ಬ್ರೇಕಿಂಗ್ ನ್ಯೂಸ್
06-05-21 12:01 pm Source: FILMIBEAT Shruthi Gk ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಳೆದು ತೂಗಿ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಸಾಯಿ ಸದ್ಯ ತೆಲುಗಿನ ಎರಡು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಪವರ್ ಸ್ಟಾರ್ ಪವನ್ ಕಲ್ಯಾಣ್ ಸಿನಿಮಾಗೂ ಸಯಿ ಪಲ್ಲವಿ ಆಯ್ಕೆಯಾಗಿದ್ದರು.
ಪವನ್ ಕಲ್ಯಾಣ್ ಮತ್ತು ರಾಣಾ ದಗ್ಗುಬಾಟಿ ನಟನೆಯ ಮಲಯಾಳಂನ ಸೂಪರ್ ಹಿಟ್ ಅಯ್ಯಪ್ಪನುಂ ಕೋಶಿಯುಂ ಸಿನಿಮಾದ ರಿಮೇಕ್ ನಲ್ಲಿ ಸಾಯಿ ಪಲ್ಲವಿ ನಟಿಸಬೇಕಿತ್ತು. ಆದರೆ ಸಾಯಿ ಚಿತ್ರದಿಂದ ದಿಢೀರ್ ಹೊರಬಂದಿದ್ದಾರೆ. ಸಾಯಿ ಪಲ್ಲವಿಯನ್ನು ಚಿತ್ರತಂಡ ಕೈ ಬಿಟ್ಟಿರುವುದು ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿತ್ತು. ಸಾಯಿ ಪಲ್ಲವಿ ಹೊರಬಂದಿರುವ ಬಗ್ಗೆ ಸಾಕಷ್ಟು ಚರ್ಚೆ ಕೂಡ ಪ್ರಾರಂಭವಾಗಿತ್ತು.

ಪವನ್ ಕಲ್ಯಾಣ್ ಪತ್ನಿ ಪಾತ್ರದಲ್ಲಿ ನಟಿಸಬೇಕಿತ್ತು ಸಾಯಿ
ಚಿತ್ರದಲ್ಲಿ ಸಾಯಿ ಪಲ್ಲವಿ ಪವರ್ ಸ್ಟಾರ್ ಪತ್ನಿಯ ಪಾತ್ರದಲ್ಲಿ ನಟಿಸಬೇಕಿತ್ತು. ಆದರೆ ಸಾಯಿ ಪಲ್ಲವಿ, ಪವನ್ ಕಲ್ಯಾಣ್ ಜೊತೆ ನಟಿಸಲು ಹಿಂದೇಟು ಹಾಕಿರುವ ಬಗ್ಗೆ ಸಾಕಷ್ಟು ಸುದ್ದಿಗಳು ಹಾರಿದಾಡುತ್ತಿವೆ. ಚಿತ್ರದಿಂದ ಸಾಯಿ ಪಲ್ಲವಿ ಹೊರಬಂದಿರುವುದು ಅಭಿಮಾನಿಗಳಿಗೆ ಬೇಸರ ತಂದಿದೆ. ಆದರೆ ಚಿತ್ರದಿಂದ ಹೊರಬಂದ ಕಾರಣವೇನು ಎನ್ನುವುದು ಸಹ ಪವನ್ ಕಲ್ಯಾಣ್ ಅಭಿಮಾನಿಗಳ ದೊಡ್ಡ ಪ್ರಶ್ನೆಯಾಗಿತ್ತು.
ದೊಡ್ಡ ಮೊತ್ತದ ಸಂಭಾವನೆ ಬೇಡಿಕೆ ಇಟ್ಟ ನಟಿ
ಸದ್ಯ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ಸಾಯಿ ಪಲ್ಲವಿ ಚಿತ್ರದಲ್ಲಿ ನಟಿಸಲು ಭಾರಿ ಮೊತ್ತದ ಸಂಭಾವನೆ ಬೇಡಿಕೆ ಇಟ್ಟಿದ್ದರಂತೆ. ಮೂಲಗಳ ಪ್ರಕಾರ ಪ್ರೇಮಂ ಸುಂದರಿ ಅಯ್ಯಪ್ಪನುಂ ಕೋಶಿಯುಂ ಸಿನಿಮಾದ ರಿಮೇಕ್ ನಲ್ಲಿ ನಟಿಸಲು ಬರೋಬ್ಬರಿ 3 ಕೋಟಿ ರೂ. ಡಿಮ್ಯಾಂಡ್ ಮಾಡಿದ್ದರಂತೆ. ಹಾಗಾಗಿ ಚಿತ್ರತಂಡ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಲು ಹಿಂದೇಟು ಹಾಕಿದೆ ಎನ್ನುವ ಸುದ್ದಿ ಕೇಳಿಬರುತ್ತಿದೆ.

ಸಾಯಿ ಪಲ್ಲವಿ ಜಾಗಕ್ಕೆ ನಿತ್ಯಾ ಮೆನನ್ ಎಂಟ್ರಿ
ಅಂದಹಾಗೆ ಸಾಯಿ ಪಲ್ಲವಿ ಜಾಗಕ್ಕೆ ಈಗ ಮತ್ತೋರ್ವ ಖ್ಯಾತ ನಟಿ ನಿತ್ಯಾ ಮೆನನ್ ಎಂಟ್ರಿಯಾಗಿದ್ದಾರೆ. ನಿತ್ಯಾ, ಪವನ್ ಕಲ್ಯಾಣ್ ಪತ್ನಿಯಾಗಿ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. ಅಂದಹಾಗೆ ಮಲಯಾಳಂನಲ್ಲಿ ನಟ ಪೃಥ್ವಿರಾಜ್ ಸುಕುಮಾರನ್ ಮತ್ತು ಬಿಜು ಮೆನನ್ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್ ಪಾತ್ರದಲ್ಲಿ ಕಾಣಿಸಿಕೊಂಡರೆ ಬಿಜು ಪಾತ್ರದಲ್ಲಿ ಪವನ್ ಕಲ್ಯಾಣ್ ಬಣ್ಣಹಚ್ಚುತ್ತಿದ್ದಾರೆ.
This News Article Is A Copy Of FILMIBEAT
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm