ಬ್ರೇಕಿಂಗ್ ನ್ಯೂಸ್
15-06-21 10:40 am Filmbeat : Bharath Kumar K ಸಿನಿಮಾ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆ 10 ಗಂಟೆವರೆಗೂ ಸಂಚಾರಿ ವಿಜಯ್ ಪಾರ್ಥಿವ ಶರೀರ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಲ್ಲಿಂದ ನೇರವಾಗಿ ಹುಟ್ಟೂರು ಪಂಚನಹಳ್ಳಿ ಗ್ರಾಮಕ್ಕೆ ವಿಜಯ್ ಪಾರ್ಥಿವ ಶರೀರ ತೆಗೆದುಕೊಂಡು ಹೋಗಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಸಂಚಾರಿ ವಿಜಯ್ ಪಾರ್ಥಿವ ಶರೀರ ಸಾಗಿಸಲು ಯೋಜಿಸಲಾಗಿದೆ. ತುಮಕೂರು, ಶಿರಾ ಫ್ಲೈ ಓವರ್ಗೂ ಮುಂಚೆ ಎಡಗಡೆ ಹುಳಿಯಾರ್ ಮಾರ್ಗವಾಗಿ ಪಂಚನಹಳ್ಳಿ ಗ್ರಾಮಕ್ಕೆ ತಲುಪಲು ನಿರ್ಧರಿಸಲಾಗಿದೆ ಎಂದು ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್ವಿ ದತ್ತಾ ಮಾಹಿತಿ ನೀಡಿದರು.
ಹುಟ್ಟೂರಿನಲ್ಲಿ ಸಂಚಾರಿ ವಿಜಯ್ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂಬ ಮಾಹಿತಿ ಹಿನ್ನೆಲೆ ಸಾವಿರಾರು ಜನರು ಅಲ್ಲಿ ಜಮಾಯಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಹುಟ್ಟೂರಿನಲ್ಲಿ ಆಪ್ತ ಸ್ನೇಹಿತರೊಬ್ಬರ ತೋಟದಲ್ಲಿ ಸಂಚಾರಿ ವಿಜಯ್ ಅಂತ್ಯ ಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ. ಈಗಾಗಲೇ ಅಂತ್ಯಕ್ರಿಯೆಗೆ ತಯಾರಿ ನಡೆಸಲಾಗಿದೆ. ಕೋವಿಡ್ ಲಾಕ್ಡೌನ್ ನಿಯಮದ ಹಿನ್ನೆಲೆ ಅಂತ್ಯಕ್ರಿಯೆ ವೇಳೆ 20 ಜನರಿಗೆ ಮಾತ್ರ ಅವಕಾಶ ಇದೆ. ಹೀಗಾಗಿ, ಜಿಲ್ಲಾಡಳಿತದ ಜೊತೆ ಮಾಜಿ ಶಾಸಕ ದತ್ತಾ ಸಂಪರ್ಕದಲ್ಲಿದ್ದಾರೆ.
ಅಂತ್ಯಕ್ರಿಯೆಗೂ ಮುನ್ನ ಪಂಚನಹಳ್ಳಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಬಳಿಕವಷ್ಟೇ ಅಂತಿಮ ವಿಧಿ ವಿಧಾನ ನೆರವೇರಿಸಲಾಗುವುದು.

38ನೇ ವರ್ಷದಲ್ಲಿ ತಮ್ಮ ನಟನೆ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸಂಚಾರಿ ವಿಜಯ್ 'ನಾನು ಅವನಲ್ಲ ಅವಳು' ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಕನ್ನಡ ಚಿತ್ರರಂಗಕ್ಕೆ ಹಮ್ಮೆಯ ವಿಚಾರವಾಗಿದ್ದ ಸಂಚಾರಿ ವಿಜಯ್ಗೆ ಸರ್ಕಾರಿ ಗೌರವ ಸಮೇತ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
(Kannada Copy of Filmbeat Kannada)
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm