ಬ್ರೇಕಿಂಗ್ ನ್ಯೂಸ್
14-06-21 04:36 pm Source: Public Tv Kannada ಸಿನಿಮಾ
ಬೆಂಗಳೂರು, ಜೂನ್ 14: ಕಳೆದ ವರ್ಷ ಜೂನ್ 14ರಂದು ಬಾಲಿವುಡ್ನ ಪ್ರತಿಭಾನ್ವಿತ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಆತ್ಮಹತ್ಯೆಗೆ ಶರಣಾಗಿದ್ದ ಸುದ್ದಿ ಪ್ರಕಟವಾಗಿದ್ದರೆ, ಇಂದು ಸಂಚಾರಿ ವಿಜಯ್ ಅಪಘಾತಕ್ಕೀಡಾಗಿ ನಿಧನಹೊಂದಿದ್ದಾರೆ. ಈ ಮೂಲಕ ಇಬ್ಬರು ಪ್ರತಿಭಾನ್ವಿತ ನಟರು ಒಂದು ವರ್ಷದಲ್ಲಿ ಕಲಾ ಬದುಕಿನಿಂದ ದೂರವಾಗಿದ್ದಾರೆ.
ಕಾಕತಾಳೀಯವೆಂಬಂತೆ ಒಂದೇ ವರ್ಷದ ಅಂತರದಲ್ಲಿ ಇಬ್ಬರು ಪ್ರತಿಭಾನ್ವಿತ ನಟರು ಒಂದೇ ದಿನದಂದು ಮೃತಪಟ್ಟಿರುವುದರ ಬಗ್ಗೆ ಇದೀಗ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಸಂಚಾರಿ ವಿಜಯ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಸ್ಯಾಂಡಲ್ವುಡ್ ನಟ-ನಟಿಯರು, ರಾಜಕಾರಣಿಗಳು ಸೇರಿದಂತೆ ಸಾವಿರಾರು ಮಂದಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಕಂಬನಿ ಮಿಡಿದಿದ್ದಾರೆ.

ಸಂಚಾರಿ ವಿಜಯ್ ಅವರ ನಿಧನಕ್ಕೆ ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ ಆರೋಗ್ಯ ಸಚಿವರಾದ ಡಾ. ಸುಧಾಕರ್, ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಅಪರೂಪದ ಪ್ರತಿಭೆ ಜೊತೆಗೆ ಸಹೃದಯೀ ವ್ಯಕ್ತಿಯೂ ಆಗಿದ್ದ ಸಂಚಾರಿ ವಿಜಯ್ ಅವರ ನಿಧನದಿಂದ ಕನ್ನಡ ರಂಗಭೂಮಿ ಹಾಗೂ ಚಿತ್ರರಂಗ ಓರ್ವ ಭರವಸೆಯ ಯುವ ಕಲಾವಿದನನ್ನು ಕಳೆದುಕೊಂಡಿದೆ. ತಮ್ಮ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಅವರಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಬಾಲಿವುಡ್ನಲ್ಲಿ ಹೊಸ ಬಗೆಯ ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ್ದರು. ಖ್ಯಾತ ಕ್ರಿಕೆಟಿಗ ಎಂ.ಎಸ್ ಧೋನಿ ಅವರ ಬಯೋಪಿಕ್ನಲ್ಲಿ ಅದ್ಭುತ ನಟನೆಯ ಮೂಲಕ ಎಲ್ಲರ ಮನಗೆದ್ದಿದ್ದ ಸುಶಾಂತ್, 2020 ಜೂನ್ 14 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಈ ಇಬ್ಬರು ಚಿತ್ರರಂಗದಲ್ಲಿ ಇನ್ನಷ್ಟೂ ಸಾಧನೆ ಮಾಡುವ ಹೊತ್ತಿನಲ್ಲಿ ವಿಧಿಯ ಬರಹಕ್ಕೆ ಬಲಿಯಾಗಿದ್ದಾರೆ.
(Kannada Copy of Public TV)
ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಅಪರೂಪದ ಪ್ರತಿಭೆ ಜೊತೆಗೆ ಸಹೃದಯೀ ವ್ಯಕ್ತಿಯೂ ಆಗಿದ್ದ ಸಂಚಾರಿ ವಿಜಯ್ ಅವರ ನಿಧನದಿಂದ ಕನ್ನಡ ರಂಗಭೂಮಿ ಹಾಗೂ ಚಿತ್ರರಂಗ ಓರ್ವ ಭರವಸೆಯ ಯುವ ಕಲಾವಿದನನ್ನು ಕಳೆದುಕೊಂಡಿದೆ.
— Dr Sudhakar K (@mla_sudhakar) June 14, 2021
ತಮ್ಮ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಅವರಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. pic.twitter.com/e9jq0ytXe8
07-01-26 08:00 pm
HK News Desk
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
07-01-26 09:37 pm
HK News Desk
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
07-01-26 05:15 pm
Mangalore Correspondent
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm