ಚಿತ್ರರಂಗದಿಂದ ಮುಖ್ಯಮಂತ್ರಿ ಯಡಿಯೂರಪ್ಪಗೆ ಮತ್ತೊಂದು ಮನವಿ

25-05-21 11:36 am       Filmbeat : Bharath Kumar K   ಸಿನಿಮಾ

ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮತ್ತು ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ಸಿನಿಮಾ ರಂಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ ಮಾಡಿದರು.

ಕೊರೊನಾ ವೈರಸ್‌ನಿಂದ ಸಿನಿಮಾರಂಗ ಸಂಕಷ್ಟದಲ್ಲಿದೆ, ಸರ್ಕಾರದಿಂದ ಸೂಕ್ತ ಪರಿಹಾರ ಕೊಡಬೇಕು ಎಂದು ಅದಾಗಲೇ ಹಲವು ಮನವಿಗಳು ಮುಖ್ಯಮಂತ್ರಿಗೆ ಸಲ್ಲಿಕೆಯಾಗಿದೆ. ಇದೀಗ, ಮತ್ತೊಂದು ಹೊಸ ಮನವಿ ಸಿಎಂ ಕೈತಲುಪಿದೆ.

ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಮತ್ತು ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ಸಿನಿಮಾ ರಂಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ ಮಾಡಿದರು.

ಸಾರಾ ಗೋವಿಂದು-ತಾರಾ ಮನವಿ

ಶನಿವಾರವಷ್ಟೆ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಹಾಗೂ ಹಿರಿಯ ನಟಿ ತಾರಾ ಅನುರಾಧ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಚಿತ್ರರಂಗಕ್ಕೆ ಸ್ಪಂದಿಸುವಂತೆ ಮನವಿ ಮಾಡಿದ್ದರು. 

ಟೇಶಿ ವೆಂಕಟೇಶ್ ಮನವಿ

ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಟೇಶಿ ವೆಂಕಟೇಶ್ 'ನಿರ್ದೇಶಕ ಮತ್ತು ತಂತ್ರಜ್ಞರು ಸೇರಿದಂತೆ ಸಿನಿ ಕಾರ್ಮಿಕರಿಗೆ ನೆರವು ಘೋಷಿಸಬೇಕು' ಎಂದು ಪತ್ರದ ಮೂಲಕ ವಿನಂತಿಸಿದ್ದರು.

ಭಾಮ ಹರೀಶ್, ಜೆಕೆ ಮನವಿ

ಅದಕ್ಕೂ ಮುಂಚೆ ವಾಣಿಜ್ಯ ಮಂಡಳಿಯ ಮಾಜಿ ಕಾಯದರ್ಶಿ ಭಾಮ ಹರೀಶ್ ಮತ್ತು ನಟ ಕಾರ್ತಿಕ್ ಜಯರಾಂ ಸಹ ಯಡಿಯೂರಪ್ಪರನ್ನು ಭೇಟಿ ಮಾಡಿ ಚಿತ್ರರಂಗಕ್ಕೆ ಸ್ಪಂದಿಸುವಂತೆ ಕೋರಿದ್ದರು.

(Kannada Copy of  Film Beat Kannada)