ಬ್ರೇಕಿಂಗ್ ನ್ಯೂಸ್
04-06-21 11:46 am Headline Karnataka News Network ಸಿನಿಮಾ
ಬೆಂಗಳೂರು, ಜೂನ್ 4: ಚಂದನವನದ ಒಂದೊಂದೇ ಹಿರಿಯ ಕೊಂಡಿಗಳು ಕಳಚಿಕೊಳ್ಳುತ್ತಿವೆ. ಕೆಲವೇ ದಿನಗಳ ಹಿಂದೆ 'ಶಂಖನಾದ' ಅರವಿಂದ್, ಕೃಷ್ಣೇ ಗೌಡ, ನಿರ್ಮಾಪಕ ರಾಮು ಮುಂತಾದವರು ಕೊನೆಯುಸಿರು ಎಳೆದಿದ್ದಾರೆ. ಇದೀಗ ಖ್ಯಾತ ಹಿರಿಯ ನಟಿ ಬಿ. ಜಯಾ ಅವರು ಕೂಡ ನಿಧನರಾಗಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಬಿ. ಜಯಾ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಗುರುವಾರ (ಜೂ.3) ನಿಧನರಾಗಿದ್ದಾರೆ. ಅವರು ಒಂದು ತಿಂಗಳ ಹಿಂದೆ ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿದ್ದರು ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ, ಕೊನೆಯುಸಿರೆಳೆದಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.
ಸುಮಾರು 6 ದಶಕಗಳಿಗೂ ಅಧಿಕ ಸಮಯ ಕನ್ನಡ ಚಿತ್ರರಂಗದಲ್ಲಿ ಪೋಷಕ ನಟಿಯಾಗಿ ಜಯಾ ಗುರುತಿಸಿಕೊಂಡಿದ್ದರು. ಅದರಲ್ಲೂ ಮುಖ್ಯವಾಗಿ ಕನ್ನಡ ಚಿತ್ರರಂಗದ ಮೊದಲ ತಲೆಮಾರಿನ ಹಾಸ್ಯನಟಿ ಎಂದು ಜಯಾ ಜನಪ್ರಿಯರಾಗಿದ್ದರು. ಮೂರು ತಲೆಮಾರಿನ ನಟ, ನಟಿಯರೊಂದಿಗೆ ಅಭಿನಯಿಸಿರುವ ಹೆಗ್ಗಳಿಕೆ ಅವರದು. ಹಾಸ್ಯ ದಿಗ್ಗಜರಾದ ನರಸಿಂಹರಾಜು, ದ್ವಾರಕೀಶ್ ಮುಂತಾದವರೊಂದಿಗೆ ಜಯಾ ನಟಿಸಿದ ಹಾಸ್ಯ ದೃಶ್ಯಗಳು ಇಂದಿಗೂ ಜನಪ್ರಿಯ. 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅವರು ರಂಗಭೂಮಿ, ಕಿರುತೆರೆಯಲ್ಲೂ ಅವರು ಬಹಳ ಸಕ್ರಿಯರಾಗಿದ್ದರು. ಅವರ ನಿಧನಕ್ಕೆ ಚಿತ್ರರಂಗ ಮತ್ತು ಸಿನಿಪ್ರಿಯರು ಸಂತಾಪ ಸೂಚಿಸಿದ್ದಾರೆ.

1958ರಲ್ಲಿ ತೆರೆಕಂಡ 'ಭಕ್ತ ಪ್ರಹ್ಲಾದ' ಸಿನಿಮಾ ಜಯಾ ಅವರು ಚೊಚ್ಚಲ ಸಿನಿಮಾ. ಡಾ. ರಾಜ್ಕುಮಾರ್ ಅವರ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ಕೀರ್ತಿ ಅವರದ್ದು. ಆಗಿನ ಡಾ.ರಾಜ್ ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್ ಸೇರಿದಂತೆ ಈಗಿನ ಯುವ ಪೀಳಿಗೆಯ ನಟರೊಂದಿಗೂ ಜಯಾ ನಟಿಸಿರುವುದು ವಿಶೇಷ.
ಅಂಬರೀಷ್ ನಟನೆಯ 'ಗೌಡ್ರು' ಚಿತ್ರದ ಅಭಿನಯಕ್ಕಾಗಿ ಅವರು ಅತ್ಯುತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿಗೆ ಪಾತ್ರವಾಗಿದ್ದರು. 'ದೈವಲೀಲೆ', 'ವಿಧಿ ವಿಲಾಸ', 'ಬೆಳ್ಳಿಮೋಡ', 'ಚಿನ್ನದ ಗೊಂಬೆ', 'ಪ್ರತಿಜ್ಞೆ', 'ಮಹದೇಶ್ವರ ಪೂಜಾಫಲ', 'ನ್ಯಾಯವೇ ದೇವರು', 'ಕುಲಗೌರವ', 'ಪೂರ್ಣಿಮಾ', 'ನಗುವ ಹೂವು', 'ಮುಕ್ತಿ', 'ಮಣ್ಣಿನ ಮಗ', 'ಶ್ರೀಕೃಷ್ಣ ದೇವರಾಯ', 'ಜೀವನ ಜೋಕಾಲಿ', 'ದೇವರು ಕೊಟ್ಟ ತಂಗಿ', 'ಗಂಧದ ಗುಡಿ', 'ಶುಭಮಂಗಳ', 'ದಾರಿ ತಪ್ಪಿದ ಮಗ', 'ಪ್ರೇಮದ ಕಾಣಿಕೆ' ಮುಂತಾದ ಸಿನಿಮಾಗಳಲ್ಲಿ ಜಯಾ ನಟಿಸಿದ್ದರು. 1983ರಲ್ಲಿ ಕುಮಾರೇಶ್ವರ ನಾಟಕ ಸಂಘ ಕಟ್ಟಿದ ಬಿ. ಜಯಾ ಅವರು 1992ರವರೆಗೆ ಕಂಪನಿ ನಡೆಸಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm