ಬ್ರೇಕಿಂಗ್ ನ್ಯೂಸ್
14-06-21 04:36 pm Source: Public Tv Kannada ಸಿನಿಮಾ
ಬೆಂಗಳೂರು, ಜೂನ್ 14: ಕಳೆದ ವರ್ಷ ಜೂನ್ 14ರಂದು ಬಾಲಿವುಡ್ನ ಪ್ರತಿಭಾನ್ವಿತ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಆತ್ಮಹತ್ಯೆಗೆ ಶರಣಾಗಿದ್ದ ಸುದ್ದಿ ಪ್ರಕಟವಾಗಿದ್ದರೆ, ಇಂದು ಸಂಚಾರಿ ವಿಜಯ್ ಅಪಘಾತಕ್ಕೀಡಾಗಿ ನಿಧನಹೊಂದಿದ್ದಾರೆ. ಈ ಮೂಲಕ ಇಬ್ಬರು ಪ್ರತಿಭಾನ್ವಿತ ನಟರು ಒಂದು ವರ್ಷದಲ್ಲಿ ಕಲಾ ಬದುಕಿನಿಂದ ದೂರವಾಗಿದ್ದಾರೆ.
ಕಾಕತಾಳೀಯವೆಂಬಂತೆ ಒಂದೇ ವರ್ಷದ ಅಂತರದಲ್ಲಿ ಇಬ್ಬರು ಪ್ರತಿಭಾನ್ವಿತ ನಟರು ಒಂದೇ ದಿನದಂದು ಮೃತಪಟ್ಟಿರುವುದರ ಬಗ್ಗೆ ಇದೀಗ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಸಂಚಾರಿ ವಿಜಯ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಸ್ಯಾಂಡಲ್ವುಡ್ ನಟ-ನಟಿಯರು, ರಾಜಕಾರಣಿಗಳು ಸೇರಿದಂತೆ ಸಾವಿರಾರು ಮಂದಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಕಂಬನಿ ಮಿಡಿದಿದ್ದಾರೆ.
ಸಂಚಾರಿ ವಿಜಯ್ ಅವರ ನಿಧನಕ್ಕೆ ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ ಆರೋಗ್ಯ ಸಚಿವರಾದ ಡಾ. ಸುಧಾಕರ್, ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಅಪರೂಪದ ಪ್ರತಿಭೆ ಜೊತೆಗೆ ಸಹೃದಯೀ ವ್ಯಕ್ತಿಯೂ ಆಗಿದ್ದ ಸಂಚಾರಿ ವಿಜಯ್ ಅವರ ನಿಧನದಿಂದ ಕನ್ನಡ ರಂಗಭೂಮಿ ಹಾಗೂ ಚಿತ್ರರಂಗ ಓರ್ವ ಭರವಸೆಯ ಯುವ ಕಲಾವಿದನನ್ನು ಕಳೆದುಕೊಂಡಿದೆ. ತಮ್ಮ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಅವರಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಬಾಲಿವುಡ್ನಲ್ಲಿ ಹೊಸ ಬಗೆಯ ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ್ದರು. ಖ್ಯಾತ ಕ್ರಿಕೆಟಿಗ ಎಂ.ಎಸ್ ಧೋನಿ ಅವರ ಬಯೋಪಿಕ್ನಲ್ಲಿ ಅದ್ಭುತ ನಟನೆಯ ಮೂಲಕ ಎಲ್ಲರ ಮನಗೆದ್ದಿದ್ದ ಸುಶಾಂತ್, 2020 ಜೂನ್ 14 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಈ ಇಬ್ಬರು ಚಿತ್ರರಂಗದಲ್ಲಿ ಇನ್ನಷ್ಟೂ ಸಾಧನೆ ಮಾಡುವ ಹೊತ್ತಿನಲ್ಲಿ ವಿಧಿಯ ಬರಹಕ್ಕೆ ಬಲಿಯಾಗಿದ್ದಾರೆ.
(Kannada Copy of Public TV)
ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಅಪರೂಪದ ಪ್ರತಿಭೆ ಜೊತೆಗೆ ಸಹೃದಯೀ ವ್ಯಕ್ತಿಯೂ ಆಗಿದ್ದ ಸಂಚಾರಿ ವಿಜಯ್ ಅವರ ನಿಧನದಿಂದ ಕನ್ನಡ ರಂಗಭೂಮಿ ಹಾಗೂ ಚಿತ್ರರಂಗ ಓರ್ವ ಭರವಸೆಯ ಯುವ ಕಲಾವಿದನನ್ನು ಕಳೆದುಕೊಂಡಿದೆ.
— Dr Sudhakar K (@mla_sudhakar) June 14, 2021
ತಮ್ಮ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಅವರಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. pic.twitter.com/e9jq0ytXe8
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm