ಬ್ರೇಕಿಂಗ್ ನ್ಯೂಸ್
15-06-21 10:40 am Filmbeat : Bharath Kumar K ಸಿನಿಮಾ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆ 10 ಗಂಟೆವರೆಗೂ ಸಂಚಾರಿ ವಿಜಯ್ ಪಾರ್ಥಿವ ಶರೀರ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಲ್ಲಿಂದ ನೇರವಾಗಿ ಹುಟ್ಟೂರು ಪಂಚನಹಳ್ಳಿ ಗ್ರಾಮಕ್ಕೆ ವಿಜಯ್ ಪಾರ್ಥಿವ ಶರೀರ ತೆಗೆದುಕೊಂಡು ಹೋಗಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಸಂಚಾರಿ ವಿಜಯ್ ಪಾರ್ಥಿವ ಶರೀರ ಸಾಗಿಸಲು ಯೋಜಿಸಲಾಗಿದೆ. ತುಮಕೂರು, ಶಿರಾ ಫ್ಲೈ ಓವರ್ಗೂ ಮುಂಚೆ ಎಡಗಡೆ ಹುಳಿಯಾರ್ ಮಾರ್ಗವಾಗಿ ಪಂಚನಹಳ್ಳಿ ಗ್ರಾಮಕ್ಕೆ ತಲುಪಲು ನಿರ್ಧರಿಸಲಾಗಿದೆ ಎಂದು ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್ವಿ ದತ್ತಾ ಮಾಹಿತಿ ನೀಡಿದರು.
ಹುಟ್ಟೂರಿನಲ್ಲಿ ಸಂಚಾರಿ ವಿಜಯ್ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂಬ ಮಾಹಿತಿ ಹಿನ್ನೆಲೆ ಸಾವಿರಾರು ಜನರು ಅಲ್ಲಿ ಜಮಾಯಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಹುಟ್ಟೂರಿನಲ್ಲಿ ಆಪ್ತ ಸ್ನೇಹಿತರೊಬ್ಬರ ತೋಟದಲ್ಲಿ ಸಂಚಾರಿ ವಿಜಯ್ ಅಂತ್ಯ ಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ. ಈಗಾಗಲೇ ಅಂತ್ಯಕ್ರಿಯೆಗೆ ತಯಾರಿ ನಡೆಸಲಾಗಿದೆ. ಕೋವಿಡ್ ಲಾಕ್ಡೌನ್ ನಿಯಮದ ಹಿನ್ನೆಲೆ ಅಂತ್ಯಕ್ರಿಯೆ ವೇಳೆ 20 ಜನರಿಗೆ ಮಾತ್ರ ಅವಕಾಶ ಇದೆ. ಹೀಗಾಗಿ, ಜಿಲ್ಲಾಡಳಿತದ ಜೊತೆ ಮಾಜಿ ಶಾಸಕ ದತ್ತಾ ಸಂಪರ್ಕದಲ್ಲಿದ್ದಾರೆ.
ಅಂತ್ಯಕ್ರಿಯೆಗೂ ಮುನ್ನ ಪಂಚನಹಳ್ಳಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಬಳಿಕವಷ್ಟೇ ಅಂತಿಮ ವಿಧಿ ವಿಧಾನ ನೆರವೇರಿಸಲಾಗುವುದು.

38ನೇ ವರ್ಷದಲ್ಲಿ ತಮ್ಮ ನಟನೆ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸಂಚಾರಿ ವಿಜಯ್ 'ನಾನು ಅವನಲ್ಲ ಅವಳು' ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಕನ್ನಡ ಚಿತ್ರರಂಗಕ್ಕೆ ಹಮ್ಮೆಯ ವಿಚಾರವಾಗಿದ್ದ ಸಂಚಾರಿ ವಿಜಯ್ಗೆ ಸರ್ಕಾರಿ ಗೌರವ ಸಮೇತ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
(Kannada Copy of Filmbeat Kannada)
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm