ಬ್ರೇಕಿಂಗ್ ನ್ಯೂಸ್
20-05-21 05:11 pm Filmbeat : Shruthi K ಸಿನಿಮಾ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತನ್ನ ಟ್ರಸ್ಟ್ ಮೂಲಕ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದ್ದಾರೆ. ಕೊರೊನಾ ಎರಡನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಯಲ್ಲಿ ಕಿಚ್ಚನ ಟ್ರಸ್ಟ್ ಸಾಕಷ್ಟು ಮಾನವೀಯ ಕೆಲಸ ಮಾಡುತ್ತಿದೆ. ಲಾಕ್ ಡೌನ್ ನಿಂದ ಕೆಲಸವಿಲ್ಲದೆ ಪರದಾಡುತ್ತಿರುವ ಸಿನಿಮಾ ಕಾರ್ಮಿಕರ ನೆರವಿಗೆ ನಿಂತಿರುವ ಸುದೀಪ್, ಇದೀಗ ಹಿರಿಯ ಕಲಾವಿದರ ಸಹಾಯಕ್ಕೂ ಧಾವಿಸಿದ್ದಾರೆ.
ಹಿರಿಯ ಕಲಾವಿದರ ಯೋಗಕ್ಷೇಮ ವಿಚಾರಿಸಲು ಸುದೀಪ್ ಒಂದು ತಂಡ ರಚಿಸಿದ್ದು, ಆ ತಂಡದ ಮೂಲಕ ಹಿರಿಯ ಕಲಾವಿದರ ಯೋಗಕ್ಷೇಮ ವಿಚಾರಿಸುತ್ತಿದ್ದಾರೆ. ಅವರಿಗೆ ಅಗತ್ಯ ವಸ್ತುಗಳನ್ನು ತಲುಪಿಸಿ ಅದರ ಜೊತೆಗೆ ಒಂದು ಪ್ರೀತಿಯ ಪತ್ರವನ್ನು ಬರೆದು ಕಳುಹಿಸುತ್ತಿದ್ದಾರೆ.
'ನನ್ನ ಕುಟುಂಬದ ಹಿರಿಯರು ನೀವು. ನೀವೆಲ್ಲ ಹೇಗಿದ್ದೀರಿ? ಪ್ರೀತಿಯಿಂದ ನಿಮ್ಮ ಕಿಚ್ಚ ಸುದೀಪ್' ಎಂದು ಪತ್ರದಲ್ಲಿ ಬರೆಯಲಾಗಿದೆ. ನೂರಕ್ಕೂ ಹಿರಿಯ ಕಲಾವಿದರಿಗೆ ಅಗತ್ಯ ವಸ್ತು ಜೊತೆಗೆ ಕಿಚ್ಚನ ಯೋಗಕ್ಷೇಮದ ಪತ್ರ ತಲುಪಿದೆ. ಹಿರಿಯ ಕಲಾವಿದರಾದ ಗಿರಿಜಾ ಲೋಕೇಶ್, ಉಮೇಶ್ ಬಹುತೇಕ ಹಿರಿಯ ಕಲಾವಿದರ ಯೋಗಕ್ಷೇಮ ವಿಚಾರಿಸಿಕೊಂಡಿದ್ದಾರೆ.
ಕಷ್ಟ ಎಂದವರಿಗೆ ಸಹಾಯ ಹಸ್ತ ಚಾಚುವ ಕಿಚ್ಚ ಅದೆಷ್ಟೋ ಹಸಿದ ಜೀವಗಳ ಹಸಿವು ನೀಗಿಸಿದ್ದಾರೆ. ಚಿಕಿತ್ಸೆಗೆ ಹಣವಿಲ್ಲದೆ ಪರದಾಡುತ್ತಿದ ಅನೇಕರ ಮಂದಿಯ ಚಿಕಿತ್ಸೆಗೆ ನೆರವಾಗಿದ್ದಾರೆ. ಇತ್ತೀಚಿಗಷ್ಟೆ ಬಿಗ್ ಬಾಸ್ ಸ್ಪರ್ಧಿ ಮತ್ತು ನಟಿ ಸೋನು ಪಾಟೀಲ್ ತಾಯಿಯ ಆಸ್ಪತ್ರೆಗೆ ಬಿಲ್ ಪಾವತಿಸಿದ್ದಾರೆ. ಅಭಿಮಾನಿ ಸೌಮ್ಯಾ ಅವರ ಪತಿಗೆ ಸಹಾಯ ಹಸ್ತ ಚಾಚಿದ್ದಾರೆ. ಕಿಚ್ಚನ ಸಹಾಯ ನೆನೆದು ಅನೇಕರು ವಿಡಿಯೋ ಮೂಲಕ ಧನ್ಯವಾದ ಹೇಳುತ್ತಿದ್ದಾರೆ. ಭಾವುಕರಾಗಿ ಕಾಣ್ಣೀರಾಕುತ್ತಿದ್ದಾರೆ. ಕೇವಲ ಕರ್ನಾಟಕ ಮಾತ್ರವಲ್ಲದೆ ಇತ್ತೀಚಿಗೆ ಸುದೀಪ್ ಚಾರಿಟೇಬಲ್ ಸೊಸೈಟಿ ಪುಣೆ ಮೂಲದ ವ್ಯಕ್ತಿಯ ಸಹಾಯಕ್ಕೆ ನಿಂತಿದ್ದಾರೆ. ಲಾಕ್ ಡೌನಿ ನಿಂದ ಕೆಲಸವಿಲ್ಲದೆ ಊಟಕ್ಕೂ ಪರದಾಡುತ್ತಿದ್ದ ಗುಡ್ಡ ಪಾಲ್ ಎನ್ನುವ ವ್ಯಕ್ತಿ ಸುದೀಪ್ ಚಾರಿಟೇಬಲ್ ಬಗ್ಗೆ ತಿಳಿದುಕೊಂಡು ಸಂಪರ್ಕ ಮಾಡಿದ್ದಾರೆ. ಬಳಿಕ ಸುದೀಪ್ ಟ್ರಸ್ಟ್ ಅಗತ್ಯ ವಸ್ತುಗಳನ್ನು ಕಳುಹಿಸಿಕೊಟ್ಟಿದ್ದಾರೆ.
(Kannada Copy of film beat Kannada)
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm