ಬ್ರೇಕಿಂಗ್ ನ್ಯೂಸ್
14-06-21 04:36 pm Source: Public Tv Kannada ಸಿನಿಮಾ
ಬೆಂಗಳೂರು, ಜೂನ್ 14: ಕಳೆದ ವರ್ಷ ಜೂನ್ 14ರಂದು ಬಾಲಿವುಡ್ನ ಪ್ರತಿಭಾನ್ವಿತ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಆತ್ಮಹತ್ಯೆಗೆ ಶರಣಾಗಿದ್ದ ಸುದ್ದಿ ಪ್ರಕಟವಾಗಿದ್ದರೆ, ಇಂದು ಸಂಚಾರಿ ವಿಜಯ್ ಅಪಘಾತಕ್ಕೀಡಾಗಿ ನಿಧನಹೊಂದಿದ್ದಾರೆ. ಈ ಮೂಲಕ ಇಬ್ಬರು ಪ್ರತಿಭಾನ್ವಿತ ನಟರು ಒಂದು ವರ್ಷದಲ್ಲಿ ಕಲಾ ಬದುಕಿನಿಂದ ದೂರವಾಗಿದ್ದಾರೆ.
ಕಾಕತಾಳೀಯವೆಂಬಂತೆ ಒಂದೇ ವರ್ಷದ ಅಂತರದಲ್ಲಿ ಇಬ್ಬರು ಪ್ರತಿಭಾನ್ವಿತ ನಟರು ಒಂದೇ ದಿನದಂದು ಮೃತಪಟ್ಟಿರುವುದರ ಬಗ್ಗೆ ಇದೀಗ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಸಂಚಾರಿ ವಿಜಯ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಸ್ಯಾಂಡಲ್ವುಡ್ ನಟ-ನಟಿಯರು, ರಾಜಕಾರಣಿಗಳು ಸೇರಿದಂತೆ ಸಾವಿರಾರು ಮಂದಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಕಂಬನಿ ಮಿಡಿದಿದ್ದಾರೆ.

ಸಂಚಾರಿ ವಿಜಯ್ ಅವರ ನಿಧನಕ್ಕೆ ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ ಆರೋಗ್ಯ ಸಚಿವರಾದ ಡಾ. ಸುಧಾಕರ್, ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಅಪರೂಪದ ಪ್ರತಿಭೆ ಜೊತೆಗೆ ಸಹೃದಯೀ ವ್ಯಕ್ತಿಯೂ ಆಗಿದ್ದ ಸಂಚಾರಿ ವಿಜಯ್ ಅವರ ನಿಧನದಿಂದ ಕನ್ನಡ ರಂಗಭೂಮಿ ಹಾಗೂ ಚಿತ್ರರಂಗ ಓರ್ವ ಭರವಸೆಯ ಯುವ ಕಲಾವಿದನನ್ನು ಕಳೆದುಕೊಂಡಿದೆ. ತಮ್ಮ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಅವರಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಬಾಲಿವುಡ್ನಲ್ಲಿ ಹೊಸ ಬಗೆಯ ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ್ದರು. ಖ್ಯಾತ ಕ್ರಿಕೆಟಿಗ ಎಂ.ಎಸ್ ಧೋನಿ ಅವರ ಬಯೋಪಿಕ್ನಲ್ಲಿ ಅದ್ಭುತ ನಟನೆಯ ಮೂಲಕ ಎಲ್ಲರ ಮನಗೆದ್ದಿದ್ದ ಸುಶಾಂತ್, 2020 ಜೂನ್ 14 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಈ ಇಬ್ಬರು ಚಿತ್ರರಂಗದಲ್ಲಿ ಇನ್ನಷ್ಟೂ ಸಾಧನೆ ಮಾಡುವ ಹೊತ್ತಿನಲ್ಲಿ ವಿಧಿಯ ಬರಹಕ್ಕೆ ಬಲಿಯಾಗಿದ್ದಾರೆ.
(Kannada Copy of Public TV)
ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಅಪರೂಪದ ಪ್ರತಿಭೆ ಜೊತೆಗೆ ಸಹೃದಯೀ ವ್ಯಕ್ತಿಯೂ ಆಗಿದ್ದ ಸಂಚಾರಿ ವಿಜಯ್ ಅವರ ನಿಧನದಿಂದ ಕನ್ನಡ ರಂಗಭೂಮಿ ಹಾಗೂ ಚಿತ್ರರಂಗ ಓರ್ವ ಭರವಸೆಯ ಯುವ ಕಲಾವಿದನನ್ನು ಕಳೆದುಕೊಂಡಿದೆ.
— Dr Sudhakar K (@mla_sudhakar) June 14, 2021
ತಮ್ಮ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಅವರಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. pic.twitter.com/e9jq0ytXe8
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm