ಬ್ರೇಕಿಂಗ್ ನ್ಯೂಸ್
25-05-21 02:28 pm Filmbeat : Bharath Kumar K ಸಿನಿಮಾ
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾ ಕ್ಷೇತ್ರದಲ್ಲಿ ದಶಕಗಳಿಂದಲೂ ತೊಡಗಿಕೊಂಡಿದ್ದ ಕನ್ನಡದ ಹಿರಿಯ ಕಲಾವಿದ ಬಿಎಂ ಕೃಷ್ಣೇಗೌಡ ಸೋಮವಾರ ಕೊನೆಯುಸಿರೆಳೆದರು.
80 ವರ್ಷದ ಕೃಷ್ಣೇಗೌಡರಿಗೆ ಇತ್ತೀಚಿಗಷ್ಟೆ ಕೊರೊನಾ ಸೋಂಕು ತಗುಲಿತ್ತು. ನಂತರ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೃಷ್ಣೇಗೌಡರು ಈಗ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೃಷ್ಣೇಗೌಡರ ನಿಧನಕ್ಕೆ ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರು ಸಂತಾಪ ಸೂಚಿಸಿದ್ದಾರೆ. ''ಇತ್ತೀಚಿಗೆ ಐದಾರು ವರ್ಷಗಳವರೆಗೂ ನಾಟಕ ಮಾಡ್ತಿದ್ರು. ಆಮೇಲೆ ಆರೋಗ್ಯದ ಕೆಟ್ಟ ಕಾರಣ ನಟನೆ ನಿಲ್ಲಿಸಿದರು. ಬಹಳ ಸಜ್ಜನ ವ್ಯಕ್ತಿ ಕೊರೊನಾ ಸೋಂಕು ತಗುಲಿತ್ತು. ನಂತರ ಚೇತರಿಸಿಕೊಂಡಿದ್ದರು. ಆದ್ರೀಗ, ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. 40 ವರ್ಷದ ಗೆಳೆಯನನ್ನು ಕಳೆದಕೊಂಡಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ'' ಎಂದು ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದರು.

ಇತ್ತೀಚಿಗಷ್ಟೆ ಕೃಷ್ಣೇಗೌಡರ ಮಗ ಕೊರೊನಾದಿಂದ ಮೃತಪಟ್ಟಿದ್ದರು. ಮಗ ಸಾವನ್ನಪ್ಪಿದ ಕೆಲವೇ ದಿನದಲ್ಲಿ ಕೃಷ್ಣೇಗೌಡರು ವಿಧಿವಶರಾಗಿರುವುದು ಕುಟುಂಬ ಮತ್ತು ಆಪ್ತರಲ್ಲಿ ದುಃಖ ತಂದಿದೆ.
ಬಿಎಂ ಕೃಷ್ಣೇಗೌಡ ಕುರಿತು ಕರ್ನಾಟಕ ರಾಜ್ಯದ ಅಕೌಂಟೆಂಟ್ ಜನರಲ್ ಕಚೇರಿಯಲ್ಲಿ ಉದ್ಯೋಗದಲ್ಲಿದ್ದುಕೊಂಡು ರಂಗಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವರು. ಅಬ್ಬೂರು ಜಯತೀರ್ಥ, ಆರ್.ನಾಗೇಶ್, ಶ್ರೀನಿವಾಸ ಪ್ರಭು, ಡಾ.ಬಿ.ವಿ.ರಾಜಾರಾಂ ಮುಂತಾದ ನಿರ್ದೇಶಕರ ನಿರ್ದೇಶನದಲ್ಲಿ ಅಭಿನಯಿಸಿದ್ದರು.
ಮುಖ್ಯಮಂತ್ರಿ ನಾಟಕದಲ್ಲಿನ ಪಾತ್ರ ಇವರಿಗೆ ಖ್ಯಾತಿ ತಂದಿತ್ತು. ಚಿತ್ರರಂಗದಲ್ಲಿ ಪೋಷಕ ನಟನೆಗೆ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದಿದ್ದರು. ಕೃಷ್ಣೇಗೌಡರು ಕ್ರೀಡಾ ಕ್ಷೇತ್ರದಲ್ಲೂ ಹೆಸರು ಮಾಡಿದ್ದರು. ರಾಜ್ಯ ಮಟ್ಟದ ಉತ್ತಮ ವಾಲಿಬಾಲ್ ಪಟು ಆಗಿದ್ದವರು.
(Kannada Copy of film beat Kannada)
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm