ಬ್ರೇಕಿಂಗ್ ನ್ಯೂಸ್
07-05-21 03:26 pm Manjunatha C: Filmbeat ಸಿನಿಮಾ
ಕನ್ನಡ ಸಿನಿರಂಗದ ಖ್ಯಾತ ನಟ 'ಶಂಖನಾದ' ಅದವಿಂದ್ ಅವರು ಕೊರೊನಾ ಕಾರಣದಿಂದ ನಿಧನ ಹೊಂದಿದ್ದಾರೆ.
ಎರಡು ದಿನಗಳ ಹಿಂದಷ್ಟೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ. ಅರವಿಂದ್ ಅವರಿಗೆ 60 ವರ್ಷ ವಯಸ್ಸಾಗಿತ್ತು. ಅಪರಿಚಿತ, ಆಗಂತುಕ, ಬೆಟ್ಟದ ಹೂವು, ಶಂಖನಾದ ಚಿತ್ರಗಳಲ್ಲಿ ನಟಿಸಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ಅರವಿಂದ್ ರವರು ಇಂದು ಕೊರೊನಾ ವ್ಯಾಧಿಗೆ ತುತ್ತಾಗಿ ನಮ್ಮನ್ನು ಅಗಲಿದ್ದಾರೆ. ಬಹಳ ಅಪರೂಪದ ನಟರಾಗಿದ್ದ ಇವರು ಹಾಸ್ಯನಾಟರಾಗಿ, ಪೋಷಕ ನಟರಾಗಿ ಅನೇಕ ಚಿತ್ರಗಳಲ್ಲಿ ಅರವಿಂದ್ ನಟಿಸಿದ್ದರು.

'ಶಂಖನಾದ' ಸಿನಿಮಾದಲ್ಲಿ ನಾಯಕ ಪಾತ್ರದಲ್ಲಿ ನಟಿಸಿದ್ದ ಅರವಿಂದ್ ಅದೇ ಸಿನಿಮಾದ ಪಾತ್ರದ ಮೂಲಕ ಗಮನ ಸೆಳೆದಿದ್ದರು ಹಾಗಾಗಿಯೇ ಅವರ ಹೆಸರಿನ ಜೊತೆಗೆ 'ಶಂಖನಾದ' ಹೆಸರು ಸಹ ಸೇರಿಕೊಂಡಿತ್ತು. ಕನ್ನಡ ಸಿನಿಮಾರಂಗದಲ್ಲಿ ಅವರು ಶಂಖನಾದ ಅರವಿಂದ್ ಎಂದೇ ಜನಪ್ರಿಯರಾಗಿದ್ದರು.
ಅರವಿಂದ್ ಅವರಿಗೆ ಇತ್ತೀಚೆಗೆ ಅವಕಾಶಗಳು ತೀವ್ರ ಕಡಿಮೆ ಆಗಿತ್ತು. ಅರವಿಂದ್ ಅವರ ಮಕ್ಕಳು ಸಹ ಕಲಾವಿದರಾಗಿದ್ದು ಟಿವಿಗಳ ರಿಯಾಲಿಟಿ ಶೋಗಳಲ್ಲಿ ಹಾಡುವುದು, ಪಕ್ಕ ವಾದ್ಯ ನುಡಿಸುವುದು ಮಾಡುತ್ತಿದ್ದಾರೆ. ಕಳೆದ ವರ್ಷ ಕೊರೊನಾ ಸಮಯದಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವುದಾಗಿ ಕೆಲವು ತಿಂಗಳ ಹಿಂದಷ್ಟೆ ಹೇಳಿಕೊಂಡಿದ್ದರು.

ಸಾರಾ ಅಬೂಬಕ್ಕರ್ ಅವರ ಕೃತಿ 'ವಜ್ರಗಳು'ನ ಸಿನಿಮಾ ರೂಪ 'ಸಾರಾ ವಜ್ರ'ದಲ್ಲಿ ಮುಸ್ಲಿಂ ಪಾತ್ರದಲ್ಲಿ ನಟಿಸಿದ್ದಾರೆ. ಇದೇ ಅವರು ನಟಿಸಿದ ಕೊನೆಯ ಸಿನಿಮಾ. ಆ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ. ಈ ಸಿನಿಮಾದಲ್ಲಿ ಅನುಪ್ರಭಾಕರ್ ಹಾಗೂ ರೆಹಮಾನ್ ನಟಿಸಿದ್ದಾರೆ. ಸಿನಿಮಾವನ್ನು ಆರ್ನಾ ಸಾಧ್ಯ ನಿರ್ದೇಶನ ಮಾಡಿದ್ದಾರೆ.
(Kannada Copy of Filmbeat Kannada)
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm