ಬ್ರೇಕಿಂಗ್ ನ್ಯೂಸ್
14-06-21 04:36 pm Source: Public Tv Kannada ಸಿನಿಮಾ
ಬೆಂಗಳೂರು, ಜೂನ್ 14: ಕಳೆದ ವರ್ಷ ಜೂನ್ 14ರಂದು ಬಾಲಿವುಡ್ನ ಪ್ರತಿಭಾನ್ವಿತ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಆತ್ಮಹತ್ಯೆಗೆ ಶರಣಾಗಿದ್ದ ಸುದ್ದಿ ಪ್ರಕಟವಾಗಿದ್ದರೆ, ಇಂದು ಸಂಚಾರಿ ವಿಜಯ್ ಅಪಘಾತಕ್ಕೀಡಾಗಿ ನಿಧನಹೊಂದಿದ್ದಾರೆ. ಈ ಮೂಲಕ ಇಬ್ಬರು ಪ್ರತಿಭಾನ್ವಿತ ನಟರು ಒಂದು ವರ್ಷದಲ್ಲಿ ಕಲಾ ಬದುಕಿನಿಂದ ದೂರವಾಗಿದ್ದಾರೆ.
ಕಾಕತಾಳೀಯವೆಂಬಂತೆ ಒಂದೇ ವರ್ಷದ ಅಂತರದಲ್ಲಿ ಇಬ್ಬರು ಪ್ರತಿಭಾನ್ವಿತ ನಟರು ಒಂದೇ ದಿನದಂದು ಮೃತಪಟ್ಟಿರುವುದರ ಬಗ್ಗೆ ಇದೀಗ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಸಂಚಾರಿ ವಿಜಯ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಸ್ಯಾಂಡಲ್ವುಡ್ ನಟ-ನಟಿಯರು, ರಾಜಕಾರಣಿಗಳು ಸೇರಿದಂತೆ ಸಾವಿರಾರು ಮಂದಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಕಂಬನಿ ಮಿಡಿದಿದ್ದಾರೆ.

ಸಂಚಾರಿ ವಿಜಯ್ ಅವರ ನಿಧನಕ್ಕೆ ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ ಆರೋಗ್ಯ ಸಚಿವರಾದ ಡಾ. ಸುಧಾಕರ್, ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಅಪರೂಪದ ಪ್ರತಿಭೆ ಜೊತೆಗೆ ಸಹೃದಯೀ ವ್ಯಕ್ತಿಯೂ ಆಗಿದ್ದ ಸಂಚಾರಿ ವಿಜಯ್ ಅವರ ನಿಧನದಿಂದ ಕನ್ನಡ ರಂಗಭೂಮಿ ಹಾಗೂ ಚಿತ್ರರಂಗ ಓರ್ವ ಭರವಸೆಯ ಯುವ ಕಲಾವಿದನನ್ನು ಕಳೆದುಕೊಂಡಿದೆ. ತಮ್ಮ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಅವರಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಬಾಲಿವುಡ್ನಲ್ಲಿ ಹೊಸ ಬಗೆಯ ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ್ದರು. ಖ್ಯಾತ ಕ್ರಿಕೆಟಿಗ ಎಂ.ಎಸ್ ಧೋನಿ ಅವರ ಬಯೋಪಿಕ್ನಲ್ಲಿ ಅದ್ಭುತ ನಟನೆಯ ಮೂಲಕ ಎಲ್ಲರ ಮನಗೆದ್ದಿದ್ದ ಸುಶಾಂತ್, 2020 ಜೂನ್ 14 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಈ ಇಬ್ಬರು ಚಿತ್ರರಂಗದಲ್ಲಿ ಇನ್ನಷ್ಟೂ ಸಾಧನೆ ಮಾಡುವ ಹೊತ್ತಿನಲ್ಲಿ ವಿಧಿಯ ಬರಹಕ್ಕೆ ಬಲಿಯಾಗಿದ್ದಾರೆ.
(Kannada Copy of Public TV)
ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಅಪರೂಪದ ಪ್ರತಿಭೆ ಜೊತೆಗೆ ಸಹೃದಯೀ ವ್ಯಕ್ತಿಯೂ ಆಗಿದ್ದ ಸಂಚಾರಿ ವಿಜಯ್ ಅವರ ನಿಧನದಿಂದ ಕನ್ನಡ ರಂಗಭೂಮಿ ಹಾಗೂ ಚಿತ್ರರಂಗ ಓರ್ವ ಭರವಸೆಯ ಯುವ ಕಲಾವಿದನನ್ನು ಕಳೆದುಕೊಂಡಿದೆ.
— Dr Sudhakar K (@mla_sudhakar) June 14, 2021
ತಮ್ಮ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಅವರಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. pic.twitter.com/e9jq0ytXe8
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 09:52 pm
HK News Staffer
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm