ ಕೈ ಜೋಡಿಸಿದ್ದಾರೆ. ಲಾಕ್ಡೌನ್ ಸಮಯದಲ್ಲಿ ಚಿತ್ರೀಕರಣ ಇಲ್ಲದ ಕಾರಣ ಸಮಯದ ಸದುಪಯೋಗಕ್ಕಾಗಿ ತಾವು ಗಾರೆ ಕೆಲಸ ಮಾಡುತ್ತಿದ್ದಾರೆ ಚಿಕ್ಕಣ್ಣ.
ನಟ ಚಿಕ್ಕಣ್ಣ ಗಾರೆ ಕೆಲಸ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಿಮೆಂಟು ಕಲಸಿ ಗೋಡೆಗೆ ಹಚ್ಚಿ ಸಪಾಟು ಮಾಡುವ ಕಾರ್ಯವನ್ನು ಚಿಕ್ಕಣ್ಣ ಮಾಡುತ್ತಿದ್ದಾರೆ. ಚಿಕ್ಕಣ್ಣನ ಈ ಕಾರ್ಯಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
This News Article Is A Copy Of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm