ಬ್ರೇಕಿಂಗ್ ನ್ಯೂಸ್
15-06-21 10:40 am Filmbeat : Bharath Kumar K ಸಿನಿಮಾ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆ 10 ಗಂಟೆವರೆಗೂ ಸಂಚಾರಿ ವಿಜಯ್ ಪಾರ್ಥಿವ ಶರೀರ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಲ್ಲಿಂದ ನೇರವಾಗಿ ಹುಟ್ಟೂರು ಪಂಚನಹಳ್ಳಿ ಗ್ರಾಮಕ್ಕೆ ವಿಜಯ್ ಪಾರ್ಥಿವ ಶರೀರ ತೆಗೆದುಕೊಂಡು ಹೋಗಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಸಂಚಾರಿ ವಿಜಯ್ ಪಾರ್ಥಿವ ಶರೀರ ಸಾಗಿಸಲು ಯೋಜಿಸಲಾಗಿದೆ. ತುಮಕೂರು, ಶಿರಾ ಫ್ಲೈ ಓವರ್ಗೂ ಮುಂಚೆ ಎಡಗಡೆ ಹುಳಿಯಾರ್ ಮಾರ್ಗವಾಗಿ ಪಂಚನಹಳ್ಳಿ ಗ್ರಾಮಕ್ಕೆ ತಲುಪಲು ನಿರ್ಧರಿಸಲಾಗಿದೆ ಎಂದು ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್ವಿ ದತ್ತಾ ಮಾಹಿತಿ ನೀಡಿದರು.
ಹುಟ್ಟೂರಿನಲ್ಲಿ ಸಂಚಾರಿ ವಿಜಯ್ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂಬ ಮಾಹಿತಿ ಹಿನ್ನೆಲೆ ಸಾವಿರಾರು ಜನರು ಅಲ್ಲಿ ಜಮಾಯಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಹುಟ್ಟೂರಿನಲ್ಲಿ ಆಪ್ತ ಸ್ನೇಹಿತರೊಬ್ಬರ ತೋಟದಲ್ಲಿ ಸಂಚಾರಿ ವಿಜಯ್ ಅಂತ್ಯ ಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ. ಈಗಾಗಲೇ ಅಂತ್ಯಕ್ರಿಯೆಗೆ ತಯಾರಿ ನಡೆಸಲಾಗಿದೆ. ಕೋವಿಡ್ ಲಾಕ್ಡೌನ್ ನಿಯಮದ ಹಿನ್ನೆಲೆ ಅಂತ್ಯಕ್ರಿಯೆ ವೇಳೆ 20 ಜನರಿಗೆ ಮಾತ್ರ ಅವಕಾಶ ಇದೆ. ಹೀಗಾಗಿ, ಜಿಲ್ಲಾಡಳಿತದ ಜೊತೆ ಮಾಜಿ ಶಾಸಕ ದತ್ತಾ ಸಂಪರ್ಕದಲ್ಲಿದ್ದಾರೆ.
ಅಂತ್ಯಕ್ರಿಯೆಗೂ ಮುನ್ನ ಪಂಚನಹಳ್ಳಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಬಳಿಕವಷ್ಟೇ ಅಂತಿಮ ವಿಧಿ ವಿಧಾನ ನೆರವೇರಿಸಲಾಗುವುದು.

38ನೇ ವರ್ಷದಲ್ಲಿ ತಮ್ಮ ನಟನೆ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸಂಚಾರಿ ವಿಜಯ್ 'ನಾನು ಅವನಲ್ಲ ಅವಳು' ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಕನ್ನಡ ಚಿತ್ರರಂಗಕ್ಕೆ ಹಮ್ಮೆಯ ವಿಚಾರವಾಗಿದ್ದ ಸಂಚಾರಿ ವಿಜಯ್ಗೆ ಸರ್ಕಾರಿ ಗೌರವ ಸಮೇತ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.
(Kannada Copy of Filmbeat Kannada)
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am