ಬ್ರೇಕಿಂಗ್ ನ್ಯೂಸ್
14-06-21 04:36 pm Source: Public Tv Kannada ಸಿನಿಮಾ
ಬೆಂಗಳೂರು, ಜೂನ್ 14: ಕಳೆದ ವರ್ಷ ಜೂನ್ 14ರಂದು ಬಾಲಿವುಡ್ನ ಪ್ರತಿಭಾನ್ವಿತ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಆತ್ಮಹತ್ಯೆಗೆ ಶರಣಾಗಿದ್ದ ಸುದ್ದಿ ಪ್ರಕಟವಾಗಿದ್ದರೆ, ಇಂದು ಸಂಚಾರಿ ವಿಜಯ್ ಅಪಘಾತಕ್ಕೀಡಾಗಿ ನಿಧನಹೊಂದಿದ್ದಾರೆ. ಈ ಮೂಲಕ ಇಬ್ಬರು ಪ್ರತಿಭಾನ್ವಿತ ನಟರು ಒಂದು ವರ್ಷದಲ್ಲಿ ಕಲಾ ಬದುಕಿನಿಂದ ದೂರವಾಗಿದ್ದಾರೆ.
ಕಾಕತಾಳೀಯವೆಂಬಂತೆ ಒಂದೇ ವರ್ಷದ ಅಂತರದಲ್ಲಿ ಇಬ್ಬರು ಪ್ರತಿಭಾನ್ವಿತ ನಟರು ಒಂದೇ ದಿನದಂದು ಮೃತಪಟ್ಟಿರುವುದರ ಬಗ್ಗೆ ಇದೀಗ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಸಂಚಾರಿ ವಿಜಯ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಸ್ಯಾಂಡಲ್ವುಡ್ ನಟ-ನಟಿಯರು, ರಾಜಕಾರಣಿಗಳು ಸೇರಿದಂತೆ ಸಾವಿರಾರು ಮಂದಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಕಂಬನಿ ಮಿಡಿದಿದ್ದಾರೆ.

ಸಂಚಾರಿ ವಿಜಯ್ ಅವರ ನಿಧನಕ್ಕೆ ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ ಆರೋಗ್ಯ ಸಚಿವರಾದ ಡಾ. ಸುಧಾಕರ್, ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಅಪರೂಪದ ಪ್ರತಿಭೆ ಜೊತೆಗೆ ಸಹೃದಯೀ ವ್ಯಕ್ತಿಯೂ ಆಗಿದ್ದ ಸಂಚಾರಿ ವಿಜಯ್ ಅವರ ನಿಧನದಿಂದ ಕನ್ನಡ ರಂಗಭೂಮಿ ಹಾಗೂ ಚಿತ್ರರಂಗ ಓರ್ವ ಭರವಸೆಯ ಯುವ ಕಲಾವಿದನನ್ನು ಕಳೆದುಕೊಂಡಿದೆ. ತಮ್ಮ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಅವರಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಬಾಲಿವುಡ್ನಲ್ಲಿ ಹೊಸ ಬಗೆಯ ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ್ದರು. ಖ್ಯಾತ ಕ್ರಿಕೆಟಿಗ ಎಂ.ಎಸ್ ಧೋನಿ ಅವರ ಬಯೋಪಿಕ್ನಲ್ಲಿ ಅದ್ಭುತ ನಟನೆಯ ಮೂಲಕ ಎಲ್ಲರ ಮನಗೆದ್ದಿದ್ದ ಸುಶಾಂತ್, 2020 ಜೂನ್ 14 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಈ ಇಬ್ಬರು ಚಿತ್ರರಂಗದಲ್ಲಿ ಇನ್ನಷ್ಟೂ ಸಾಧನೆ ಮಾಡುವ ಹೊತ್ತಿನಲ್ಲಿ ವಿಧಿಯ ಬರಹಕ್ಕೆ ಬಲಿಯಾಗಿದ್ದಾರೆ.
(Kannada Copy of Public TV)
ರಾಷ್ಟ್ರ ಪ್ರಶಸ್ತಿ ವಿಜೇತ ನಟ, ಅಪರೂಪದ ಪ್ರತಿಭೆ ಜೊತೆಗೆ ಸಹೃದಯೀ ವ್ಯಕ್ತಿಯೂ ಆಗಿದ್ದ ಸಂಚಾರಿ ವಿಜಯ್ ಅವರ ನಿಧನದಿಂದ ಕನ್ನಡ ರಂಗಭೂಮಿ ಹಾಗೂ ಚಿತ್ರರಂಗ ಓರ್ವ ಭರವಸೆಯ ಯುವ ಕಲಾವಿದನನ್ನು ಕಳೆದುಕೊಂಡಿದೆ.
— Dr Sudhakar K (@mla_sudhakar) June 14, 2021
ತಮ್ಮ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಅವರಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. pic.twitter.com/e9jq0ytXe8
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm