ಬ್ರೇಕಿಂಗ್ ನ್ಯೂಸ್
25-05-21 02:28 pm Filmbeat : Bharath Kumar K ಸಿನಿಮಾ
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾ ಕ್ಷೇತ್ರದಲ್ಲಿ ದಶಕಗಳಿಂದಲೂ ತೊಡಗಿಕೊಂಡಿದ್ದ ಕನ್ನಡದ ಹಿರಿಯ ಕಲಾವಿದ ಬಿಎಂ ಕೃಷ್ಣೇಗೌಡ ಸೋಮವಾರ ಕೊನೆಯುಸಿರೆಳೆದರು.
80 ವರ್ಷದ ಕೃಷ್ಣೇಗೌಡರಿಗೆ ಇತ್ತೀಚಿಗಷ್ಟೆ ಕೊರೊನಾ ಸೋಂಕು ತಗುಲಿತ್ತು. ನಂತರ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೃಷ್ಣೇಗೌಡರು ಈಗ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೃಷ್ಣೇಗೌಡರ ನಿಧನಕ್ಕೆ ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರು ಸಂತಾಪ ಸೂಚಿಸಿದ್ದಾರೆ. ''ಇತ್ತೀಚಿಗೆ ಐದಾರು ವರ್ಷಗಳವರೆಗೂ ನಾಟಕ ಮಾಡ್ತಿದ್ರು. ಆಮೇಲೆ ಆರೋಗ್ಯದ ಕೆಟ್ಟ ಕಾರಣ ನಟನೆ ನಿಲ್ಲಿಸಿದರು. ಬಹಳ ಸಜ್ಜನ ವ್ಯಕ್ತಿ ಕೊರೊನಾ ಸೋಂಕು ತಗುಲಿತ್ತು. ನಂತರ ಚೇತರಿಸಿಕೊಂಡಿದ್ದರು. ಆದ್ರೀಗ, ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. 40 ವರ್ಷದ ಗೆಳೆಯನನ್ನು ಕಳೆದಕೊಂಡಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ'' ಎಂದು ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದರು.

ಇತ್ತೀಚಿಗಷ್ಟೆ ಕೃಷ್ಣೇಗೌಡರ ಮಗ ಕೊರೊನಾದಿಂದ ಮೃತಪಟ್ಟಿದ್ದರು. ಮಗ ಸಾವನ್ನಪ್ಪಿದ ಕೆಲವೇ ದಿನದಲ್ಲಿ ಕೃಷ್ಣೇಗೌಡರು ವಿಧಿವಶರಾಗಿರುವುದು ಕುಟುಂಬ ಮತ್ತು ಆಪ್ತರಲ್ಲಿ ದುಃಖ ತಂದಿದೆ.
ಬಿಎಂ ಕೃಷ್ಣೇಗೌಡ ಕುರಿತು ಕರ್ನಾಟಕ ರಾಜ್ಯದ ಅಕೌಂಟೆಂಟ್ ಜನರಲ್ ಕಚೇರಿಯಲ್ಲಿ ಉದ್ಯೋಗದಲ್ಲಿದ್ದುಕೊಂಡು ರಂಗಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವರು. ಅಬ್ಬೂರು ಜಯತೀರ್ಥ, ಆರ್.ನಾಗೇಶ್, ಶ್ರೀನಿವಾಸ ಪ್ರಭು, ಡಾ.ಬಿ.ವಿ.ರಾಜಾರಾಂ ಮುಂತಾದ ನಿರ್ದೇಶಕರ ನಿರ್ದೇಶನದಲ್ಲಿ ಅಭಿನಯಿಸಿದ್ದರು.
ಮುಖ್ಯಮಂತ್ರಿ ನಾಟಕದಲ್ಲಿನ ಪಾತ್ರ ಇವರಿಗೆ ಖ್ಯಾತಿ ತಂದಿತ್ತು. ಚಿತ್ರರಂಗದಲ್ಲಿ ಪೋಷಕ ನಟನೆಗೆ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದಿದ್ದರು. ಕೃಷ್ಣೇಗೌಡರು ಕ್ರೀಡಾ ಕ್ಷೇತ್ರದಲ್ಲೂ ಹೆಸರು ಮಾಡಿದ್ದರು. ರಾಜ್ಯ ಮಟ್ಟದ ಉತ್ತಮ ವಾಲಿಬಾಲ್ ಪಟು ಆಗಿದ್ದವರು.
(Kannada Copy of film beat Kannada)
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm