ಬ್ರೇಕಿಂಗ್ ನ್ಯೂಸ್
14-06-21 12:36 pm Filmbeat : Bharath Kumar K ಸಿನಿಮಾ
ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಉಪಮುಖ್ಯಮಂತ್ರಿ ಡಾ ಅಶ್ವಥ್ ನಾರಾಯಣ ಭರಿಸುವುದಾಗಿ ಭರವಸೆ ನೀಡಿದ್ದಾರೆ ಎಂಬ ವಿಷಯ ತಿಳಿದು ಬಂದಿದೆ. ಇಂದು ಬೆಳಗ್ಗೆ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಖುದ್ದಾಗಿ ಕರೆ ಮಾಡಿ ವಿಜಯ್ ಅವರ ಯೋಗ-ಕ್ಷೇಮ ವಿಚಾರಿಸಿದ ಡಿಸಿಎಂ, ಅವರ ಚಿಕಿತ್ಸೆ ಆಗುವ ಸಂಪೂರ್ಣ ವೆಚ್ಚವನ್ನು ತಮ್ಮ ನೇತೃತ್ವದ ಡಾ. ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ಭರಿಸುತ್ತದೆ ಎಂದು ಭರವಸೆ ನೀಡಿದರು.
ವಿಜಯ್ ಅವರ ಚಿಕಿತ್ಸೆಗೆ ಸಂಬಂಧಿಸಿದಂತೆ ಅವರ ಸಂಬಂಧಿಗಳಿಂದಾಗಲೀ ಅಥವಾ ಬೇರೆ ಯಾರಿಂದಲೂ ಹಣ ಪಾವತಿಸಿಕೊಳ್ಳದಂತೆ ಅವರು ಆಸ್ಪತ್ರೆ ಆಡಳಿತ ವರ್ಗಕ್ಕೆ ಸೂಚಿಸಿದ್ದಾರೆ.

ಶನಿವಾರ ರಾತ್ರಿ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಂಚಾರಿ ವಿಜಯ್, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆದುಳಿನ ಬಲ ಭಾಗ ಹಾಗೂ ಬಲ ತೊಡೆಗೆ ಗಂಭೀರವಾದ ಗಾಯಗಳಾಗಿದ್ದು, ಶನಿವಾರ ರಾತ್ರಿಯೇ ಶಸ್ತ್ರ ಚಿಕಿತ್ಸೆ ಆಗಿದೆ. ಸದ್ಯಕ್ಕೆ ವಿಜಯ್ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ಬಂದಾಗಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಆಪರೇಷನ್ ಮುಗಿದ ಮೇಲೂ ಪ್ರಜ್ಞೆ ಬಂದಿಲ್ಲ. ಹಾಗಾಗಿ ಪ್ರಜ್ಞೆ ಬರುವವರೆಗೂ ಏನು ಹೇಳಲು ಸಾಧ್ಯವಿಲ್ಲ ಎಂದು ಅಪೋಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ ಅರುಣ್ ನಾಯಕ್ ಹೇಳಿದ್ದರು.
(Kannada Copy of Filmbeat Kannada)
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm