ಬ್ರೇಕಿಂಗ್ ನ್ಯೂಸ್
04-06-21 11:46 am Headline Karnataka News Network ಸಿನಿಮಾ
ಬೆಂಗಳೂರು, ಜೂನ್ 4: ಚಂದನವನದ ಒಂದೊಂದೇ ಹಿರಿಯ ಕೊಂಡಿಗಳು ಕಳಚಿಕೊಳ್ಳುತ್ತಿವೆ. ಕೆಲವೇ ದಿನಗಳ ಹಿಂದೆ 'ಶಂಖನಾದ' ಅರವಿಂದ್, ಕೃಷ್ಣೇ ಗೌಡ, ನಿರ್ಮಾಪಕ ರಾಮು ಮುಂತಾದವರು ಕೊನೆಯುಸಿರು ಎಳೆದಿದ್ದಾರೆ. ಇದೀಗ ಖ್ಯಾತ ಹಿರಿಯ ನಟಿ ಬಿ. ಜಯಾ ಅವರು ಕೂಡ ನಿಧನರಾಗಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಬಿ. ಜಯಾ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಗುರುವಾರ (ಜೂ.3) ನಿಧನರಾಗಿದ್ದಾರೆ. ಅವರು ಒಂದು ತಿಂಗಳ ಹಿಂದೆ ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿದ್ದರು ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ, ಕೊನೆಯುಸಿರೆಳೆದಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.
ಸುಮಾರು 6 ದಶಕಗಳಿಗೂ ಅಧಿಕ ಸಮಯ ಕನ್ನಡ ಚಿತ್ರರಂಗದಲ್ಲಿ ಪೋಷಕ ನಟಿಯಾಗಿ ಜಯಾ ಗುರುತಿಸಿಕೊಂಡಿದ್ದರು. ಅದರಲ್ಲೂ ಮುಖ್ಯವಾಗಿ ಕನ್ನಡ ಚಿತ್ರರಂಗದ ಮೊದಲ ತಲೆಮಾರಿನ ಹಾಸ್ಯನಟಿ ಎಂದು ಜಯಾ ಜನಪ್ರಿಯರಾಗಿದ್ದರು. ಮೂರು ತಲೆಮಾರಿನ ನಟ, ನಟಿಯರೊಂದಿಗೆ ಅಭಿನಯಿಸಿರುವ ಹೆಗ್ಗಳಿಕೆ ಅವರದು. ಹಾಸ್ಯ ದಿಗ್ಗಜರಾದ ನರಸಿಂಹರಾಜು, ದ್ವಾರಕೀಶ್ ಮುಂತಾದವರೊಂದಿಗೆ ಜಯಾ ನಟಿಸಿದ ಹಾಸ್ಯ ದೃಶ್ಯಗಳು ಇಂದಿಗೂ ಜನಪ್ರಿಯ. 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅವರು ರಂಗಭೂಮಿ, ಕಿರುತೆರೆಯಲ್ಲೂ ಅವರು ಬಹಳ ಸಕ್ರಿಯರಾಗಿದ್ದರು. ಅವರ ನಿಧನಕ್ಕೆ ಚಿತ್ರರಂಗ ಮತ್ತು ಸಿನಿಪ್ರಿಯರು ಸಂತಾಪ ಸೂಚಿಸಿದ್ದಾರೆ.

1958ರಲ್ಲಿ ತೆರೆಕಂಡ 'ಭಕ್ತ ಪ್ರಹ್ಲಾದ' ಸಿನಿಮಾ ಜಯಾ ಅವರು ಚೊಚ್ಚಲ ಸಿನಿಮಾ. ಡಾ. ರಾಜ್ಕುಮಾರ್ ಅವರ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ಕೀರ್ತಿ ಅವರದ್ದು. ಆಗಿನ ಡಾ.ರಾಜ್ ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ಅಂಬರೀಶ್, ವಿಷ್ಣುವರ್ಧನ್ ಸೇರಿದಂತೆ ಈಗಿನ ಯುವ ಪೀಳಿಗೆಯ ನಟರೊಂದಿಗೂ ಜಯಾ ನಟಿಸಿರುವುದು ವಿಶೇಷ.
ಅಂಬರೀಷ್ ನಟನೆಯ 'ಗೌಡ್ರು' ಚಿತ್ರದ ಅಭಿನಯಕ್ಕಾಗಿ ಅವರು ಅತ್ಯುತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿಗೆ ಪಾತ್ರವಾಗಿದ್ದರು. 'ದೈವಲೀಲೆ', 'ವಿಧಿ ವಿಲಾಸ', 'ಬೆಳ್ಳಿಮೋಡ', 'ಚಿನ್ನದ ಗೊಂಬೆ', 'ಪ್ರತಿಜ್ಞೆ', 'ಮಹದೇಶ್ವರ ಪೂಜಾಫಲ', 'ನ್ಯಾಯವೇ ದೇವರು', 'ಕುಲಗೌರವ', 'ಪೂರ್ಣಿಮಾ', 'ನಗುವ ಹೂವು', 'ಮುಕ್ತಿ', 'ಮಣ್ಣಿನ ಮಗ', 'ಶ್ರೀಕೃಷ್ಣ ದೇವರಾಯ', 'ಜೀವನ ಜೋಕಾಲಿ', 'ದೇವರು ಕೊಟ್ಟ ತಂಗಿ', 'ಗಂಧದ ಗುಡಿ', 'ಶುಭಮಂಗಳ', 'ದಾರಿ ತಪ್ಪಿದ ಮಗ', 'ಪ್ರೇಮದ ಕಾಣಿಕೆ' ಮುಂತಾದ ಸಿನಿಮಾಗಳಲ್ಲಿ ಜಯಾ ನಟಿಸಿದ್ದರು. 1983ರಲ್ಲಿ ಕುಮಾರೇಶ್ವರ ನಾಟಕ ಸಂಘ ಕಟ್ಟಿದ ಬಿ. ಜಯಾ ಅವರು 1992ರವರೆಗೆ ಕಂಪನಿ ನಡೆಸಿದರು.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm